Homeಮುಖಪುಟಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

ಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

- Advertisement -
- Advertisement -

ಕೋವಿಡ್-19 ಬಿಕ್ಕಟ್ಟಿನ ಈ ಕಾಲಘಟ್ಟದಲ್ಲಿ ಅತೀವ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ಪರಿಹಾರ ಕಾರ್ಯಗಳಲ್ಲಿ ನಿರತರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರನ್ನು ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ವರ್ಗಾವಣೆ ಮಾಡಿರುವುದು ತೀರಾ ಆಘಾತಕಾರಿ ಎಂದು ಸ್ವರಾಜ್‌ ಇಂಡಿಯಾ ಪಕ್ಷ ಖಂಡಿಸಿದೆ.

ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನೂ ಒಳಗೊಂಡು ಸಂಕಷ್ಟದಲ್ಲಿದ್ದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲಿಕ್ಕಾಗಿ ಸ್ವಯಂಸೇವಕರು ಹಾಗೂ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ಸಂತ್ರಸ್ತರನ್ನು ತಲುಪಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಮಣಿವಣ್ಣನ್ ಅವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಇಂಥ ಬಿಕ್ಕಟ್ಟಿನ ನಡುವೆ, ಅವರನ್ನು ವರ್ಗಾವಣೆ ಮಾಡಿರುವುದರಿಂದ ಪರಿಹಾರ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿ, ಪರಿಣಾಮವಾಗಿ ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಲಕ್ಷಾಂತರ ಕೂಲಿಕಾರ್ಮಿಕರ ಬವಣೆ ಮತ್ತಷ್ಟು ಹೆಚ್ಚಾಗಲಿದೆ. ಹೀಗಿದ್ದರೂ, ರಾಜಕೀಯ ಕಾರಣಗಳಿಗಾಗಿ ಮಣಿವಣ್ಣನ್ ಅವರಿಗೆ ಮುಂದಿನ ಹುದ್ದೆಯನ್ನೂ ನಿಗದಿ ಮಾಡದೆ ಏಕಾಏಕಿ ಎತ್ತಂಗಡಿ ಮಾಡಿದ್ದನ್ನು ಸ್ವರಾಜ್ ಇಂಡಿಯಾದ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ವರ್ಗಾವಣೆ ರಾಜಕೀಯದ ಹಿನ್ನೆಯಲ್ಲಿ ನಾವು ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾ ಕೆಲ ಪ್ರಶ್ನೆಗಳನ್ನು ಕೇಳಿದೆ.
1) ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಮಣಿವಣ್ಣನ್ ವಿರೋಧಿಸಿದ ಕಾರಣಕ್ಕಾಗಿ ಈ ವರ್ಗಾವಣೆ ಮಾಡಲಾಗಿದೆಯೆ?

2) ಕೋವಿಡ್-19 ಪರಿಹಾರದ ದಿನಸಿ ಪದಾರ್ಥಗಳ ಕಿಟ್‍ಗಳನ್ನು ಇಲಾಖೆಯ ಸಿಬ್ಬಂದಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಮೂಲಕ ವಿತರಣೆ ಮಾಡಲು ಕ್ರಮ ಕೈಗೊಂಡಿದ್ದ ಮಣಿವಣ್ಣನ್ ಅವರು, ಈ ವಿತರಣಾ ಕಾರ್ಯವನ್ನು ರಾಜಕಾರಣಿಗಳು ಹಾಗೂ ಎಂಎಲ್‍ಎಗಳ ಕೈಗೊಪ್ಪಿಸಲು ತಡೆಯಾಗಿದ್ದರು ಎಂಬ ಕಾರಣಕ್ಕಾಗಿ ವರ್ಗಾವಣೆ ಶಿಕ್ಷೆ ನೀಡಲಾಗಿದೆಯೆ?

3) ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯ ವೇತನವನ್ನು ಆಯಾ ಕಂಪನಿಗಳ ಮಾಲಿಕರೇ ನೀಡಬೇಕೆಂಬ ನಿಲುವನ್ನು ಹೊಂದಿದ್ದ ಕಾರಣಕ್ಕಾಗಿ ವರ್ಗಾವಣೆ ಮಾಡಿದ್ದೀರಾ?

4) ಕೋವಿಡ್-19 ಪರಿಹಾರ ಕಾರ್ಯಗಳಲ್ಲಿ ಪಾರದರ್ಶಕತೆ ತರಬೇಕೆಂಬ ಪ್ರಯತ್ನಕ್ಕೆ ವಿರುದ್ಧವಾದ ರಾಜಕೀಯ ಒತ್ತಡದ ಕಾರಣಕ್ಕಾಗಿ ನಡೆದಿದೆಯೆ?

ಕಾರಣ ಏನೇ ಇರಲಿ, ಈ ಬಿಕ್ಕಟ್ಟಿನ ಸಮಯದಲ್ಲಿ ಕ್ಷುಲ್ಲಕ ರಾಜಕೀಯಕ್ಕೆ ಅವಕಾಶ ಕೊಡದೆ ಲಕ್ಷಾಂತರ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಈ ಕೂಡಲೇ ಈ ವರ್ಗಾವಣೆ ಆದೇಶವನ್ನು ಹಿಂಪಡೆದು ಮಣಿವಣ್ಣನ್ ಅವರು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರೆಸಬೇಕೆಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಚಾಮರಸ ಮಾಲಿಪಾಟೀಲ್ ಮತ್ತು ಪ್ರಧಾನ ಕಾರ್ಯದರ್ಶಿಯಾದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: #BringBackCaptain : ಮಣಿವಣ್ಣನ್‌ ಪರ ಟ್ವಿಟ್‌ರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...