HomeಮುಖಪುಟELECTION UPDATE: 3 ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಕಮಾಲ್

ELECTION UPDATE: 3 ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಕಮಾಲ್

- Advertisement -
- Advertisement -

ನಾಲ್ಕು ರಾಜ್ಯಗಳ ಚುನಾವಣೆಗೆ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದರೆ, ಕಾಂಗ್ರೆಸ್ ತೆಲಂಗಾಣ ರಾಜ್ಯದಲ್ಲಿ ಮಾತ್ರ ಮುನ್ನಡೆಯನ್ನು ಸಾಧಿಸಿಕೊಂಡು ತೃಪ್ತಿ ಪಟ್ಟುಕೊಂಡಿದೆ. ತೆಲಂಗಾಣದ ಜೊತೆಗೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗುತ್ತದೆ ಎಂದು ಕಾಂಗ್ರೆಸ್‌ ನಾಯಕರು ಭಾರೀ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಇದೀಗ ಫಲಿತಾಂಶ ಕಾಂಗ್ರೆಸ್‌ಗೆ ಮತ್ತೆ ಅವಲೋಕನ ಮಾಡುವಂತೆ ಮಾಡಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ, ಬಿಜೆಪಿಯ ಜೊತೆ ಹೋದ ಜ್ಯೋತಿರಾಧಿತ್ಯ ಸಿಂಧಿಯಾ ಬಣದ ಮೇಲೆ ಬಿಜೆಪಿಯೊಳಗೆ ವಿರೋಧವಿತ್ತು. ಇದಲ್ಲದೆ ಸಿಂಧಿಯಾ ಬಣಕ್ಕೆ ಸೂಕ್ತ ಪ್ರಾತಿನಿಧ್ಯ ನೀಡದ ಕಾರಣ ಬಿಜೆಪಿಯ ಜೊತೆ ಅಸಮಾಧಾನವಿತ್ತು. ಕಾಂಗ್ರೆಸ್‌ನಲ್ಲಿ ಆರಂಭದಲ್ಲಿ ಹೆಚ್ಚಿದ ಉತ್ಸಾಹವು ಬಿಜೆಪಿಗೆ ಹೊಸ ಸವಾಲನ್ನು ತಂದೊಡ್ಡಿತ್ತು. ನಿರಂತರ ಆಡಳಿತದ ವಿರೋಧಿ ಅಲೆಯೂ ಬಿಜೆಪಿಯ ಎದುರಿಗಿತ್ತು. ಅಲ್ಲದೆ ಪರಿಶಿಷ್ಟ ಪಂಗಡಗಳ ಮತಗಳು ಕೈತಪ್ಪುವ ಭಯವನ್ನು ಶಿವರಾಜ್ ಸಿಂಗ್‌ ಚೌವ್ಹಾಣ್ ಅವರಿಗಿತ್ತು. ಆದರೆ ಕೊನೇ ಕ್ಷಣದಲ್ಲಿ ಇವೆಲ್ಲವನ್ನೂ ಮೆಟ್ಟಿ ನಿಂತು ಬಿಜೆಪಿ ಗೆಲುವನ್ನು ಸಾಧಿಸಿದೆ.

ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ ಸರಕಾರ ರಚನೆಗೆ 116 ಸ್ಥಾನಗಳ ಅಗತ್ಯತೆ ಇದ್ದು, ಬಿಜೆಪಿ 162 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸುವ ಮೂಲಕ ಬಹುಮತಕ್ಕಿಂತಲೂ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಕಾಂಗ್ರೆಸ್‌ 65 ಕ್ಷೇತ್ರಗಳಲ್ಲಿ ಮತ್ತು ಬಿಎಸ್ಪಿ 2 ಕ್ಷೇತ್ರಗಳಲ್ಲಿ ಮಧ್ಯಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಣಿ ಹಿಡಿಯುವುದು ಸ್ಪಷ್ಟವಾಗಿ ಕಂಡುಬರುತ್ತಿದೆ.

ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಲ್ಲಿ ಸರಕಾರ ರಚನೆಗೆ 101 ಕ್ಷೇತ್ರಗಳ ಅವಶ್ಯಕತೆ ಇದ್ದು, ರಾಜಸ್ಥಾನದಲ್ಲಿ ಬಿಜೆಪಿ 111ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು ಮ್ಯಾಜಿಕ್‌ ನಂಬರನ್ನು ದಾಟಿದೆ. ಕಾಂಗ್ರೆಸ್ 72ಕ್ಷೇತ್ರಗಳಲ್ಲಿ, ಬಿಎಸ್ಪಿ 3 ಕ್ಷೇತ್ರಗಳಲ್ಲಿ ಮತ್ತು ಇತರರು 13ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ರಾಜಸ್ಥಾನದಲ್ಲಿ ಕೂಡ ಬಿಜೆಪಿ ಸರಕಾರ ರಚನೆಯ ಎಲ್ಲಾ ಬೆಳವಣಿಗೆಗಳು ಎದ್ದು ಕಾಣುತ್ತಿದೆ. ರಾಜಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಐದು ವರ್ಷಕ್ಕೊಮ್ಮೆ ಸರಕಾರಗಳು ಬದಲಾಗುತ್ತದೆ. ಈ ಮೂಲಕ ಈ ಇತಿಹಾಸ ಮುರಿದು ಬೀಳುತ್ತಾ ಎನ್ನುವ ಸಂಶಯವನ್ನು ರಾಜಸ್ಥಾನದ ಜನತೆ ಸುಳ್ಳಾಗಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.

ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿದ್ದು, ಸರಕಾರ ರಚನೆಗೆ 60 ಸ್ಥಾನಗಳ ಅವಶ್ಯಕತೆ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ 65 ಸ್ಥಾನಗಳಲ್ಲಿ ಬಿಆರ್‌ಎಸ್‌ 38 ಕ್ಷೇತ್ರಗಳಲ್ಲಿ ಬಿಜೆಪಿ 10 ಕ್ಷೇತ್ರಗಳಲ್ಲಿ ಮತ್ತು ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸರಕಾರ ರಚಿಸುವ ಎಲ್ಲಾ ಅವಕಾಶಗಳು ಕಂಡು ಬರುತ್ತಿದೆ. ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ 30,000ಕ್ಕೂ ಅಧಿಕ ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷರಾಗಿರುವ ರೇವಂತ್‌ ರೆಡ್ಡಿ ಸಿಎಂ ರೇಸ್‌ನಲ್ಲಿದ್ದಾರೆ. ಬಿಆರ್‌ಎಸ್‌ ವಿರುದ್ಧದ ಆಡಳಿತ ವಿರೋಧಿ ಅಲೆ ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆಗೆ ಹಾದಿಯನ್ನು ಸುಗಮಗೊಳಿಸಿದೆ.

ಛತ್ತೀಸ್‌ಗಢದಲ್ಲಿ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರಕಾರ ರಚನೆಗೆ 46 ಸ್ಥಾನಗಳನ್ನು ಪಡೆಯಬೇಕಿದೆ. ಬಿಜೆಪಿ 54 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, 35 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಇತರರು 1 ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಮತ ಎಣಿಕೆಯ ಆರಂಭದಿಂದಲೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಭಾರೀ ಜಿದ್ದಾ ಜಿದ್ದಿನ ಫೈಟ್‌ ನಡೆಯುತ್ತಿತ್ತು. ಆ ಬಳಿಕದ ಬೆಳವಣಿಗೆಯಲ್ಲಿ ಬಿಜೆಪಿ ಮ್ಯಾಜಿಕ್‌ ನಂಬರ್‌ ದಾಟಿ ಭಾರೀ ಮುನ್ನಡೆಯನ್ನು ಸಾಧಿಸಿದೆ.

 ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...