Homeಮುಖಪುಟಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

ಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

- Advertisement -
- Advertisement -

ಕೋವಿಡ್-19 ಬಿಕ್ಕಟ್ಟಿನ ಈ ಕಾಲಘಟ್ಟದಲ್ಲಿ ಅತೀವ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ಪರಿಹಾರ ಕಾರ್ಯಗಳಲ್ಲಿ ನಿರತರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರನ್ನು ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ವರ್ಗಾವಣೆ ಮಾಡಿರುವುದು ತೀರಾ ಆಘಾತಕಾರಿ ಎಂದು ಸ್ವರಾಜ್‌ ಇಂಡಿಯಾ ಪಕ್ಷ ಖಂಡಿಸಿದೆ.

ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನೂ ಒಳಗೊಂಡು ಸಂಕಷ್ಟದಲ್ಲಿದ್ದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲಿಕ್ಕಾಗಿ ಸ್ವಯಂಸೇವಕರು ಹಾಗೂ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ಸಂತ್ರಸ್ತರನ್ನು ತಲುಪಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಮಣಿವಣ್ಣನ್ ಅವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಇಂಥ ಬಿಕ್ಕಟ್ಟಿನ ನಡುವೆ, ಅವರನ್ನು ವರ್ಗಾವಣೆ ಮಾಡಿರುವುದರಿಂದ ಪರಿಹಾರ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿ, ಪರಿಣಾಮವಾಗಿ ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಲಕ್ಷಾಂತರ ಕೂಲಿಕಾರ್ಮಿಕರ ಬವಣೆ ಮತ್ತಷ್ಟು ಹೆಚ್ಚಾಗಲಿದೆ. ಹೀಗಿದ್ದರೂ, ರಾಜಕೀಯ ಕಾರಣಗಳಿಗಾಗಿ ಮಣಿವಣ್ಣನ್ ಅವರಿಗೆ ಮುಂದಿನ ಹುದ್ದೆಯನ್ನೂ ನಿಗದಿ ಮಾಡದೆ ಏಕಾಏಕಿ ಎತ್ತಂಗಡಿ ಮಾಡಿದ್ದನ್ನು ಸ್ವರಾಜ್ ಇಂಡಿಯಾದ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ವರ್ಗಾವಣೆ ರಾಜಕೀಯದ ಹಿನ್ನೆಯಲ್ಲಿ ನಾವು ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾ ಕೆಲ ಪ್ರಶ್ನೆಗಳನ್ನು ಕೇಳಿದೆ.
1) ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಮಣಿವಣ್ಣನ್ ವಿರೋಧಿಸಿದ ಕಾರಣಕ್ಕಾಗಿ ಈ ವರ್ಗಾವಣೆ ಮಾಡಲಾಗಿದೆಯೆ?

2) ಕೋವಿಡ್-19 ಪರಿಹಾರದ ದಿನಸಿ ಪದಾರ್ಥಗಳ ಕಿಟ್‍ಗಳನ್ನು ಇಲಾಖೆಯ ಸಿಬ್ಬಂದಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಮೂಲಕ ವಿತರಣೆ ಮಾಡಲು ಕ್ರಮ ಕೈಗೊಂಡಿದ್ದ ಮಣಿವಣ್ಣನ್ ಅವರು, ಈ ವಿತರಣಾ ಕಾರ್ಯವನ್ನು ರಾಜಕಾರಣಿಗಳು ಹಾಗೂ ಎಂಎಲ್‍ಎಗಳ ಕೈಗೊಪ್ಪಿಸಲು ತಡೆಯಾಗಿದ್ದರು ಎಂಬ ಕಾರಣಕ್ಕಾಗಿ ವರ್ಗಾವಣೆ ಶಿಕ್ಷೆ ನೀಡಲಾಗಿದೆಯೆ?

3) ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯ ವೇತನವನ್ನು ಆಯಾ ಕಂಪನಿಗಳ ಮಾಲಿಕರೇ ನೀಡಬೇಕೆಂಬ ನಿಲುವನ್ನು ಹೊಂದಿದ್ದ ಕಾರಣಕ್ಕಾಗಿ ವರ್ಗಾವಣೆ ಮಾಡಿದ್ದೀರಾ?

4) ಕೋವಿಡ್-19 ಪರಿಹಾರ ಕಾರ್ಯಗಳಲ್ಲಿ ಪಾರದರ್ಶಕತೆ ತರಬೇಕೆಂಬ ಪ್ರಯತ್ನಕ್ಕೆ ವಿರುದ್ಧವಾದ ರಾಜಕೀಯ ಒತ್ತಡದ ಕಾರಣಕ್ಕಾಗಿ ನಡೆದಿದೆಯೆ?

ಕಾರಣ ಏನೇ ಇರಲಿ, ಈ ಬಿಕ್ಕಟ್ಟಿನ ಸಮಯದಲ್ಲಿ ಕ್ಷುಲ್ಲಕ ರಾಜಕೀಯಕ್ಕೆ ಅವಕಾಶ ಕೊಡದೆ ಲಕ್ಷಾಂತರ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಈ ಕೂಡಲೇ ಈ ವರ್ಗಾವಣೆ ಆದೇಶವನ್ನು ಹಿಂಪಡೆದು ಮಣಿವಣ್ಣನ್ ಅವರು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರೆಸಬೇಕೆಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಚಾಮರಸ ಮಾಲಿಪಾಟೀಲ್ ಮತ್ತು ಪ್ರಧಾನ ಕಾರ್ಯದರ್ಶಿಯಾದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: #BringBackCaptain : ಮಣಿವಣ್ಣನ್‌ ಪರ ಟ್ವಿಟ್‌ರ್‌ನಲ್ಲಿ ಟ್ರೆಂಡಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...