Homeಅಂತರಾಷ್ಟ್ರೀಯಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

ಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

- Advertisement -
- Advertisement -

ಇಂದು ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಮೆಡಿಟರೇನಿಯನ್ ನಗರದ ಚರ್ಚ್‌ನಲ್ಲಿ ನಡೆದ ಚಾಕು ದಾಳಿಯ ಬಗ್ಗೆ ’ಫ್ರೆಂಚ್ ಭಯೋತ್ಪಾದನಾ ವಿರೋಧಿ ಪ್ರಾಸಿಕ್ಯೂಟ‍ರ್‌’ ತನಿಖೆ ನಡೆಸುತ್ತಿದ್ದಾರೆ. ಭಯೋತ್ಪಾದನಾ ಪ್ರೇರಿತ ದಾಳಿಯ ಬಗ್ಗೆ ತನಿಖೆಯನ್ನು ಆರಂಭಿಸಲಾಗಿದೆ ಎಂದು ಪ್ರಾಸಿಕ್ಯೂಟರ್ ಕಚೇರಿ ಮತ್ತು ರಾಷ್ಟ್ರೀಯ ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Explainer: ಜೀನೋಮ್ ಎಡಿಟಿಂಗ್‌ಗೆ ರಸಾಯನಶಾಸ್ತ್ರದ ನೊಬೆಲ್ ಮತ್ತು ವಿವಾದ

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ನೈಸ್‌ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೇಯರ್‌ ಎಸ್ಟ್ರೋಸಿ ಹೇಳಿದ್ದಾರೆ. ಪ್ಯಾರಿಸ್‌ನಲ್ಲಿ ರಾಷ್ಟ್ರೀಯ ಅಸೆಂಬ್ಲಿಯ ಶಾಸಕರು ಸಂತ್ರಸ್ತರಿಗೆ ಒಗ್ಗಟ್ಟಿನಿಂದ ಒಂದು ನಿಮಿಷದ ಮೌನವನ್ನು ಆಚರಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲ್ಲಾಹನ ಹೆಸರಲ್ಲಿ ಮಹಿಳೆಯರ ಕೊಲೆ.
    ಇದನ್ನು ಯಾವುದೇ ಕಾರಣಕ್ಕೂ ಇಸ್ಲಾಮ್ ಧರ್ಮ ಒಪ್ಪುವುದಿಲ್ಲ.
    ಇದರ ಹಿಂದೆ ಯಾವುದೋ ಪಿತೂರಿ ಇರಬಹುದು ಸರಿಯಾದ ತನಿಖೆ ನಡೆದು ಅಪರಾಧಿ ಗೆ ಕಠಿಣವಾದ ಶಿಕ್ಷೆಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...