Homeಅಂತರಾಷ್ಟ್ರೀಯಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

ಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

- Advertisement -
- Advertisement -

ಇಂದು ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಮೆಡಿಟರೇನಿಯನ್ ನಗರದ ಚರ್ಚ್‌ನಲ್ಲಿ ನಡೆದ ಚಾಕು ದಾಳಿಯ ಬಗ್ಗೆ ’ಫ್ರೆಂಚ್ ಭಯೋತ್ಪಾದನಾ ವಿರೋಧಿ ಪ್ರಾಸಿಕ್ಯೂಟ‍ರ್‌’ ತನಿಖೆ ನಡೆಸುತ್ತಿದ್ದಾರೆ. ಭಯೋತ್ಪಾದನಾ ಪ್ರೇರಿತ ದಾಳಿಯ ಬಗ್ಗೆ ತನಿಖೆಯನ್ನು ಆರಂಭಿಸಲಾಗಿದೆ ಎಂದು ಪ್ರಾಸಿಕ್ಯೂಟರ್ ಕಚೇರಿ ಮತ್ತು ರಾಷ್ಟ್ರೀಯ ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Explainer: ಜೀನೋಮ್ ಎಡಿಟಿಂಗ್‌ಗೆ ರಸಾಯನಶಾಸ್ತ್ರದ ನೊಬೆಲ್ ಮತ್ತು ವಿವಾದ

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ನೈಸ್‌ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೇಯರ್‌ ಎಸ್ಟ್ರೋಸಿ ಹೇಳಿದ್ದಾರೆ. ಪ್ಯಾರಿಸ್‌ನಲ್ಲಿ ರಾಷ್ಟ್ರೀಯ ಅಸೆಂಬ್ಲಿಯ ಶಾಸಕರು ಸಂತ್ರಸ್ತರಿಗೆ ಒಗ್ಗಟ್ಟಿನಿಂದ ಒಂದು ನಿಮಿಷದ ಮೌನವನ್ನು ಆಚರಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲ್ಲಾಹನ ಹೆಸರಲ್ಲಿ ಮಹಿಳೆಯರ ಕೊಲೆ.
    ಇದನ್ನು ಯಾವುದೇ ಕಾರಣಕ್ಕೂ ಇಸ್ಲಾಮ್ ಧರ್ಮ ಒಪ್ಪುವುದಿಲ್ಲ.
    ಇದರ ಹಿಂದೆ ಯಾವುದೋ ಪಿತೂರಿ ