Homeಕಥೆಹೂಲಿಯೋ ಕೋರ್ಟಾಜ್ಹಾರ್‌ನ ನಾಲ್ಕು ಅತಿ ಸಣ್ಣ ಕಥೆಗಳು

ಹೂಲಿಯೋ ಕೋರ್ಟಾಜ್ಹಾರ್‌ನ ನಾಲ್ಕು ಅತಿ ಸಣ್ಣ ಕಥೆಗಳು

- Advertisement -
- Advertisement -

1. ದಿನಪತ್ರಿಕೆಯ ದಿನಚರಿ

ವ್ಯಕ್ತಿಯೊಬ್ಬ ದಿನಪತ್ರಿಕೆಯನ್ನು ಕೊಂಡುಕೊಂಡ ಮೇಲೆ ಅದನ್ನು ತನ್ನ ಕಂಕುಳಲ್ಲಿ ಸಿಕ್ಕಿಸಿಕೊಂಡು, ಬಸ್ ಏರುತ್ತಾನೆ. ಆ ದಿನಪತ್ರಿಕೆ ಕಂಕುಳಲ್ಲಿ ಇನ್ನೂ ಹಾಗೆ ಇರುವಾಗಲೇ, ಅರ್ಧ ಗಂಟೆಯ ನಂತರ ಆ ವ್ಯಕ್ತಿ ಬಸ್‌ನಿಂದ ಇಳಿಯುತ್ತಾನೆ.

ಪ್ಲಾಜ್ಹಾವೊಂದರ ಬೆಂಚ್ ಮೇಲೆ ಆ ದಿನಪತ್ರಿಕೆಯನ್ನು ಎಸೆದಾಗ ಅದು ಅದೇ ದಿನಪತ್ರಿಕೆಯಾಗಿ ಉಳಿಯದೆ, ಮುದ್ರಣಗೊಂಡಿರುವ ಹಾಳೆಗಳ ರಾಶಿಯಾಗುತ್ತದೆ.

ಅದು ಬೆಂಚಿನ ಮೇಲೆ ತಾನಾಗಿಯೇ ಕೇವಲ ಒಂದು ನಿಮಿಷ ಬಿದ್ದುಕೊಂಡಿದೆಯಷ್ಟೇ, ಯುವ ಬಾಲಕನೊಬ್ಬ ಅದನ್ನು ಕಂಡು, ಓದಿದಾಗ ಮುದ್ರಿತ ಹಾಳೆಗಳು ರಾಶಿ ಮತ್ತೆ ದಿನಪತ್ರಿಕೆಯಾಗಿ ಬದಲಾಗುತ್ತದೆ, ಮತ್ತೆ ಆತ ಅಲ್ಲೇ ಬಿಟ್ಟುಹೋದಮೇಲೆ ಅದು ಮುದ್ರಣಗೊಂಡ ಹಾಳೆಗಳ ರಾಶಿಯಾಗುತ್ತದೆ.

ಏಕಾಂಗಿಯಾಗಿ ಅದು ಬೆಂಚಿನ ಮೇಲೆ ಒಂದು ನಿಮಿಷ ಕೂತಿದೆಯಷ್ಟೇ, ಮುದುಕಿಯೊಬ್ಬಳು ಅದನ್ನು ಕಂಡು ಓದಿದಾಗ ಅದು ಮತ್ತೆ ಮುದ್ರಿತ ಹಾಳೆಗಳಿಂದ ದಿನಪತ್ರಿಕೆಯಾಗಿ ಬದಲಾಗುತ್ತದೆ, ಅಲ್ಲೇ ಬಿಟ್ಟು ಎದ್ದ ನಂತರ ಮುದ್ರಣಗೊಂಡ ಹಾಳೆಗಳ ರಾಶಿಯಾಗುತ್ತದೆ. ಆದರೆ ಆ ಮುದುಕಿ ಅದನ್ನು ಮನೆಗೆ ಎತ್ತುಕೊಂಡು ಹೊರಡುತ್ತಾಳೆ, ಹಾಗೆ ಮಾಡುವಾಗ ಮಾರ್ಗ ಮಧ್ಯದಲ್ಲಿ ಒಂದು ಕೆಜಿ ಬೀಟ್‌ರೂಟ್‌ಗಳನ್ನು ಕಟ್ಟಿಕೊಳ್ಳಲು ಅದನ್ನು ಬಳಸುತ್ತಾಳೆ. ಇಷ್ಟೆಲ್ಲಾ ರೂಪಾಂತರಗಳ ನಂತರವೂ ಆ ದಿನಪತ್ರಿಕೆಯ ಯೋಗ್ಯ ಉಪಯೋಗವಿಷ್ಟೇ.

