Homeಕರ್ನಾಟಕಬೆಳಗಾವಿ | ನಾಲ್ಕು ವರ್ಷದ ಹೆಣ್ಣು ಮಗುವಿಗೆ ಚಿತ್ರಹಿಂಸೆ ನೀಡಿ ಕೊಲೆ ಆರೋಪ : ಮಲತಾಯಿ...

ಬೆಳಗಾವಿ | ನಾಲ್ಕು ವರ್ಷದ ಹೆಣ್ಣು ಮಗುವಿಗೆ ಚಿತ್ರಹಿಂಸೆ ನೀಡಿ ಕೊಲೆ ಆರೋಪ : ಮಲತಾಯಿ ಬಂಧನ

- Advertisement -
- Advertisement -

ನಾಲ್ಕು ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ ಕೊಂದ ಆರೋಪದ ಮೇಲೆ ಮಲತಾಯಿಯನ್ನು ಬೆಳಗಾವಿಯ ಎಪಿಎಂಸಿ ಠಾಣೆ ಪೊಲೀಸರು ಗುರುವಾರ (ಜ.23) ಬಂಧಿಸಿದ್ದಾರೆ.

ಕಳೆದ ವರ್ಷ (2024) ಮೇ ತಿಂಗಳಲ್ಲಿ ನಡೆದಿದ್ದ ಬಾಲಕಿಯ ಕೊಲೆ ವಿಚಾರ, ವೈದ್ಯಕೀಯ ವರದಿಗಳು ಸಾವಿನ ಕಾರಣವನ್ನು ಬಹಿರಂಗಪಡಿಸಿದ ನಂತರ ಗುರುವಾರ ಬೆಳಕಿಗೆ ಬಂದಿದೆ.

ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಬೆಳಗಾವಿಯ ವಡ್ಗಾಂವ್ ನಿವಾಸಿ ಸಪ್ನಾ ನವಿಯ ಚಿತ್ರಹಿಂಸೆಯಿಂದ ಬಾಲಕಿ ಸಮೃದ್ಧಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ, ಸಪ್ನಾ ಮಗುವನ್ನು ಕೊಲ್ಲುವ ಉದ್ದೇಶದಿಂದ ನಿರಂತರ ಚಿತ್ರಹಿಂಸೆ ನೀಡುತ್ತಿದ್ದಳು ಎಂದು ಗೊತ್ತಾಗಿತ್ತು. ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿಯು ಹಲ್ಲೆಯಿಂದ ಸಾವನ್ನಪ್ಪಿದ್ದಾಗಿ ಬಹಿರಂಗಪಡಿಸಿದ ತಕ್ಷಣ, ನಾವು ಸಪ್ನಾಳನ್ನು ಆಕೆಯ ಮನೆಯಿಂದ ಬಂಧಿಸಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಾಲಕಿಯ ತಂದೆ ರಾಯಣ್ಣ ನವಿ ಸಿಆರ್‌ಪಿಎಫ್‌ನಲ್ಲಿ ಕೆಲಸ ಮಾಡುತ್ತಿದ್ದು, ಎರಡು ವರ್ಷಗಳ ಹಿಂದೆ ತನ್ನ ಮೊದಲ ಪತ್ನಿಯ ಮರಣದ ನಂತರ ಸಪ್ನಾಳನ್ನು ಮದುವೆಯಾಗಿದ್ದರು. ಬಾಲಕಿ ಎರಡು ವರ್ಷದವಳಿದ್ದಾಗ ಆಕೆಯ ತಾಯಿಯನ್ನು ಅತ್ತೆ-ಮಾವಂದಿರು ಕೊಲೆ ಮಾಡಿರುವ ಆರೋಪವಿದೆ ಎಂದು ಪೊಲೀಸರು ತಿಳಿಸಿದ್ದಾಗಿ ವರದಿ ಹೇಳಿದೆ.

ರಾಯಣ್ಣ ಸಪ್ನಾಳನ್ನು ಮದುವೆಯಾದ ಬಳಿಕ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಹೆಣ್ಣು ಮಗುವಿನೊಂದಿಗೆ ವಾಸಿಸುತ್ತಿದ್ದರು. ಅವರು ಸಿಆರ್‌ಪಿಎಫ್‌ ಸಿಬ್ಬಂದಿಯಾದ ಕಾರಣ ಛತ್ತೀಸ್‌ಗಢದಲ್ಲಿ ನಿಯೋಜನೆಗೊಂಡಿದ್ದರು. ಎರಡನೇ ಹೆಂಡತಿ ಮತ್ತು ಮಗುವನ್ನು ಆಗಾಗ ಭೇಟಿಯಾಗಲು ಆಗುತ್ತಿರಲಿಲ್ಲ. ಮಗುವಿನೊಂದಿಗೆ ಇದ್ದ ಸಪ್ನಾ ಆಕೆಗೆ ನಿರಂತರ ಕಿರುಕುಳ ನೀಡುತ್ತಿದ್ದರು. ಇದರಿಂದ ಅಂತಿಮವಾಗಿ ಮಗು ಸಾವನ್ನಪ್ಪಿದೆ ಎಂದು ವರದಿ ವಿವರಿಸಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮಗು ಮೃತಪಟ್ಟಿದೆ ಎಂದು ಘೋಷಿಸಿದಾಗ, ಆಕೆಯ ಅಜ್ಜಿ (ರಾಯಣ್ಣನ ಮೊದಲ ಪತ್ನಿಯ ಪೋಷಕರು) ಎಪಿಎಂಸಿ ಪೊಲೀಸರಿಗೆ ದೂರು ನೀಡಿದ್ದರು. ಹುಡುಗಿಯ ಮಲತಾಯಿ ಆಕೆಗೆ ಚಿತ್ರಹಿಂಸೆ ನೀಡಿ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಿದ್ದರು. ಆರಂಭದಲ್ಲಿ ಪೊಲೀಸರು ಬಾಲಕಿಯ ಸಾವು ಅಸಹಜ ಎಂದು ಎಫ್‌ಐಆರ್ ದಾಖಲಿಸಿದ್ದರು. ಈ ಕಾರಣದಿಂದ ಸಪ್ನಾ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಆದರೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿಯ ಸಾವಿನ ನಿಜವಾದ ಕಾರಣ ಬಹಿರಂಗವಾದ ನಂತರ ಗುರುವಾರ ಸಪ್ನಾಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...