Homeಮುಖಪುಟನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ: ಕಾಂಗ್ರೆಸ್, ಬಿಜೆಪಿ ತಲಾ 2 ರಾಜ್ಯಗಳಲ್ಲಿ ಮುನ್ನಡೆ

ನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ: ಕಾಂಗ್ರೆಸ್, ಬಿಜೆಪಿ ತಲಾ 2 ರಾಜ್ಯಗಳಲ್ಲಿ ಮುನ್ನಡೆ

- Advertisement -
- Advertisement -

ಪಂಚರಾಜ್ಯಗಳ ಚುನಾವಣೆಯ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದ್ದು, ರಾಜಸ್ಥಾನದಲ್ಲಿ ಬಿಜೆಪಿ, ಛತ್ತೀಸ್‌ಘಡದಲ್ಲಿ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಬಿಜೆಪಿ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದೆ. ನಾಲ್ಕು ರಾಜ್ಯಗಳ 638 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 7,643 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಅವರ ಭವಿಷ್ಯ ಇನ್ನು ಕೆಲವೇ ಕ್ಷಣದಲ್ಲಿ ನಿರ್ಧಾರವಾಗಲಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ 152 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ 47 ಮತ್ತು ಬಿಜೆಪಿ 42 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ. ಛತ್ತೀಸ್‌ಗಢದಲ್ಲಿ ಮತಗಟ್ಟೆ ಸಮೀಕ್ಷೆಯ ರೀತಿಯಲ್ಲೇ ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ.

ರಾಜಸ್ಥಾನದಲ್ಲಿ 105 ಕ್ಷೇತ್ರಗಳಲ್ಲಿ ಬಿಜೆಪಿ  78 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿಕೊಂಡಿದೆ. ರಾಜಸ್ಥಾನದ ಮತದಾರರು ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಸಂಪ್ರದಾಯವನ್ನು 25 ವರ್ಷಗಳಿಂದ ಅನುಸರಿಸಿಕೊಂಡು ಬಂದಿದ್ದಾರೆ. ಈ ಸಂಪ್ರದಾಯ ಈ ಸಲ ಮುರಿಯಲಿದೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ 69 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ಪಕ್ಷ ಅರ್ಧಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಆಡಳಿತರೂಢ ಭಾರತ ರಾಷ್ಟ್ರೀಯ ಸಮಿತಿ(BRS)ಗೆ ತೀವ್ರ ಹಿನ್ನಡೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ಒಟ್ಟು ಈವರೆಗಿನ ಫಲಿತಾಂಶದಲ್ಲಿ ಬಿಜೆಪಿ ಎರಡು ಮತ್ತು ಕಾಂಗ್ರೆಸ್‌ ಎರಡು ರಾಜ್ಯಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸೆಮಿಫೈನಲ್‌ ಎಂದು ಹೇಳಲಾಗುತ್ತಿದ್ದು ಅಂತಿಮವಾಗಿ ಯಾವ ರಾಜ್ಯದಲ್ಲಿ ಯಾವ ಪಕ್ಷಗಳು ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಕಾದು ನೋಡಬೇಕಿದೆ.

ನ.7ರಿಂದ 30ರ ಅವಧಿಯಲ್ಲಿ ಐದು ರಾಜ್ಯಗಳಿಗೆ ಚುನಾವಣೆ ನಡೆದಿತ್ತು. ಮಿಜೋರಾಂನಲ್ಲಿ ಮಾತ್ರ ಮತ ಎಣಿಕೆ ಸೋಮವಾರ ನಡೆಯಲಿದೆ. ಡಿ.3ರಂದು ನಿಗದಿಯಾಗಿರುವ ಮತ ಎಣಿಕೆಯನ್ನು ಬೇರೆ ದಿನಕ್ಕೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಮಿಜೋರಾಂನ ಎನ್‌ಜಿಒ ಕೋ ಆರ್ಡಿನೇಷನ್‌ ಕಮಿಟಿ ರಾಜ್ಯದಾದ್ಯಂತ ಶುಕ್ರವಾರ ಪ್ರತಿಭಟನೆ ನಡೆಸಿತ್ತು. ಹೀಗಾಗಿ ಸೋಮವಾರ ಮತ ಎಣಿಕೆ ನಡೆಸಲು ಆಯೋಗ ತೀರ್ಮಾನಿಸಿದೆ.

ಇದನ್ನು ಓದಿ: ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...