2. ಪ್ರಗತಿ ಮತ್ತು ಪ್ರತಿಗಾಮಿತನ

ಜೇನುನೊಣಗಳು ತೂರಿಹೋಗಬಹುದಾದ ಗಾಜಿನ ಬಗೆಯನ್ನು ಅವರು ಅನ್ವೇಷಿಸಿದರು. ಜೇನುನೊಣ ಬಂದು ಗಾಜನ್ನು ತಲೆಯಿಂದ ನೂಕಿದರೆ ಮತ್ತೊಂದು ಬದಿಯಿಂದ ಹೊರಹೊಮ್ಮುತ್ತಿತ್ತು. ಇದು ಜೇನುನೊಣದ ಕಡೆಯಿಂದ ಅತೀವ ಸಂತಸಕ್ಕೆ ಕಾರಣವಾಗಿತ್ತು.

ಆ ಗಾಜಿನಲ್ಲಿ ಯಾವ ಗಿಮಿಕ್ ಬಳಸಲಾಗಿತ್ತು ಅಥವಾ ಅದು ಫೈಬ್ರಾಯ್ಡ್ ಆಗಿದ್ದರಿಂದ ಆ ಫೈಬರ್‌ಗಳಲ್ಲಿ ಫ್ಲೆಕ್ಸಿಬಲಿಟಿ ಏನಿತ್ತು ಎಂದು ತಿಳಿಯದೆ ಇದ್ದರಿಂದ, ಒಳಹೋದ ಜೇನುನೊಣ ಹೊರಬರಲಾರದು ಅಥವಾ ಹೊರಹೋಗಿದ್ದು ಒಳಬರಲಾರದ್ದು ಎಂಬುದನ್ನು ಪತ್ತೆಹಚ್ಚಿನ ಹಂಗೇರಿಯಾದ ವಿಜ್ಞಾನಿಯೊಬ್ಬರಿಂದ ಎಲ್ಲವೂ ಸರ್ವನಾಶವಾಯಿತು. ಆ ಕೂಡಲೇ, ಒಳಗೆ ಸಕ್ಕರೆ ಅಚ್ಚು ಇಟ್ಟು ಜೇನುನೊಣಗಳನ್ನು ಹಿಡಿಯುವ ಬೋನನ್ನು ಕಂಡುಹಿಡಿದರು ಮತ್ತು ಅದರಿಂದ ಆ ಜೇನುನೊಣಗಳು ನರಳಿ ಸತ್ತವು. ಇನ್ನೂ ಉತ್ತಮ ಅದೃಷ್ಟ ಇರಬೇಕಿದ್ದ ಈ ಪ್ರಾಣಿಗಳ ಜೊತೆಗೆ ಮೂಡಬಹುದಿದ್ದ ಸಂಭವನೀಯ ಭ್ರಾತೃತ್ವ ಕೊನೆಯಾದದ್ದು ಹೀಗೆ.

3. ಒಂದು ನಿಜವಾದ ಕಥೆ

ಒಬ್ಬ ಧೀಮಂತ ವ್ಯಕ್ತಿ ತನ್ನ ಕನ್ನಡಕವನ್ನು ನೆಲದ ಮೇಲೆ ಬೀಳಿಸಿದ್ದರಿಂದ, ಅದು ನೆಲದ ಟೈಲ್ಸ್‌ಗೆ ಬಡಿದಾಗ, ಒಂದು ಭಯಾನಕ ಸದ್ದನ್ನು ಮೂಡಿಸಿತು. ಅವನ್ನು ಎತ್ತಿಕೊಳ್ಳಲು ಆ ಧೀಮಂತ ವ್ಯಕ್ತಿ ಕೆಳಕ್ಕೆ ಬಗ್ಗಿದಾಗ, ಆ ಗಾಜು ಬಹಳ ದುಬಾರಿಯದ್ದಾದ್ದರಿಂದ, ಬಹಳ ದುಗುಡದಿಂದಿದ್ದ, ಆದರೆ ಯಾವುದೋ ಅದ್ಭುತ ಪವಾಡದಿಂದ ಅವುಗಳನ್ನು ತಾನು ಒಡೆದುಹಾಕಿಲ್ಲ ಎಂಬುದನ್ನು ಅತ್ಯಾಶ್ಚರ್ಯದಿಂದ ಕಂಡುಕೊಳ್ಳುತ್ತಾನೆ.

ಈಗ ಈ ಧೀಮಂತ ವ್ಯಕ್ತಿ ತನ್ನಷ್ಟಕ್ಕೇ ತುಂಬುಮನಸ್ಸಿನ ಧನ್ಯವಾದ ಹೇಳಿಕೊಂಡು ಮತ್ತು ಈಗ ನಡೆದಿರುವುದು ಒಂದು ಸ್ನೇಹಪೂರ್ವಕ ಎಚ್ಚರಿಕೆ ಎಂಬುದನ್ನು ಅರ್ಥಮಾಡಿಕೊಂಡು, ಕನ್ನಡಕದ ಅಂಗಡಿಗೆ ನಡೆದು, ಕನ್ನಡಕ್ಕಾಗಿ ಎರಡು ಹೊದಿಕೆಯ ಸಂರಕ್ಷಣೆ ಇರುವ ಚರ್ಮದ ಚೀಲವನ್ನು ಕೊಂಡು, ಮುನ್ನೆಚ್ಚರಿಕೆ ವಹಿಸುವುದು ಎಲ್ಲದ್ದಕ್ಕಿಂತ ಮುಖ್ಯವಾದದ್ದು ಎಂಬಿತ್ಯಾದಿಯಾಗಿ ಅಂದುಕೊಳ್ಳುತ್ತಾನೆ. ಒಂದು ಗಂಟೆಯ ನಂತರ ಆ ಚರ್ಮದ ಹೊದಿಕೆ ಇದ್ದ ಚೀಲ ಕೆಳಗೆ ಬೀಳುತ್ತದೆ, ಯಾವುದೇ ಆತಂಕವಿಲ್ಲದೆ ಅದನ್ನು ಎತ್ತಿಕೊಳ್ಳಲು ಬಗ್ಗಿದಾಗ, ಗಾಜು ಚೂರುಚೂರಾಗಿರುವುದನ್ನು ಕಂಡುಕೊಳ್ಳುತ್ತಾನೆ. ಸೃಷ್ಟಿಕರ್ತನ ವಿನ್ಯಾಸ ತರ್ಕಕ್ಕೆ ನಿಲುಕದ್ದು ಎಂದೂ ಮತ್ತು ವಾಸ್ತವದಲ್ಲಿ ಪವಾಡ ಈ ಕ್ಷಣವಷ್ಟೇ ನಡೆದಿದೆ ಎಂದು ಅರ್ಥಮಾಡಿಕೊಳ್ಳಲು ಈ ಧೀಮಂತ ವ್ಯಕ್ತಿಗೆ ತುಸು ಸಮಯ ಹಿಡಿಯುತ್ತದೆ.

