HomeಮುಖಪುಟELECTION UPDATE: 3 ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಕಮಾಲ್

ELECTION UPDATE: 3 ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಕಮಾಲ್

- Advertisement -
- Advertisement -

ನಾಲ್ಕು ರಾಜ್ಯಗಳ ಚುನಾವಣೆಗೆ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದರೆ, ಕಾಂಗ್ರೆಸ್ ತೆಲಂಗಾಣ ರಾಜ್ಯದಲ್ಲಿ ಮಾತ್ರ ಮುನ್ನಡೆಯನ್ನು ಸಾಧಿಸಿಕೊಂಡು ತೃಪ್ತಿ ಪಟ್ಟುಕೊಂಡಿದೆ. ತೆಲಂಗಾಣದ ಜೊತೆಗೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗುತ್ತದೆ ಎಂದು ಕಾಂಗ್ರೆಸ್‌ ನಾಯಕರು ಭಾರೀ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಇದೀಗ ಫಲಿತಾಂಶ ಕಾಂಗ್ರೆಸ್‌ಗೆ ಮತ್ತೆ ಅವಲೋಕನ ಮಾಡುವಂತೆ ಮಾಡಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ, ಬಿಜೆಪಿಯ ಜೊತೆ ಹೋದ ಜ್ಯೋತಿರಾಧಿತ್ಯ ಸಿಂಧಿಯಾ ಬಣದ ಮೇಲೆ ಬಿಜೆಪಿಯೊಳಗೆ ವಿರೋಧವಿತ್ತು. ಇದಲ್ಲದೆ ಸಿಂಧಿಯಾ ಬಣಕ್ಕೆ ಸೂಕ್ತ ಪ್ರಾತಿನಿಧ್ಯ ನೀಡದ ಕಾರಣ ಬಿಜೆಪಿಯ ಜೊತೆ ಅಸಮಾಧಾನವಿತ್ತು. ಕಾಂಗ್ರೆಸ್‌ನಲ್ಲಿ ಆರಂಭದಲ್ಲಿ ಹೆಚ್ಚಿದ ಉತ್ಸಾಹವು ಬಿಜೆಪಿಗೆ ಹೊಸ ಸವಾಲನ್ನು ತಂದೊಡ್ಡಿತ್ತು. ನಿರಂತರ ಆಡಳಿತದ ವಿರೋಧಿ ಅಲೆಯೂ ಬಿಜೆಪಿಯ ಎದುರಿಗಿತ್ತು. ಅಲ್ಲದೆ ಪರಿಶಿಷ್ಟ ಪಂಗಡಗಳ ಮತಗಳು ಕೈತಪ್ಪುವ ಭಯವನ್ನು ಶಿವರಾಜ್ ಸಿಂಗ್‌ ಚೌವ್ಹಾಣ್ ಅವರಿಗಿತ್ತು. ಆದರೆ ಕೊನೇ ಕ್ಷಣದಲ್ಲಿ ಇವೆಲ್ಲವನ್ನೂ ಮೆಟ್ಟಿ ನಿಂತು ಬಿಜೆಪಿ ಗೆಲುವನ್ನು ಸಾಧಿಸಿದೆ.

ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ ಸರಕಾರ ರಚನೆಗೆ 116 ಸ್ಥಾನಗಳ ಅಗತ್ಯತೆ ಇದ್ದು, ಬಿಜೆಪಿ 162 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸುವ ಮೂಲಕ ಬಹುಮತಕ್ಕಿಂತಲೂ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಕಾಂಗ್ರೆಸ್‌ 65 ಕ್ಷೇತ್ರಗಳಲ್ಲಿ ಮತ್ತು ಬಿಎಸ್ಪಿ 2 ಕ್ಷೇತ್ರಗಳಲ್ಲಿ ಮಧ್ಯಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಣಿ ಹಿಡಿಯುವುದು ಸ್ಪಷ್ಟವಾಗಿ ಕಂಡುಬರುತ್ತಿದೆ.

ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಲ್ಲಿ ಸರಕಾರ ರಚನೆಗೆ 101 ಕ್ಷೇತ್ರಗಳ ಅವಶ್ಯಕತೆ ಇದ್ದು, ರಾಜಸ್ಥಾನದಲ್ಲಿ ಬಿಜೆಪಿ 111ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು ಮ್ಯಾಜಿಕ್‌ ನಂಬರನ್ನು ದಾಟಿದೆ. ಕಾಂಗ್ರೆಸ್ 72ಕ್ಷೇತ್ರಗಳಲ್ಲಿ, ಬಿಎಸ್ಪಿ 3 ಕ್ಷೇತ್ರಗಳಲ್ಲಿ ಮತ್ತು ಇತರರು 13ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ರಾಜಸ್ಥಾನದಲ್ಲಿ ಕೂಡ ಬಿಜೆಪಿ ಸರಕಾರ ರಚನೆಯ ಎಲ್ಲಾ ಬೆಳವಣಿಗೆಗಳು ಎದ್ದು ಕಾಣುತ್ತಿದೆ. ರಾಜಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಐದು ವರ್ಷಕ್ಕೊಮ್ಮೆ ಸರಕಾರಗಳು ಬದಲಾಗುತ್ತದೆ. ಈ ಮೂಲಕ ಈ ಇತಿಹಾಸ ಮುರಿದು ಬೀಳುತ್ತಾ ಎನ್ನುವ ಸಂಶಯವನ್ನು ರಾಜಸ್ಥಾನದ ಜನತೆ ಸುಳ್ಳಾಗಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.

ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿದ್ದು, ಸರಕಾರ ರಚನೆಗೆ 60 ಸ್ಥಾನಗಳ ಅವಶ್ಯಕತೆ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ 65 ಸ್ಥಾನಗಳಲ್ಲಿ ಬಿಆರ್‌ಎಸ್‌ 38 ಕ್ಷೇತ್ರಗಳಲ್ಲಿ ಬಿಜೆಪಿ 10 ಕ್ಷೇತ್ರಗಳಲ್ಲಿ ಮತ್ತು ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸರಕಾರ ರಚಿಸುವ ಎಲ್ಲಾ ಅವಕಾಶಗಳು ಕಂಡು ಬರುತ್ತಿದೆ. ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ 30,000ಕ್ಕೂ ಅಧಿಕ ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷರಾಗಿರುವ ರೇವಂತ್‌ ರೆಡ್ಡಿ ಸಿಎಂ ರೇಸ್‌ನಲ್ಲಿದ್ದಾರೆ. ಬಿಆರ್‌ಎಸ್‌ ವಿರುದ್ಧದ ಆಡಳಿತ ವಿರೋಧಿ ಅಲೆ ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆಗೆ ಹಾದಿಯನ್ನು ಸುಗಮಗೊಳಿಸಿದೆ.

ಛತ್ತೀಸ್‌ಗಢದಲ್ಲಿ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರಕಾರ ರಚನೆಗೆ 46 ಸ್ಥಾನಗಳನ್ನು ಪಡೆಯಬೇಕಿದೆ. ಬಿಜೆಪಿ 54 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, 35 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಇತರರು 1 ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಮತ ಎಣಿಕೆಯ ಆರಂಭದಿಂದಲೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಭಾರೀ ಜಿದ್ದಾ ಜಿದ್ದಿನ ಫೈಟ್‌ ನಡೆಯುತ್ತಿತ್ತು. ಆ ಬಳಿಕದ ಬೆಳವಣಿಗೆಯಲ್ಲಿ ಬಿಜೆಪಿ ಮ್ಯಾಜಿಕ್‌ ನಂಬರ್‌ ದಾಟಿ ಭಾರೀ ಮುನ್ನಡೆಯನ್ನು ಸಾಧಿಸಿದೆ.

 ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...