Homeಮುಖಪುಟಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದ ನಾಲ್ಕನೇ ಹಂತದ ವಿಧಾನಸಭೆ ಚುನಾವಣೆಯು ಇಂದು ರಾಜಧಾನಿ ಲಕ್ನೋ ಮತ್ತು ಲಖಿಂಪುರ ಖೇರಿ ಸೇರಿದಂತೆ ಉತ್ತರ ಪ್ರದೇಶದ 59 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರಕೋಟೆಯಾದ ರಾಯ್‌ಬರೇಲಿಯ ಐದು ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ.

ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ.

59 ಕ್ಷೇತ್ರಗಳ ಪೈಕಿ 2017ರಲ್ಲಿ ಬಿಜೆಪಿ 51 ಸ್ಥಾನಗಳನ್ನು ಗೆದ್ದುಕೊಂಡಿತು. ನಾಲ್ಕು ಸ್ಥಾನಗಳು ಸಮಾಜವಾದಿ ಪಕ್ಷಕ್ಕೆ, ಎರಡು ಸ್ಥಾನಗಳು ಕಾಂಗ್ರೆಸ್‌ಗೆ ಮತ್ತು ಎರಡು ಮಾಯಾವತಿಯ ಬಹುಜನ ಸಮಾಜ ಪಕ್ಷಕ್ಕೆ ಬಂದಿದ್ದವು. ಬಿಜೆಪಿಯ ಮಿತ್ರ ಪಕ್ಷವಾದ ಅಪ್ನಾ ದಳ (ಸೋನೆಲಾಲ್) ಒಂದು ಸ್ಥಾನವನ್ನು ಗಳಿಸಿತ್ತು.

ಲಖಿಂಪುರ್‌ ಖೇರಿ ಕುತೂಹಲಕಾರಿ: ಅಕ್ಟೋಬರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ನಾಲ್ವರು ರೈತರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆಶಿಶ್ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಆರೋಪಿಯಾಗಿದ್ದಾರೆ. ಹೀಗಾಗಿ ರೈತರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಅಜಯ್‌ ಮಿಶ್ರಾ ಅವರಿಗೂ ಪ್ರತಿಷ್ಠೆಯ ಕಣವಾಗಿದೆ.

ರೈತರ ಮೇಲೆ ವಾಹನವನ್ನು ಹತ್ತಿಸಿ ನಾಲ್ಕು ಜನ ರೈತರ ಹತ್ಯೆಗೆ ಆಶಿಶ್ ಮಿಶ್ರಾ ಕಾರಣವಾಗಿದ್ದು, ತೀವ್ರ ಅಸಮಾಧಾನವನ್ನು ಉಂಟು ಮಾಡಿದೆ. ಆಶಿಶ್ ಮಿಶ್ರಾ ಅವರಿಗೆ ದೊರೆತಿರುವ ಜಾಮೀನು ಪ್ರಶ್ನಿಸಿ ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೇಂದ್ರದ ವಿವಾದಿತ ಕೃಷಿ ಕಾನೂನುಗಳಿಂದಾಗಿ ರೈತರಲ್ಲಿ ಅಸಮಾಧಾನವಿದೆ. ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ, ಎಂಎಸ್‌ಪಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವೂ ರೈತರ ಕೋಪಕ್ಕೆ ಕಾರಣವಾಗಿದೆ.

ಲಖಿಂಪುರ್‌ ಖೇರಿಯ ಎಲ್ಲಾ 8 ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಬಿಜೆಪಿ ಮತ್ತು ಎಸ್‌ಪಿ ಎರಡೂ ಪಕ್ಷಗಳು ಲಖಿಂಪುರ ನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಪುನರಾವರ್ತಿಸಿವೆ. 2017ರ ಚುನಾವಣೆಯಲ್ಲಿ ಈ ಸ್ಥಾನವನ್ನು ಗೆದ್ದ ಬಿಜೆಪಿಯ ಯೋಗೇಶ್ ವರ್ಮಾ ಹಾಗೂ ಸಮಾಜವಾದಿ ಪಕ್ಷದ ಉತ್ಕರ್ಷ್ ವರ್ಮಾ ಮಧುರ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರವಿಶಂಕರ್ ತ್ರಿವೇದಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ರಾಜ್ಯದ ರಾಜಧಾನಿ ಲಕ್ನೋದ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಸರೋಜಿನಿ ನಗರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ. ಅಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್, ಮಾಜಿ ಐಐಎಂ ಪ್ರೊಫೆಸರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಅಭಿಷೇಕ್ ಮಿಶ್ರಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ರಾಜ್ಯ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್‌ನಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ. ರಾಜ್ಯ ಸಚಿವ ಅಶುತೋಷ್ ಟಂಡನ್ ಅವರು ಲಕ್ನೋ ಪೂರ್ವ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅನುರಾಗ್ ಬದೌರಿಯಾ ವಿರುದ್ಧ ಕಣದಲ್ಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ಸಂಸದೀಯ ಸ್ಥಾನದ ಭಾಗವಾಗಿರುವ ರಾಯ್‌ಬರೇಲಿ ಸದರ್‌ನಲ್ಲಿ ಹಾಲಿ ಪಕ್ಷದ ಶಾಸಕಿ ಅದಿತಿ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ನ ಮನೀಶ್ ಚೌಹಾಣ್ ಅವರು ಅದಿತಿ ಸಿಂಗ್‌ ವಿರುದ್ಧ ಸ್ಪರ್ಧಿಸಿದ್ದಾರೆ. ಅದಿತಿ ಸಿಂಗ್ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದ ದಿವಂಗತ ಅಖಿಲೇಶ್ ಸಿಂಗ್ ಅವರ ಪುತ್ರಿ. ಸಮಾಜವಾದಿ ಪಕ್ಷ ಆರ್ ಪಿ ಯಾದವ್ ಅವರನ್ನು ಕಣಕ್ಕಿಳಿಸಿದೆ.

ಮಹಿಳಾ ಮತದಾರರನ್ನು ಪ್ರೇರೇಪಿಸಲು, ರಾಜ್ಯ ಪೊಲೀಸರು 137 “ಪಿಂಕ್ ಬೂತ್‌ಗಳನ್ನು” ರಚಿಸಿದ್ದಾರೆ, ಇವುಗಳನ್ನು ಮಹಿಳಾ ಅಧಿಕಾರಿಗಳೇ ನಿರ್ವಹಿಸುತ್ತಿದ್ದಾರೆ. ಲಕ್ನೋದ ಕ್ರೈಸ್ಟ್ ಚರ್ಚ್ ಕಾಲೇಜು, ಮತ ಚಲಾಯಿಸುವ ಪೋಷಕರ ಮಕ್ಕಳಿಗೆ 10 ಅಂಕಗಳನ್ನು ನೀಡುವುದಾಗಿ ಘೋಷಿಸಿದೆ.

ಏಳು ಹಂತದ ಯುಪಿ ಚುನಾವಣೆಯಲ್ಲಿ ಉಳಿದ ಮೂರು ಹಂತಗಳಿಗೆ ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.


ಇದನ್ನೂ ಓದಿರಿ: ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...