4. ಕಚೇರಿಯಲ್ಲಿ

ಕೊನೆಯ ಕಾಮಾವನ್ನೂ ಬಿಡದಂತೆ ತನ್ನ ಕೆಲಸವನ್ನು ಗಂಭೀರವಾಗಿ ತೆಗೆದುಕೊಳ್ಳುವ ವ್ಯಕ್ತಿಗಳಲ್ಲಿ ನನ್ನ ನಂಬಿಕಸ್ಥ ವೈಯಕ್ತಿಕ ಕಾರ್ಯದರ್ಶಿಯೂ ಒಬ್ಬಳು. ಸರಣಿ ಆದೇಶಗಳನ್ನು ದಾಟಿ, ಬೇರೆಯವರ ಸ್ಥಾನಗಳನ್ನು ಅತಿಕ್ರಮಿಸಿ, ಹಾಲಿನ ಗ್ಲಾಸಿನಲ್ಲಿ ಬಿದ್ದಿರುವ ಒಂದು ಸಣ್ಣ ಕೂದಲನ್ನು ತೆಗೆಯಲು ಐದೂ ಬೆರಳನ್ನು ಅದ್ದುವುದೇನೆಂದರೆ ನಿಮಗೆ ತಿಳಿದಿರಬೇಕು.

ನನ್ನ ಕಚೇರಿಯಲ್ಲಿ ನನ್ನ ನಂಬಿಕಸ್ಥ ಕಾರ್ಯದರ್ಶಿ ಎಲ್ಲವನ್ನೂ ನೋಡಿಕೊಳ್ಳುತ್ತಾಳೆ ಅಥವಾ ನೋಡಿಕೊಳ್ಳಲು ಇಚ್ಛಿಸುತ್ತಾಳೆ. ನಮ್ಮನಮ್ಮ ಕಾರ್ಯವ್ಯಾಪ್ತಿಯ ಬಗ್ಗೆ ಸ್ನೇಹಪೂರ್ವಕ ಜಗಳಗಳನ್ನು ಮಾಡುತ್ತಾ, ನಾವು ದಿನವನ್ನ ಖುಷಿಯಿಂದ ಕಳೆಯುತ್ತೇವೆ, ನಾವುಗಳು ನಗುನಗುತ್ತಾ ಪರಸ್ಪರ ನಿರ್ಲಕ್ಷ್ಯ ಮಾಡಿಕೊಳ್ಳುತ್ತೇವೆ, ನಂತರ ಒಬ್ಬರ ಕೆಲಸದಲ್ಲಿ ಮತ್ತೊಬ್ಬರು ಮೂಗುತೂರಿಸುವುದಿದೆ, ಒಬ್ಬರಿಗೊಬ್ಬರು ರೇಗಿಸುವುದಿರುತ್ತದೆ, ಅದರಿಂದ ಅವಾಕ್ಕಾಗುವುದಿದೆ, ಆಕ್ರಮಿಸಿಕೊಳ್ಳುವುದು ಮತ್ತು ಅದರಿಂದ ಬಿಡುಗಡೆಗೊಳಿಸುವುದೂ ಕೂಡ. ಆದರೆ ಆಕೆಗೆ ಎಲ್ಲದ್ದಕ್ಕೂ ಸಮಯವಿದೆ, ಕಚೇರಿಯ ಮೇಲೆ ಸ್ವಾಮ್ಯ ಸಾಧಿಸುವುದಕ್ಕೆ ಪ್ರಯತ್ನಿಸುವದಷ್ಟೇ ಅಲ್ಲದೆ, ಚಾಕಚಕ್ಯತೆಯಿಂದ, ತನ್ನೆಲ್ಲಾ ಕೆಲಸಗಳನ್ನು ಪೂರೈಸುತ್ತಾಳೆ. ಉದಾಹರಣೆಗೆ ಪದಗಳನ್ನೇ ತೆಗೆದುಕೊಳ್ಳಿ, ಅವುಗಳನ್ನು ಉತ್ತಮಪಡಿಸುವುದು, ಕೈಬಿಡುವುದು, ಒಂದು ಕ್ರಮದಲ್ಲಿ ಜೋಡಿಸುವುದು, ಅವುಗಳನ್ನು ಚೆನ್ನಾಗಿ ನೋಡಿಕೊಂಡು ದಿನನಿತ್ಯದ ಕೆಲಗಳಿಗೆ ಸಿದ್ಧಪಡಿಸುವುದು, ಇವುಗಳನ್ನು ಮಾಡದ ದಿನವೇ ಇಲ್ಲ.

