Homeಮುಖಪುಟನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ: ಕಾಂಗ್ರೆಸ್, ಬಿಜೆಪಿ ತಲಾ 2 ರಾಜ್ಯಗಳಲ್ಲಿ ಮುನ್ನಡೆ

ನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ: ಕಾಂಗ್ರೆಸ್, ಬಿಜೆಪಿ ತಲಾ 2 ರಾಜ್ಯಗಳಲ್ಲಿ ಮುನ್ನಡೆ

- Advertisement -
- Advertisement -

ಪಂಚರಾಜ್ಯಗಳ ಚುನಾವಣೆಯ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದ್ದು, ರಾಜಸ್ಥಾನದಲ್ಲಿ ಬಿಜೆಪಿ, ಛತ್ತೀಸ್‌ಘಡದಲ್ಲಿ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಬಿಜೆಪಿ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದೆ. ನಾಲ್ಕು ರಾಜ್ಯಗಳ 638 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 7,643 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಅವರ ಭವಿಷ್ಯ ಇನ್ನು ಕೆಲವೇ ಕ್ಷಣದಲ್ಲಿ ನಿರ್ಧಾರವಾಗಲಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ 152 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ 47 ಮತ್ತು ಬಿಜೆಪಿ 42 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ. ಛತ್ತೀಸ್‌ಗಢದಲ್ಲಿ ಮತಗಟ್ಟೆ ಸಮೀಕ್ಷೆಯ ರೀತಿಯಲ್ಲೇ ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ.

ರಾಜಸ್ಥಾನದಲ್ಲಿ 105 ಕ್ಷೇತ್ರಗಳಲ್ಲಿ ಬಿಜೆಪಿ  78 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿಕೊಂಡಿದೆ. ರಾಜಸ್ಥಾನದ ಮತದಾರರು ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಸಂಪ್ರದಾಯವನ್ನು 25 ವರ್ಷಗಳಿಂದ ಅನುಸರಿಸಿಕೊಂಡು ಬಂದಿದ್ದಾರೆ. ಈ ಸಂಪ್ರದಾಯ ಈ ಸಲ ಮುರಿಯಲಿದೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ 69 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ಪಕ್ಷ ಅರ್ಧಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಆಡಳಿತರೂಢ ಭಾರತ ರಾಷ್ಟ್ರೀಯ ಸಮಿತಿ(BRS)ಗೆ ತೀವ್ರ ಹಿನ್ನಡೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ಒಟ್ಟು ಈವರೆಗಿನ ಫಲಿತಾಂಶದಲ್ಲಿ ಬಿಜೆಪಿ ಎರಡು ಮತ್ತು ಕಾಂಗ್ರೆಸ್‌ ಎರಡು ರಾಜ್ಯಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸೆಮಿಫೈನಲ್‌ ಎಂದು ಹೇಳಲಾಗುತ್ತಿದ್ದು ಅಂತಿಮವಾಗಿ ಯಾವ ರಾಜ್ಯದಲ್ಲಿ ಯಾವ ಪಕ್ಷಗಳು ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಕಾದು ನೋಡಬೇಕಿದೆ.

ನ.7ರಿಂದ 30ರ ಅವಧಿಯಲ್ಲಿ ಐದು ರಾಜ್ಯಗಳಿಗೆ ಚುನಾವಣೆ ನಡೆದಿತ್ತು. ಮಿಜೋರಾಂನಲ್ಲಿ ಮಾತ್ರ ಮತ ಎಣಿಕೆ ಸೋಮವಾರ ನಡೆಯಲಿದೆ. ಡಿ.3ರಂದು ನಿಗದಿಯಾಗಿರುವ ಮತ ಎಣಿಕೆಯನ್ನು ಬೇರೆ ದಿನಕ್ಕೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಮಿಜೋರಾಂನ ಎನ್‌ಜಿಒ ಕೋ ಆರ್ಡಿನೇಷನ್‌ ಕಮಿಟಿ ರಾಜ್ಯದಾದ್ಯಂತ ಶುಕ್ರವಾರ ಪ್ರತಿಭಟನೆ ನಡೆಸಿತ್ತು. ಹೀಗಾಗಿ ಸೋಮವಾರ ಮತ ಎಣಿಕೆ ನಡೆಸಲು ಆಯೋಗ ತೀರ್ಮಾನಿಸಿದೆ.

ಇದನ್ನು ಓದಿ: ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...