Homeಮುಖಪುಟನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ಮಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಾಲಿವುಡ್ ನಟಿ ಕಂಗನಾ ರಣಾವತ್‌ ಸ್ಪರ್ಧಿಸುವ ಕುರಿತು ಚರ್ಚೆಗಳು ಎದ್ದಿದ್ದವು.

- Advertisement -
- Advertisement -

ಹಿಮಾಚಲ ಪ್ರದೇಶದ ಮೂರು ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ನಾಲ್ಕು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಬೇರಿ ಭಾರಿಸಿದೆ. ಮಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಾಲಿವುಡ್ ನಟಿ ಕಂಗನಾ ರಣಾವತ್‌ ಸ್ಪರ್ಧಿಸುವ ಕುರಿತು ಚರ್ಚೆಗಳು ಎದ್ದಿದ್ದವು. ಕೊನೆ ಕ್ಷಣದಲ್ಲಿ ಬಿಜೆಪಿಯು ಬೇರೆಯವರಿಗೆ ಟಿಕೆಟ್ ನೀಡಿದರೂ ಬಹಳಷ್ಟು ಜನ ಕಂಗನಾ ಹೆಸರಲ್ಲಿ ಮತ ಕೇಳಿದ್ದರು. ಆದರೆ ಆ ಕ್ಷೇತ್ರದಲ್ಲಿಯೂ ಬಿಜೆಪಿ ಸೋಲನ್ನು ಅನುಭವಿಸಿದೆ.

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಆ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಇದು ಆಡಳಿತರೂಢ ಬಿಜೆಪಿಗೆ ದೊಡ್ಡ ಹೊಡೆತವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿಮಾಚಲ ಪ್ರದೇಶ ಸಿಎಂ ಜೈರಾಂ ಠಾಕೂರ್, ಸೋಲನ್ನು ಸ್ವೀಕರಿಸುತ್ತೇನೆ, ನಾನೇ ಸೋಲಿನ ಹೊಣೆಯನ್ನು ಹೊತ್ತುಕೊಳ್ಳುತ್ತೇನೆ ಎಂದಿದ್ದಾರೆ.

ಇಂದು ಕಾಂಗ್ರೆಸ್ ಗೆದ್ದಿರುವುದರಿಂದ 2022ರ ಚುನಾವಣೆಯಲ್ಲಿಯೂ ಗೆಲ್ಲುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮಧ್ಯಂತರ ಚುನಾವಣೆಗಳಲ್ಲಿ ಸೋತ ಪಕ್ಷವು ಅಂತಿಮ ಚುನಾವಣೆಯಲ್ಲಿ ಗೆಲ್ಲುವುದನ್ನು ನಾವು ಆಗಾಗ್ಗೆ ನೋಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 4 ಲಕ್ಷ ಮತಗಳ ಅಂತರದಲ್ಲಿ ಸೋಲನ್ನು ಅನುಭವಿಸಿತ್ತು. ಬಿಜೆಪಿಯ ರಾಮ್ ಸ್ವರೂಪ್ ಶರ್ಮಾ ವಿಜಯಿಯಾಗಿದ್ದರು. ಆದರೆ ಅವರು 2021ರ ಮಾರ್ಚ್‌ನಲ್ಲಿ ನಿಧನ ಹೊಂದಿದ್ದರು. ಹಾಗಾಗಿ ಅಲ್ಲಿ ಕಾಂಗ್ರೆಸ್‌ನ ಮಾಜಿ ಸಿಎಂ ವೀರಭದ್ರ ಸಿಂಗ್‌ರವರ ಪತ್ನಿ ಪ್ರತಿಭಾ ಸಿಂಗ್ ಈ ಬಾರಿ ಕಣಕ್ಕಿಳಿದಿದ್ದರು. ಅವರು ಗೆಲುವು ಸಾಧಿಸಿದ್ದಾರೆ.

ಕಂಗನಾ ರಾಣಾವತ್ ಮಂಡಿ ಜಿಲ್ಲೆಯಲ್ಲಿಯೇ ಬೆಳೆದವರು. ಮುಂಬೈನಲ್ಲಿ ನೆಲೆಸಿದರೂ ಆಗಾಗ್ಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿರುತ್ತಾರೆ. ಬಿಜೆಪಿ ಪರವಾಗಿ ಹಲವಾರು ಬಾರಿ ಹೇಳಿಕೆ ನೀಡಿದ್ದರು.

ಮುಂಬೈನಲ್ಲಿ ಆಕೆಯ ಅನಧಿಕೃತ ಕಚೇರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಕಂಗನಾ ಮುಗಿಬಿದ್ದಿದ್ದರು. ಆಗ ಬಿಜೆಪಿ ಅವರ ಬೆಂಬಲಕ್ಕೆ ನಿಂತಿತ್ತು. ಆದರೆ ಎನ್‌ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆ ಕಂಗನಾ ವಿರುದ್ಧ ಯುದ್ಧವನ್ನೇ ಸಾರಿತ್ತು. ನಂತರ ಒಕ್ಕೂಟ ಸರ್ಕಾರವು ಕಂಗನಾಗೆ ಭಾರೀ ಭದ್ರತೆ ಒದಗಿಸಿತ್ತು.

ಕಂಗನಾ ಹೋರಾಟ ನಿರತ ರೈತರನ್ನು ಅವಮಾನಿಸಿ ಹೇಳಿಕೆ ನೀಡಿದ್ದರು. ಟ್ವಿಟರ್, ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು. ಹಾಗಾಗಿ ಅವರ ವಿರುದ್ಧ ಕರ್ನಾಟಕ ಸೇರಿದಂತೆ ಹಲವೆಡೆ ದೂರುಗಳು ದಾಖಲಾಗಿವೆ. ಟ್ವಿಟರ್ ಕಂಗನಾರನ್ನು ಬ್ಯಾನ್ ಮಾಡಿದೆ.

ಈಗ ಹಿಮಾಚಲ ಪ್ರದೇಶದ ಫತೇಪುರ್, ಆರ್ಕಿ ಮತ್ತು ಜುಬ್ಬಲ್ ಕೋತ್ಕೈ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ.


ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...