ಯಾವುದೋ ಒಂದು ಕಳಪೆ ವಿಶೇಷಣ ನನ್ನ ಬಾಯಿಂದ ಜಾರಿತು ಎಂದರೆ – ಅವೆಲ್ಲಾ ನನ್ನ ಕಾರ್ಯದರ್ಶಿಯ ಪರಿಧಿಯಾಚೆಗೇ ನಡೆಯುವುದು, ಮತ್ತು ಒಂದು ಮಟ್ಟದ ನಿರ್ದಿಷ್ಟತೆಯಲ್ಲಿ ಹೇಳುವುದಾದರೆ ನನ್ನ ಪರಿಧಿಯಾಚೆಗೇ – ಏಕೆಂದರೆ ಆಕೆ ಸದಾ ತನ್ನ ಪೆನ್ಸಿಲ್ ಜೊತೆಗೆ ಸಿದ್ಧರಿರುತ್ತಾಳೆ, ಆ ವಿಶೇಷಣವನ್ನು ಹಿಡಿದು ಕೊಲ್ಲುವುದಕ್ಕೆ. ಕೆಟ್ಟ ಚಟ ಅಥವಾ ಉದಾಸೀನದಿಂದಾಗಿ, ಆ ಪದ ಹೇಗೋ ಉಳಿದ ವಾಕ್ಯದ ಜೊತೆ ಕೂಡಿಕೊಂಡು ಬದುಕುವುದಕ್ಕೆ ಆಕೆ ಎಂದಿಗೂ ಬಿಡುವುದಿಲ್ಲ. ಆಕೆಯನ್ನು ತನ್ನಷ್ಟಕ್ಕೆ ಬಿಟ್ಟರೆ, ಆ ಕ್ಷಣದಲ್ಲಿ ಆಕೆಯ ಪಾಡಿಗೆ ಬಿಟ್ಟುಬಿಟ್ಟರೆ, ಹಾಳೆಗಳನ್ನು ಕೋಪದಲ್ಲಿ ಮುದುರಿ ಕಸದ ಡಬ್ಬಿಗೆ ಬಿಸಾಕುತ್ತಾಳೆ. ಅವಳದ್ದು ಎಷ್ಟು ದೃಢಮನಸ್ಸು ಎಂದರೆ, ನಾನು ವ್ಯವಸ್ಥಿತವಾದ ಬದುಕು ಬದುಕುತ್ತಿದ್ದೇನೆ ಮತ್ತು ಯಾವುದೇ ಮುನ್ಸೂಚನೆಯಿಲ್ಲದ ನಡೆ, ಆಕೆಯನ್ನು ಎದ್ದುಕೂರುವಂತೆ ಮಾಡಿ, ಎಲ್ಲಾ ಕಿವಿ, ಬಾಲ, ಮತ್ತು ಮೂಗು ನಿಮಿರುವಂತೆ ಮಾಡಿ, ಗಾಳಿಯಲ್ಲಿ ಕುರಿಯ ಕೊರಳಿನ ಗಂಟೆ ಅಲ್ಲಾಡುವಂತೆ ಮಾಡಿಬಿಡುತ್ತದೆ.

