Homeಮುಖಪುಟಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

- Advertisement -
- Advertisement -

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ ಪೋಷಕರು ರೈಲ್ವೆ ಶೆಡ್‌ನಲ್ಲಿ ಆಶ್ರಯ ಪಡೆದಿದ್ದರು. ಮಗು ಸೊಳ್ಳೆ ಪರದೆಯ ಒಳಗೆ ತನ್ನ ಅಜ್ಜಿಯ ಜೊತೆ ಮಲಗಿತ್ತು. ಅಲ್ಲಿಂದ ಅಪಹರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಪೋಷಕರು ಹುಡುಕಾಡಿದಾಗ ಚರಂಡಿಯಲ್ಲಿ ರಕ್ತಡ ಮಡುವಿನಲ್ಲಿ ಮಗು ಪತ್ತೆಯಾಗಿದ್ದಾಳೆ. ಈ ಸಂದರ್ಭದಲ್ಲಿ ಆಕೆಯ ಖಾಸಗಿ ಅಂಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಕೆನ್ನೆಯ ಮೇಲೆ ಕಚ್ಚಿದ ಗುರುತುಗಳಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಅಲ್ಲಿಂದ ಚಂದನ್‌ನಗರ ಆಸ್ಪತ್ರೆಗೆ ರವಾನಿಸಲಾಯಿತು ಎಂದು ವರದಿಗಳು ವಿವರಿಸಿವೆ.

ಮಗು ಮಲಗಿದ್ದಾಗ ಯಾರೋ ಸೊಳ್ಳೆ ಪರದೆಯನ್ನು ಹರಿದು ಆಕೆಯನ್ನು ಅಪಹರಿಸಿದ್ದಾರೆ. ನಂತರ ಮಗು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಯಿತು ಎಂದು ಮೃತ ಬಾಲಕಿಯ ಅಜ್ಜಿ ಹೇಳಿದ್ದಾರೆ.

ಹೂಗ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ಘಟನೆಯನ್ನು ದೃಢಪಡಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಾವು ತನಿಖೆ ಪ್ರಾರಂಭಿಸಿದ್ದೇವೆ. ಅಪರಾಧಿಯನ್ನು ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಘಟನೆಯು ರಾಜಕೀಯ ಬಣ್ಣ ಪಡೆದುಕೊಂಡಿದೆ. ಬಿಜೆಪಿ ನಾಯಕರು ಪೊಲೀಸರ ಆರಂಭಿಕ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. “ಪೊಲೀಸರು ಅಪರಾಧವನ್ನು ಮರೆ ಮಾಚುವಲ್ಲಿ ನಿರತರಾಗಿದ್ದಾರೆ” ಎಂದು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

“ಇದು ಮಮತಾ ಬ್ಯಾನರ್ಜಿಯವರ ಎಲ್ಲರಿಗೂ ಉಚಿತ ಆಡಳಿತದ ನಿಜವಾದ ಮುಖ. ಒಂದು ಮಗುವಿನ ಜೀವನ ಛಿದ್ರಗೊಂಡಿದೆ. ಆದರೆ, ಪೊಲೀಸರು ಸತ್ಯವನ್ನು ನಿಗ್ರಹಿಸುವ ಮೂಲಕ ರಾಜ್ಯದ ನಕಲಿ ಕಾನೂನು ಮತ್ತು ಸುವ್ಯವಸ್ಥೆಯ ಪ್ರತಿಷ್ಠೆಯನ್ನು ರಕ್ಷಿಸುತ್ತಿದ್ದಾರೆ. ಅವರು ಪೊಲೀಸ್ ಅಧಿಕಾರಿಗಳೋ ಅಥವಾ ಮಮತಾ ಬ್ಯಾನರ್ಜಿಯವರ ವಂಚಕರೋ?” ಎಂದು ಸುವೇಂದು ಅಧಿಕಾರಿ ಪ್ರಶ್ನಿಸಿದ್ದಾರೆ.

