Homeಮುಖಪುಟಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದ ನಾಲ್ಕನೇ ಹಂತದ ವಿಧಾನಸಭೆ ಚುನಾವಣೆಯು ಇಂದು ರಾಜಧಾನಿ ಲಕ್ನೋ ಮತ್ತು ಲಖಿಂಪುರ ಖೇರಿ ಸೇರಿದಂತೆ ಉತ್ತರ ಪ್ರದೇಶದ 59 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರಕೋಟೆಯಾದ ರಾಯ್‌ಬರೇಲಿಯ ಐದು ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ.

ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ.

59 ಕ್ಷೇತ್ರಗಳ ಪೈಕಿ 2017ರಲ್ಲಿ ಬಿಜೆಪಿ 51 ಸ್ಥಾನಗಳನ್ನು ಗೆದ್ದುಕೊಂಡಿತು. ನಾಲ್ಕು ಸ್ಥಾನಗಳು ಸಮಾಜವಾದಿ ಪಕ್ಷಕ್ಕೆ, ಎರಡು ಸ್ಥಾನಗಳು ಕಾಂಗ್ರೆಸ್‌ಗೆ ಮತ್ತು ಎರಡು ಮಾಯಾವತಿಯ ಬಹುಜನ ಸಮಾಜ ಪಕ್ಷಕ್ಕೆ ಬಂದಿದ್ದವು. ಬಿಜೆಪಿಯ ಮಿತ್ರ ಪಕ್ಷವಾದ ಅಪ್ನಾ ದಳ (ಸೋನೆಲಾಲ್) ಒಂದು ಸ್ಥಾನವನ್ನು ಗಳಿಸಿತ್ತು.

ಲಖಿಂಪುರ್‌ ಖೇರಿ ಕುತೂಹಲಕಾರಿ: ಅಕ್ಟೋಬರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ನಾಲ್ವರು ರೈತರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆಶಿಶ್ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಆರೋಪಿಯಾಗಿದ್ದಾರೆ. ಹೀಗಾಗಿ ರೈತರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಅಜಯ್‌ ಮಿಶ್ರಾ ಅವರಿಗೂ ಪ್ರತಿಷ್ಠೆಯ ಕಣವಾಗಿದೆ.

ರೈತರ ಮೇಲೆ ವಾಹನವನ್ನು ಹತ್ತಿಸಿ ನಾಲ್ಕು ಜನ ರೈತರ ಹತ್ಯೆಗೆ ಆಶಿಶ್ ಮಿಶ್ರಾ ಕಾರಣವಾಗಿದ್ದು, ತೀವ್ರ ಅಸಮಾಧಾನವನ್ನು ಉಂಟು ಮಾಡಿದೆ. ಆಶಿಶ್ ಮಿಶ್ರಾ ಅವರಿಗೆ ದೊರೆತಿರುವ ಜಾಮೀನು ಪ್ರಶ್ನಿಸಿ ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೇಂದ್ರದ ವಿವಾದಿತ ಕೃಷಿ ಕಾನೂನುಗಳಿಂದಾಗಿ ರೈತರಲ್ಲಿ ಅಸಮಾಧಾನವಿದೆ. ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ, ಎಂಎಸ್‌ಪಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವೂ ರೈತರ ಕೋಪಕ್ಕೆ ಕಾರಣವಾಗಿದೆ.

ಲಖಿಂಪುರ್‌ ಖೇರಿಯ ಎಲ್ಲಾ 8 ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಬಿಜೆಪಿ ಮತ್ತು ಎಸ್‌ಪಿ ಎರಡೂ ಪಕ್ಷಗಳು ಲಖಿಂಪುರ ನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಪುನರಾವರ್ತಿಸಿವೆ. 2017ರ ಚುನಾವಣೆಯಲ್ಲಿ ಈ ಸ್ಥಾನವನ್ನು ಗೆದ್ದ ಬಿಜೆಪಿಯ ಯೋಗೇಶ್ ವರ್ಮಾ ಹಾಗೂ ಸಮಾಜವಾದಿ ಪಕ್ಷದ ಉತ್ಕರ್ಷ್ ವರ್ಮಾ ಮಧುರ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರವಿಶಂಕರ್ ತ್ರಿವೇದಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ರಾಜ್ಯದ ರಾಜಧಾನಿ ಲಕ್ನೋದ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಸರೋಜಿನಿ ನಗರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ. ಅಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್, ಮಾಜಿ ಐಐಎಂ ಪ್ರೊಫೆಸರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಅಭಿಷೇಕ್ ಮಿಶ್ರಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ರಾಜ್ಯ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್‌ನಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ. ರಾಜ್ಯ ಸಚಿವ ಅಶುತೋಷ್ ಟಂಡನ್ ಅವರು ಲಕ್ನೋ ಪೂರ್ವ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅನುರಾಗ್ ಬದೌರಿಯಾ ವಿರುದ್ಧ ಕಣದಲ್ಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ಸಂಸದೀಯ ಸ್ಥಾನದ ಭಾಗವಾಗಿರುವ ರಾಯ್‌ಬರೇಲಿ ಸದರ್‌ನಲ್ಲಿ ಹಾಲಿ ಪಕ್ಷದ ಶಾಸಕಿ ಅದಿತಿ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ನ ಮನೀಶ್ ಚೌಹಾಣ್ ಅವರು ಅದಿತಿ ಸಿಂಗ್‌ ವಿರುದ್ಧ ಸ್ಪರ್ಧಿಸಿದ್ದಾರೆ. ಅದಿತಿ ಸಿಂಗ್ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದ ದಿವಂಗತ ಅಖಿಲೇಶ್ ಸಿಂಗ್ ಅವರ ಪುತ್ರಿ. ಸಮಾಜವಾದಿ ಪಕ್ಷ ಆರ್ ಪಿ ಯಾದವ್ ಅವರನ್ನು ಕಣಕ್ಕಿಳಿಸಿದೆ.

ಮಹಿಳಾ ಮತದಾರರನ್ನು ಪ್ರೇರೇಪಿಸಲು, ರಾಜ್ಯ ಪೊಲೀಸರು 137 “ಪಿಂಕ್ ಬೂತ್‌ಗಳನ್ನು” ರಚಿಸಿದ್ದಾರೆ, ಇವುಗಳನ್ನು ಮಹಿಳಾ ಅಧಿಕಾರಿಗಳೇ ನಿರ್ವಹಿಸುತ್ತಿದ್ದಾರೆ. ಲಕ್ನೋದ ಕ್ರೈಸ್ಟ್ ಚರ್ಚ್ ಕಾಲೇಜು, ಮತ ಚಲಾಯಿಸುವ ಪೋಷಕರ ಮಕ್ಕಳಿಗೆ 10 ಅಂಕಗಳನ್ನು ನೀಡುವುದಾಗಿ ಘೋಷಿಸಿದೆ.

ಏಳು ಹಂತದ ಯುಪಿ ಚುನಾವಣೆಯಲ್ಲಿ ಉಳಿದ ಮೂರು ಹಂತಗಳಿಗೆ ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.


ಇದನ್ನೂ ಓದಿರಿ: ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....