Homeಮುಖಪುಟಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

- Advertisement -
- Advertisement -

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ನ್ಯಾಯಮೂರ್ತಿ ಚೈತಾಲಿ ಚಟರ್ಜಿ ದಾಸ್ ಅವರ ವಿಭಾಗೀಯ ಪೀಠವು, ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ಪ್ರಕಾರ, ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆದೇಶಿಸಿದೆ. ಈಗಾಗಲೇ 10 ಲಕ್ಷ ರೂಪಾಯಿ ಕೊಟ್ಟಿರುವುದರಿಂದ ಬಾಕಿ 20 ಲಕ್ಷ ರೂಪಾಯಿ ಕೊಡುವಂತೆ ಸೂಚಿಸಿದೆ. ಮೂರು ತಿಂಗಳ ಒಳಗೆ ಹಣ ಪಾವತಿಸುವಂತೆ ನಿರ್ದೇಶಿಸಿದೆ.

ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಎರಡು ತಿಂಗಳ ಒಳಗೆ ನೀಡಬೇಕು ಎಂದು ಶುಕ್ರವಾರ (ನವೆಂಬರ್ 21) ನೀಡಿದ ಆದೇಶದಲ್ಲಿ ನ್ಯಾಯಾಲಯ ಹೇಳಿದೆ.

“ಮಲ ಹೊರುವ ಪದ್ದತಿ ಗಂಭೀರ ಮಾನವ ಹಕ್ಕು ಉಲ್ಲಂಘನೆಯಾಗಿದೆ. ಅದು ಇನ್ನೂ ಮುಂದುವರಿದಿರುವುದು ದೇಶದ ಆತ್ಮ ಸಾಕ್ಷಿಗೆ ಕಪ್ಪುಚುಕ್ಕೆ” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2013ರ ಮಲ ಹೊರುವ ಪದ್ದತಿ ನಿಷೇಧ ಕಾಯ್ದೆಯಡಿ ಕಡ್ಡಾಯ ಮೇಲ್ವಿಚಾರಣಾ ಕಾರ್ಯವಿಧಾನಗಳು ಅಸ್ತಿತ್ವದಲ್ಲಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಅಪರಿಚಿತ ವ್ಯಕ್ತಿಗಳ ವಿರುದ್ಧದ ಎಫ್‌ಐಆರ್ ಮಾತ್ರ ಉಲ್ಲೇಖಿಸುವ ಪೊಲೀಸರ ಅಫಿಡವಿಟ್ ಅಸಮರ್ಪಕವಾಗಿದೆ ಎಂದು ನ್ಯಾಯಾಲಯ ಟೀಕಿಸಿದೆ.

ಈ ಕುರಿತು ವರದಿ ಸಲ್ಲಿಸುವಂತೆ ಉಪ ಪೊಲೀಸ್ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಮತ್ತು ಒಂದು ತಿಂಗಳೊಳಗೆ ಮೇಲ್ವಿಚಾರಣಾ ಸಮಿತಿಯನ್ನು ರಚಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.

ಪರಿಹಾರ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸಂತ್ರಸ್ತ ಕುಟುಂಬಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ಲೈವ್ ಲಾ ವರದಿ ವಿವರಿಸಿದೆ.

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯವರಾದ ನಾಲ್ವರು ಕಾರ್ಮಿಕರು ಕೋಲ್ಕತ್ತಾ ಮಹಾನಗರ ಪಾಲಿಕೆಯ ಪರಿಸರ ಮೂಲಸೌಕರ್ಯ ಸುಧಾರಣಾ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರನ್ನುಒಳಚರಂಡಿ ಸ್ವಚ್ವಗೊಳಿಸಲು ಮ್ಯಾನ್‌ಹೋಲ್‌ಗೆ ಇಳಿಸಲಾಗಿತ್ತು. ಅಲ್ಲಿ ವಿಷಕಾರಿ ಅನಿಲ ಉಸಿರಾಡಿ ಸಾವನ್ನಪ್ಪಿದ್ದರು.

19 ವರ್ಷದ ಶಬೀರ್ ಹುಸೈನ್, 35 ವರ್ಷದ ಮೊಹಮ್ಮದ್ ಅಲಂಗೀರ್, 22 ವರ್ಷದ ಜಹಾಂಗೀರ್ ಅಲಮ್ ಮತ್ತು 20 ವರ್ಷದ ಲಿಯಾಕತ್ ಅಲಿ ಮೃತ ದುರ್ದೈವಿಗಳು.

2013ರ ಮಲ ಹೊರುವ ಪದ್ದತಿ ನಿಷೇಧ ಕಾಯ್ದೆಯಡಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ಗಳನ್ನು ಮನುಷ್ಯರಿಂದ ಅಂದರೆ ಆಧುನಿಕ ಯಂತ್ರಗಳನ್ನು ಬಳಸದೆ ಸ್ವಚ್ಚ ಮಾಡಿಸುವುದನ್ನು ನಿಷೇಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...