ನಾನು ಕೆಲವೊಮ್ಮೆ ಅಸತ್ಯದಿಂದ ನಡೆದುಕೊಳ್ಳಬೇಕಾಗುತ್ತದೆ, ಮತ್ತು ನಾನು ವರದಿಯೊಂದನ್ನು ಸಂಪಾದಿಸುತ್ತಿರುವ ನೆಪದಲ್ಲಿ, ಅವುಗಳ ತುಂಟಾಟದಿಂದ ಮತ್ತು ಅವುಗಳ ನೆಗೆತದಿಂದ ಮತ್ತು ಅವುಗಳ ಕೋಪಪೀಡಿತ ಜಗಳದಿಂದ ನನ್ನನ್ನು ಸಂತಸಪಡಿಸುವ ಪದಗಳನ್ನು, ಕಂದು ಮತ್ತು ಹಸಿರು ಬಣ್ಣದ ಕೆಲವು ಹಾಳೆಗಳಲ್ಲಿ ತುಂಬಬೇಕಾಗುತ್ತದೆ. ನನ್ನ ನಂಬಿಕಸ್ಥ ಕಾರ್ಯದರ್ಶಿ, ಅದರ ಮೇಲೆ ಎರಗಲು ಸಿದ್ಧಳಿದ್ದರೂ, ಬಹುತೇಕ ವಿಚಲಿತಳಾಗಿರುವ ಕಾರಣಕ್ಕೆ, ಕಚೇರಿಯನ್ನು ಒಪ್ಪಓರಣ ಮಾಡುತ್ತಿರುತ್ತಾಳೆ. ಉಲ್ಲಾಸದಾಯಕವಾಗಿ ಒಂದು ಪದ್ಯ ಮೂಡುತ್ತಿರುವ ಮಧ್ಯದಲ್ಲಿ, ತನಗೆ ಒಪ್ಪಿಗೆಯಿಲ್ಲ ಎಂಬಂತೆ ಉಗ್ರವಾಗಿ ಕಿರುಚುವುದು ನನಗೆ ಕೇಳಿಸತ್ತೆ, ಆಗ ನಿಷೇಧಿತ ಪದಗಳಗಾಗಿ ನನ್ನ ಪೆನ್ಸಿಲ್ ನಾಗಾಲೋಟದಿಂದ ಓಡುತ್ತೆ, ಆಕೆ ಅವುಗಳನ್ನು ಅಷ್ಟೇ ನಿಷ್ಠೆಯಿಂದ ಅಳಿಸುತ್ತಾಳೆ, ಅಸ್ತವ್ಯಸ್ತಿವಿರುವುವನ್ನು ವ್ಯವಸ್ಥಿತಗೊಳಿಸುತ್ತಾಳೆ, ಕತ್ತರಿಸುತ್ತಾಳೆ, ಅದನ್ನು ಸ್ವಚ್ಛಗೊಳಿಸುತ್ತಾಳೆ, ಅದನ್ನು ಕಾಂತಿಯುತಗೊಳಿಸುತ್ತಾಳೆ, ಆದರೆ ಈ ದುಗುಡ, ನಾಲಿಗೆ ಮೇಲಿನ ಈ ವಿಶ್ವಾಸಘಾತುಕತನದ ರುಚಿ, ತನ್ನ ಕಾರ್ಯದರ್ಶಿಯನ್ನು ಎದುರಿಸುವ ಬಾಸ್‌ನ ಮುಖಚರ್ಯೆ ಹೊರತುಪಡಿಸಿ, ಇನ್ನು ಉಳಿದುಕೊಂಡಿದ್ದು ಬಹುಶಹ ಚೆನ್ನಾಗಿರಬಹುದು.

(ಕನ್ನಡಕ್ಕೆ): ಗುರುಪ್ರಸಾದ್ ಡಿ ಎನ್

ಹೂಲಿಯೋ ಕೋರ್ಟಾಜಾರ್

ಹೂಲಿಯೋ ಕೋರ್ಟಾಜಾರ್
ಖ್ಯಾತ ಸ್ಪಾನಿಶ್ ಬರಹಗಾರ ಮತ್ತು ಕವಿ. ’ಹಾಪ್‌ಸ್ಕಾಚ್’, ’ಬ್ಲೋ ಅಪ್ ಅಂಡ್ ಅದರ್ ಸ್ಟೋರೀಸ್’, ’ದ ವಿನ್ನರ್ಸ್’, ’ಎಂಡ್ ಆಫ್ ಗೇಮ್’ ಕೋರ್ಟಾಜಾರ್‌ನ ಪುಸ್ತಕಗಳಲ್ಲಿ ಕೆಲವು. ಪ್ರಸ್ತುತ ಕಥೆಗಳನ್ನು ಅವರ ಅತಿ ಸಣ್ಣ ಕಥೆಗಳ ಇಂಗ್ಲಿಷ್ ಅನುವಾದ ’ಕ್ರೋನೋಪಿಯೋಸ್ ಅಂಡ್ ಫಾಮಾಸ್’ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.


ಇದನ್ನೂ ಓದಿ: ಭಾನುವಾರದ ಓದು; ದಯಾ ಗಂಗನಘಟ್ಟ ಅವರ ಕಥೆ ‘ಒಂದು ಕುರ್ಚಿಯ ಸಾವು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...