Homeಮುಖಪುಟಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದ ನಾಲ್ಕನೇ ಹಂತದ ವಿಧಾನಸಭೆ ಚುನಾವಣೆಯು ಇಂದು ರಾಜಧಾನಿ ಲಕ್ನೋ ಮತ್ತು ಲಖಿಂಪುರ ಖೇರಿ ಸೇರಿದಂತೆ ಉತ್ತರ ಪ್ರದೇಶದ 59 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರಕೋಟೆಯಾದ ರಾಯ್‌ಬರೇಲಿಯ ಐದು ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ.

ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ.

59 ಕ್ಷೇತ್ರಗಳ ಪೈಕಿ 2017ರಲ್ಲಿ ಬಿಜೆಪಿ 51 ಸ್ಥಾನಗಳನ್ನು ಗೆದ್ದುಕೊಂಡಿತು. ನಾಲ್ಕು ಸ್ಥಾನಗಳು ಸಮಾಜವಾದಿ ಪಕ್ಷಕ್ಕೆ, ಎರಡು ಸ್ಥಾನಗಳು ಕಾಂಗ್ರೆಸ್‌ಗೆ ಮತ್ತು ಎರಡು ಮಾಯಾವತಿಯ ಬಹುಜನ ಸಮಾಜ ಪಕ್ಷಕ್ಕೆ ಬಂದಿದ್ದವು. ಬಿಜೆಪಿಯ ಮಿತ್ರ ಪಕ್ಷವಾದ ಅಪ್ನಾ ದಳ (ಸೋನೆಲಾಲ್) ಒಂದು ಸ್ಥಾನವನ್ನು ಗಳಿಸಿತ್ತು.

ಲಖಿಂಪುರ್‌ ಖೇರಿ ಕುತೂಹಲಕಾರಿ: ಅಕ್ಟೋಬರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ನಾಲ್ವರು ರೈತರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆಶಿಶ್ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಆರೋಪಿಯಾಗಿದ್ದಾರೆ. ಹೀಗಾಗಿ ರೈತರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಅಜಯ್‌ ಮಿಶ್ರಾ ಅವರಿಗೂ ಪ್ರತಿಷ್ಠೆಯ ಕಣವಾಗಿದೆ.

ರೈತರ ಮೇಲೆ ವಾಹನವನ್ನು ಹತ್ತಿಸಿ ನಾಲ್ಕು ಜನ ರೈತರ ಹತ್ಯೆಗೆ ಆಶಿಶ್ ಮಿಶ್ರಾ ಕಾರಣವಾಗಿದ್ದು, ತೀವ್ರ ಅಸಮಾಧಾನವನ್ನು ಉಂಟು ಮಾಡಿದೆ. ಆಶಿಶ್ ಮಿಶ್ರಾ ಅವರಿಗೆ ದೊರೆತಿರುವ ಜಾಮೀನು ಪ್ರಶ್ನಿಸಿ ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೇಂದ್ರದ ವಿವಾದಿತ ಕೃಷಿ ಕಾನೂನುಗಳಿಂದಾಗಿ ರೈತರಲ್ಲಿ ಅಸಮಾಧಾನವಿದೆ. ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ, ಎಂಎಸ್‌ಪಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವೂ ರೈತರ ಕೋಪಕ್ಕೆ ಕಾರಣವಾಗಿದೆ.

ಲಖಿಂಪುರ್‌ ಖೇರಿಯ ಎಲ್ಲಾ 8 ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಬಿಜೆಪಿ ಮತ್ತು ಎಸ್‌ಪಿ ಎರಡೂ ಪಕ್ಷಗಳು ಲಖಿಂಪುರ ನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಪುನರಾವರ್ತಿಸಿವೆ. 2017ರ ಚುನಾವಣೆಯಲ್ಲಿ ಈ ಸ್ಥಾನವನ್ನು ಗೆದ್ದ ಬಿಜೆಪಿಯ ಯೋಗೇಶ್ ವರ್ಮಾ ಹಾಗೂ ಸಮಾಜವಾದಿ ಪಕ್ಷದ ಉತ್ಕರ್ಷ್ ವರ್ಮಾ ಮಧುರ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರವಿಶಂಕರ್ ತ್ರಿವೇದಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ರಾಜ್ಯದ ರಾಜಧಾನಿ ಲಕ್ನೋದ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಸರೋಜಿನಿ ನಗರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ. ಅಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್, ಮಾಜಿ ಐಐಎಂ ಪ್ರೊಫೆಸರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಅಭಿಷೇಕ್ ಮಿಶ್ರಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ರಾಜ್ಯ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್‌ನಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ. ರಾಜ್ಯ ಸಚಿವ ಅಶುತೋಷ್ ಟಂಡನ್ ಅವರು ಲಕ್ನೋ ಪೂರ್ವ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅನುರಾಗ್ ಬದೌರಿಯಾ ವಿರುದ್ಧ ಕಣದಲ್ಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ಸಂಸದೀಯ ಸ್ಥಾನದ ಭಾಗವಾಗಿರುವ ರಾಯ್‌ಬರೇಲಿ ಸದರ್‌ನಲ್ಲಿ ಹಾಲಿ ಪಕ್ಷದ ಶಾಸಕಿ ಅದಿತಿ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ನ ಮನೀಶ್ ಚೌಹಾಣ್ ಅವರು ಅದಿತಿ ಸಿಂಗ್‌ ವಿರುದ್ಧ ಸ್ಪರ್ಧಿಸಿದ್ದಾರೆ. ಅದಿತಿ ಸಿಂಗ್ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದ ದಿವಂಗತ ಅಖಿಲೇಶ್ ಸಿಂಗ್ ಅವರ ಪುತ್ರಿ. ಸಮಾಜವಾದಿ ಪಕ್ಷ ಆರ್ ಪಿ ಯಾದವ್ ಅವರನ್ನು ಕಣಕ್ಕಿಳಿಸಿದೆ.

ಮಹಿಳಾ ಮತದಾರರನ್ನು ಪ್ರೇರೇಪಿಸಲು, ರಾಜ್ಯ ಪೊಲೀಸರು 137 “ಪಿಂಕ್ ಬೂತ್‌ಗಳನ್ನು” ರಚಿಸಿದ್ದಾರೆ, ಇವುಗಳನ್ನು ಮಹಿಳಾ ಅಧಿಕಾರಿಗಳೇ ನಿರ್ವಹಿಸುತ್ತಿದ್ದಾರೆ. ಲಕ್ನೋದ ಕ್ರೈಸ್ಟ್ ಚರ್ಚ್ ಕಾಲೇಜು, ಮತ ಚಲಾಯಿಸುವ ಪೋಷಕರ ಮಕ್ಕಳಿಗೆ 10 ಅಂಕಗಳನ್ನು ನೀಡುವುದಾಗಿ ಘೋಷಿಸಿದೆ.

ಏಳು ಹಂತದ ಯುಪಿ ಚುನಾವಣೆಯಲ್ಲಿ ಉಳಿದ ಮೂರು ಹಂತಗಳಿಗೆ ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.


ಇದನ್ನೂ ಓದಿರಿ: ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...