“ಮಮತಾ ಬ್ಯಾನರ್ಜಿಯವರೇ ನೀವು ವಿಫಲ ಮುಖ್ಯಮಂತ್ರಿ. ನಿಮ್ಮ ಆಳ್ವಿಕೆಯಲ್ಲಿ, ಪಶ್ಚಿಮ ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಪ್ರತಿ ಬಾರಿಯೂ ಅದೇ ಸನ್ನಿವೇಶ : ಅತ್ಯಾಚಾರ → ಇಲ್ಲ/ವಿಳಂಬವಾದ ಎಫ್‌ಐಆರ್ → ಆಸ್ಪತ್ರೆ ಉಲ್ಲೇಖ → ಮಾಧ್ಯಮ ನಿಷೇಧ → ಟಿಎಂಸಿ ನಾಯಕರು ಪ್ರಕರಣವನ್ನು ಮುಚ್ಚಿ ಹಾಕುವುದು ಎಂದಿದ್ದಾರೆ.

“ಮಮತಾ ಬ್ಯಾನರ್ಜಿಯವರ ಭಯಾನಕ ರಾಕ್ಷಸ ಕ್ರೌರ್ಯದ ಆಳ್ವಿಕೆಯಲ್ಲಿ, ನಾಲ್ಕು ವರ್ಷದ ಬಾಲಕಿ ಕೂಡ ಸುರಕ್ಷಿತವಾಗಿಲ್ಲ” ಎಂದು ಕೇಂದ್ರ ಈಶಾನ್ಯ ಪ್ರದೇಶ ಶಿಕ್ಷಣ ಮತ್ತು ಅಭಿವೃದ್ಧಿ ಖಾತೆಯ ರಾಜ್ಯ ಸಚಿವ ಸುಕಾಂತ ಮಜುಂದಾರ್ ಹೇಳಿದ್ದಾರೆ.

“ಅಪಹರಣಗೊಂಡು ತುಂಬಾ ಸಮಯದ ನಂತರ ಗಾಯಗೊಂಡ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾದಳು. ವಿಚಿತ್ರವೆಂದರೆ, ಬಾಲಕಿಯ ಕುಟುಂಬ ಈ ಬಗ್ಗೆ ಮಾಹಿತಿ ನೀಡಲು ಪೊಲೀಸ್ ಠಾಣೆಗೆ ಹೋದಾಗ ಅವರು ವಾಪಸ್ ಕಳುಹಿಸಿದರು ಎಂದು ಆರೋಪಿಸಲಾಗಿದೆ. ಬಾಲಕಿಯ ಕುಟುಂಬದ ಪ್ರಕಾರ, ಪೊಲೀಸರು ದೂರು ಸ್ವೀಕರಿಸಲೂ ನಿರಾಕರಿಸಿದ್ದಾರೆ. ಇದು ಯಾವ ರೀತಿಯ ಪಶ್ಚಿಮ ಬಂಗಾಳ? ಇಲ್ಲಿ ಮಲಗಿರುವ ಶಿಶುವನ್ನೂ ಅಪಹರಿಸಿ ಅತ್ಯಾಚಾರ ಮಾಡಲಾಗುತ್ತದೆ” ಎಂದು ಸುಕಾಂತ ಮಜುಂದಾರ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

“ನಗರಗಳಿಂದ ಸಣ್ಣ ಪಟ್ಟಣಗಳವರೆಗೆ, ಉಪನಗರಗಳಿಂದ ದೂರದ ಹಳ್ಳಿಗಳವರೆಗೆ, ಎಲ್ಲೆಡೆ ಮಹಿಳೆಯರು ದಬ್ಬಾಳಿಕೆ ಮತ್ತು ದೌರ್ಜನ್ಯವನ್ನು ಎದುರಿಸುತ್ತಿದ್ದಾರೆ. ಒಂದೆಡೆ, ಮಹಿಳೆಯರ ಮೇಲಿನ ದೌರ್ಜನ್ಯದ ಅಂತಿಮ ಭಯಾನಕತೆ, ಮತ್ತೊಂದೆಡೆ, ಕಾನೂನು ಜಾರಿ ಪೊಲೀಸರು ಸ್ವತಃ ಅತ್ಯಾಚಾರಿ ರಾಕ್ಷಸರನ್ನು ರಕ್ಷಿಸಲು ಹತಾಶ ಪ್ರಯತ್ನಗಳನ್ನು ಮಾಡುತ್ತಿದ್ದಾರೆ! ವಿಫಲ ಮುಖ್ಯಮಂತ್ರಿ. ಮಮತಾ ಬ್ಯಾನರ್ಜಿ ಎಷ್ಟು ಕಾಲ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರೆ?” ಎಂದು ಸುಕಾಂತ ಮಜುಂದಾರ್ ಪ್ರಶ್ನಿಸಿದ್ದಾರೆ.

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...