Homeಮುಖಪುಟರಣಥಂಬೂರ್‌‌ ಟೈಗರ್‌ ರಿಸರ್ವ್‌ನಲ್ಲಿ ನಾಲ್ಕು ಹುಲಿಗಳು ಒಂದು ವರ್ಷದಿಂದ ನಾಪತ್ತೆ

ರಣಥಂಬೂರ್‌‌ ಟೈಗರ್‌ ರಿಸರ್ವ್‌ನಲ್ಲಿ ನಾಲ್ಕು ಹುಲಿಗಳು ಒಂದು ವರ್ಷದಿಂದ ನಾಪತ್ತೆ

- Advertisement -
- Advertisement -

ಎರಡು ಮರಿಗಳು ಸೇರಿದಂತೆ ನಾಲ್ಕು ಹುಲಿಗಳು ರಾಜಸ್ಥಾನದ ರಣಥಂಬೋರ್ ಟೈಗರ್ ರಿಸರ್ವ್‌ ಕಾಡಿನಲ್ಲಿ ಒಂದು ವರ್ಷದಿಂದ ನಾಪತ್ತೆಯಾಗಿದೆ ಎನ್ನಲಾಗಿದೆ. ಅವುಗಳನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ, ಆದರೆ ಅವು ಸಾವಿಗೀಡಾಗಿರುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗಿದೆ.

ನಾಪತ್ತೆಯಾಗಿರುವ ಹುಲಿಗಳನ್ನು ಮಾರ್ಚ್ 2020 ರಲ್ಲಿ ಕೊನೆಯದಾಗಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಎಂದು ಜನರು ಹೇಳುತ್ತಿದ್ದಾರೆ.

ಮಾಧ್ಯಮಕ್ಕೆ ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು, ಕಾಡು 1,700 ಚದರ ಕಿ.ಮೀ ಪ್ರದೇಶದಲ್ಲಿ ಹರಡಿಕೊಂಡಿದ್ದು, ಇದರಲ್ಲಿ ದಟ್ಟವಾದ ಕಾಡುಗಳೂ ಇವೆ. ಹುಲಿಗಳು ನಾಪತ್ತೆಯಾಗಿರುವುದನ್ನು ತರಾತುರಿಯಲ್ಲಿ ದೃಡೀಕರಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ಹುಲಿಗಳು ಇಲ್ಲಿಂದ ಹೊರಬಿದ್ದು, ಮಧ್ಯಪ್ರದೇಶಕ್ಕೂ ತೆರಳಿರುವ ಸಾಧ್ಯತೆ ಇದೆ ಎಂದು ಅಧಿಕಾರಿ ಹೇಳಿದ್ದಾರೆ. ಇಂತಹ ಘಟನೆಗಳು ಈ ಹಿಂದೆ ಕೂಡಾ ವರದಿಯಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಅರಣ್ಯ ಪ್ರದೇಶಗಳಲ್ಲಿ ಸೀಮಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕೆಲವೊಮ್ಮೆ ಅವು ಹುಲಿಯ ಚಲನೆಯನ್ನು ಸೆರೆಹಿಡಿಯುವುದಿಲ್ಲ ಎಂದು ಅಧಿಕಾರಿ ಒತ್ತಿ ಹೇಳಿದ್ದಾರೆ.

ರಿಸರ್ವ್ ಆಡಳಿತವು ಹುಲಿಗಳನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದೆ ಮತ್ತು ಸಹಾಯಕ್ಕಾಗಿ ಹತ್ತಿರದ ಜಿಲ್ಲೆಗಳ ಅಧಿಕಾರಿಗಳಿಗೆ ಮತ್ತು ಮಧ್ಯಪ್ರದೇಶ ಅರಣ್ಯ ಇಲಾಖೆಗೆ ಪತ್ರ ಬರೆದಿದೆ.

ಕಳೆದ 10 ವರ್ಷಗಳಲ್ಲಿ ಕನಿಷ್ಠ 26 ಹುಲಿಗಳು ಮೀಸಲು ಪ್ರದೇಶದಿಂದ ಕಾಣೆಯಾಗಿವೆ. ಟಿ -42 ಫತೇಹ್ ಮತ್ತು ಟಿ -47 ಮೋಹನ್ ಹೆಸರಿನ ಹುಲಿಗಳು 2020 ರ ಜನವರಿಯಿಂದ ಮೀಸಲು ಪ್ರದೇಶದಿಂದ ಕಾಣೆಯಾಗಿವೆ.

ಎರಡು ವರ್ಷಗಳ ಹಿಂದೆ ನಾಲ್ಕು ಹುಲಿಗಳು ಮತ್ತು ಮೂರು ಮರಿಗಳನ್ನು ಹೊಂದಿದ್ದ ಕೋಟಾದ ಮುಕುಂದ್ರಾ ಹಿಲ್ಸ್ ಟೈಗರ್ ರಿಸರ್ವ್ ಈಗ ಕೇವಲ ಒಂದು ಹುಲಿಯನ್ನು ಹೊಂದಿದೆ. ಎರಡು ಹುಲಿಗಳು ಮತ್ತು ಒಂದು ಮರಿ ಸಾವನ್ನಪ್ಪಿದ್ದರೆ, ಮೂರು ಹುಲಿಗಳು ನಾಪತ್ತೆಯಾಗಿವೆ.

ಇದನ್ನೂ ಓದಿ: ಚುನಾವಣೆ ಎದುರಿಸಲು ನಮಗೆ ಯಾವುದೇ ಕೋಮು ಶಕ್ತಿಯ ಸಹಾಯ ಬೇಕಿಲ್ಲ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...