Homeಕರ್ನಾಟಕಬೆಳಗಾವಿ | ನಾಲ್ಕು ವರ್ಷದ ಹೆಣ್ಣು ಮಗುವಿಗೆ ಚಿತ್ರಹಿಂಸೆ ನೀಡಿ ಕೊಲೆ ಆರೋಪ : ಮಲತಾಯಿ...

ಬೆಳಗಾವಿ | ನಾಲ್ಕು ವರ್ಷದ ಹೆಣ್ಣು ಮಗುವಿಗೆ ಚಿತ್ರಹಿಂಸೆ ನೀಡಿ ಕೊಲೆ ಆರೋಪ : ಮಲತಾಯಿ ಬಂಧನ

- Advertisement -
- Advertisement -

ನಾಲ್ಕು ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ ಕೊಂದ ಆರೋಪದ ಮೇಲೆ ಮಲತಾಯಿಯನ್ನು ಬೆಳಗಾವಿಯ ಎಪಿಎಂಸಿ ಠಾಣೆ ಪೊಲೀಸರು ಗುರುವಾರ (ಜ.23) ಬಂಧಿಸಿದ್ದಾರೆ.

ಕಳೆದ ವರ್ಷ (2024) ಮೇ ತಿಂಗಳಲ್ಲಿ ನಡೆದಿದ್ದ ಬಾಲಕಿಯ ಕೊಲೆ ವಿಚಾರ, ವೈದ್ಯಕೀಯ ವರದಿಗಳು ಸಾವಿನ ಕಾರಣವನ್ನು ಬಹಿರಂಗಪಡಿಸಿದ ನಂತರ ಗುರುವಾರ ಬೆಳಕಿಗೆ ಬಂದಿದೆ.

ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಬೆಳಗಾವಿಯ ವಡ್ಗಾಂವ್ ನಿವಾಸಿ ಸಪ್ನಾ ನವಿಯ ಚಿತ್ರಹಿಂಸೆಯಿಂದ ಬಾಲಕಿ ಸಮೃದ್ಧಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ, ಸಪ್ನಾ ಮಗುವನ್ನು ಕೊಲ್ಲುವ ಉದ್ದೇಶದಿಂದ ನಿರಂತರ ಚಿತ್ರಹಿಂಸೆ ನೀಡುತ್ತಿದ್ದಳು ಎಂದು ಗೊತ್ತಾಗಿತ್ತು. ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿಯು ಹಲ್ಲೆಯಿಂದ ಸಾವನ್ನಪ್ಪಿದ್ದಾಗಿ ಬಹಿರಂಗಪಡಿಸಿದ ತಕ್ಷಣ, ನಾವು ಸಪ್ನಾಳನ್ನು ಆಕೆಯ ಮನೆಯಿಂದ ಬಂಧಿಸಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಾಲಕಿಯ ತಂದೆ ರಾಯಣ್ಣ ನವಿ ಸಿಆರ್‌ಪಿಎಫ್‌ನಲ್ಲಿ ಕೆಲಸ ಮಾಡುತ್ತಿದ್ದು, ಎರಡು ವರ್ಷಗಳ ಹಿಂದೆ ತನ್ನ ಮೊದಲ ಪತ್ನಿಯ ಮರಣದ ನಂತರ ಸಪ್ನಾಳನ್ನು ಮದುವೆಯಾಗಿದ್ದರು. ಬಾಲಕಿ ಎರಡು ವರ್ಷದವಳಿದ್ದಾಗ ಆಕೆಯ ತಾಯಿಯನ್ನು ಅತ್ತೆ-ಮಾವಂದಿರು ಕೊಲೆ ಮಾಡಿರುವ ಆರೋಪವಿದೆ ಎಂದು ಪೊಲೀಸರು ತಿಳಿಸಿದ್ದಾಗಿ ವರದಿ ಹೇಳಿದೆ.

ರಾಯಣ್ಣ ಸಪ್ನಾಳನ್ನು ಮದುವೆಯಾದ ಬಳಿಕ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಹೆಣ್ಣು ಮಗುವಿನೊಂದಿಗೆ ವಾಸಿಸುತ್ತಿದ್ದರು. ಅವರು ಸಿಆರ್‌ಪಿಎಫ್‌ ಸಿಬ್ಬಂದಿಯಾದ ಕಾರಣ ಛತ್ತೀಸ್‌ಗಢದಲ್ಲಿ ನಿಯೋಜನೆಗೊಂಡಿದ್ದರು. ಎರಡನೇ ಹೆಂಡತಿ ಮತ್ತು ಮಗುವನ್ನು ಆಗಾಗ ಭೇಟಿಯಾಗಲು ಆಗುತ್ತಿರಲಿಲ್ಲ. ಮಗುವಿನೊಂದಿಗೆ ಇದ್ದ ಸಪ್ನಾ ಆಕೆಗೆ ನಿರಂತರ ಕಿರುಕುಳ ನೀಡುತ್ತಿದ್ದರು. ಇದರಿಂದ ಅಂತಿಮವಾಗಿ ಮಗು ಸಾವನ್ನಪ್ಪಿದೆ ಎಂದು ವರದಿ ವಿವರಿಸಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮಗು ಮೃತಪಟ್ಟಿದೆ ಎಂದು ಘೋಷಿಸಿದಾಗ, ಆಕೆಯ ಅಜ್ಜಿ (ರಾಯಣ್ಣನ ಮೊದಲ ಪತ್ನಿಯ ಪೋಷಕರು) ಎಪಿಎಂಸಿ ಪೊಲೀಸರಿಗೆ ದೂರು ನೀಡಿದ್ದರು. ಹುಡುಗಿಯ ಮಲತಾಯಿ ಆಕೆಗೆ ಚಿತ್ರಹಿಂಸೆ ನೀಡಿ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಿದ್ದರು. ಆರಂಭದಲ್ಲಿ ಪೊಲೀಸರು ಬಾಲಕಿಯ ಸಾವು ಅಸಹಜ ಎಂದು ಎಫ್‌ಐಆರ್ ದಾಖಲಿಸಿದ್ದರು. ಈ ಕಾರಣದಿಂದ ಸಪ್ನಾ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಆದರೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿಯ ಸಾವಿನ ನಿಜವಾದ ಕಾರಣ ಬಹಿರಂಗವಾದ ನಂತರ ಗುರುವಾರ ಸಪ್ನಾಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...