Homeಮುಖಪುಟಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದ ನಾಲ್ಕನೇ ಹಂತದ ವಿಧಾನಸಭೆ ಚುನಾವಣೆಯು ಇಂದು ರಾಜಧಾನಿ ಲಕ್ನೋ ಮತ್ತು ಲಖಿಂಪುರ ಖೇರಿ ಸೇರಿದಂತೆ ಉತ್ತರ ಪ್ರದೇಶದ 59 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರಕೋಟೆಯಾದ ರಾಯ್‌ಬರೇಲಿಯ ಐದು ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ.

ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ.

59 ಕ್ಷೇತ್ರಗಳ ಪೈಕಿ 2017ರಲ್ಲಿ ಬಿಜೆಪಿ 51 ಸ್ಥಾನಗಳನ್ನು ಗೆದ್ದುಕೊಂಡಿತು. ನಾಲ್ಕು ಸ್ಥಾನಗಳು ಸಮಾಜವಾದಿ ಪಕ್ಷಕ್ಕೆ, ಎರಡು ಸ್ಥಾನಗಳು ಕಾಂಗ್ರೆಸ್‌ಗೆ ಮತ್ತು ಎರಡು ಮಾಯಾವತಿಯ ಬಹುಜನ ಸಮಾಜ ಪಕ್ಷಕ್ಕೆ ಬಂದಿದ್ದವು. ಬಿಜೆಪಿಯ ಮಿತ್ರ ಪಕ್ಷವಾದ ಅಪ್ನಾ ದಳ (ಸೋನೆಲಾಲ್) ಒಂದು ಸ್ಥಾನವನ್ನು ಗಳಿಸಿತ್ತು.

ಲಖಿಂಪುರ್‌ ಖೇರಿ ಕುತೂಹಲಕಾರಿ: ಅಕ್ಟೋಬರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ನಾಲ್ವರು ರೈತರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆಶಿಶ್ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಆರೋಪಿಯಾಗಿದ್ದಾರೆ. ಹೀಗಾಗಿ ರೈತರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಅಜಯ್‌ ಮಿಶ್ರಾ ಅವರಿಗೂ ಪ್ರತಿಷ್ಠೆಯ ಕಣವಾಗಿದೆ.

ರೈತರ ಮೇಲೆ ವಾಹನವನ್ನು ಹತ್ತಿಸಿ ನಾಲ್ಕು ಜನ ರೈತರ ಹತ್ಯೆಗೆ ಆಶಿಶ್ ಮಿಶ್ರಾ ಕಾರಣವಾಗಿದ್ದು, ತೀವ್ರ ಅಸಮಾಧಾನವನ್ನು ಉಂಟು ಮಾಡಿದೆ. ಆಶಿಶ್ ಮಿಶ್ರಾ ಅವರಿಗೆ ದೊರೆತಿರುವ ಜಾಮೀನು ಪ್ರಶ್ನಿಸಿ ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೇಂದ್ರದ ವಿವಾದಿತ ಕೃಷಿ ಕಾನೂನುಗಳಿಂದಾಗಿ ರೈತರಲ್ಲಿ ಅಸಮಾಧಾನವಿದೆ. ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ, ಎಂಎಸ್‌ಪಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವೂ ರೈತರ ಕೋಪಕ್ಕೆ ಕಾರಣವಾಗಿದೆ.

ಲಖಿಂಪುರ್‌ ಖೇರಿಯ ಎಲ್ಲಾ 8 ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಬಿಜೆಪಿ ಮತ್ತು ಎಸ್‌ಪಿ ಎರಡೂ ಪಕ್ಷಗಳು ಲಖಿಂಪುರ ನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಪುನರಾವರ್ತಿಸಿವೆ. 2017ರ ಚುನಾವಣೆಯಲ್ಲಿ ಈ ಸ್ಥಾನವನ್ನು ಗೆದ್ದ ಬಿಜೆಪಿಯ ಯೋಗೇಶ್ ವರ್ಮಾ ಹಾಗೂ ಸಮಾಜವಾದಿ ಪಕ್ಷದ ಉತ್ಕರ್ಷ್ ವರ್ಮಾ ಮಧುರ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರವಿಶಂಕರ್ ತ್ರಿವೇದಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ರಾಜ್ಯದ ರಾಜಧಾನಿ ಲಕ್ನೋದ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಸರೋಜಿನಿ ನಗರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ. ಅಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್, ಮಾಜಿ ಐಐಎಂ ಪ್ರೊಫೆಸರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಅಭಿಷೇಕ್ ಮಿಶ್ರಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ರಾಜ್ಯ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್‌ನಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ. ರಾಜ್ಯ ಸಚಿವ ಅಶುತೋಷ್ ಟಂಡನ್ ಅವರು ಲಕ್ನೋ ಪೂರ್ವ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅನುರಾಗ್ ಬದೌರಿಯಾ ವಿರುದ್ಧ ಕಣದಲ್ಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ಸಂಸದೀಯ ಸ್ಥಾನದ ಭಾಗವಾಗಿರುವ ರಾಯ್‌ಬರೇಲಿ ಸದರ್‌ನಲ್ಲಿ ಹಾಲಿ ಪಕ್ಷದ ಶಾಸಕಿ ಅದಿತಿ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ನ ಮನೀಶ್ ಚೌಹಾಣ್ ಅವರು ಅದಿತಿ ಸಿಂಗ್‌ ವಿರುದ್ಧ ಸ್ಪರ್ಧಿಸಿದ್ದಾರೆ. ಅದಿತಿ ಸಿಂಗ್ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದ ದಿವಂಗತ ಅಖಿಲೇಶ್ ಸಿಂಗ್ ಅವರ ಪುತ್ರಿ. ಸಮಾಜವಾದಿ ಪಕ್ಷ ಆರ್ ಪಿ ಯಾದವ್ ಅವರನ್ನು ಕಣಕ್ಕಿಳಿಸಿದೆ.

ಮಹಿಳಾ ಮತದಾರರನ್ನು ಪ್ರೇರೇಪಿಸಲು, ರಾಜ್ಯ ಪೊಲೀಸರು 137 “ಪಿಂಕ್ ಬೂತ್‌ಗಳನ್ನು” ರಚಿಸಿದ್ದಾರೆ, ಇವುಗಳನ್ನು ಮಹಿಳಾ ಅಧಿಕಾರಿಗಳೇ ನಿರ್ವಹಿಸುತ್ತಿದ್ದಾರೆ. ಲಕ್ನೋದ ಕ್ರೈಸ್ಟ್ ಚರ್ಚ್ ಕಾಲೇಜು, ಮತ ಚಲಾಯಿಸುವ ಪೋಷಕರ ಮಕ್ಕಳಿಗೆ 10 ಅಂಕಗಳನ್ನು ನೀಡುವುದಾಗಿ ಘೋಷಿಸಿದೆ.

ಏಳು ಹಂತದ ಯುಪಿ ಚುನಾವಣೆಯಲ್ಲಿ ಉಳಿದ ಮೂರು ಹಂತಗಳಿಗೆ ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.


ಇದನ್ನೂ ಓದಿರಿ: ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....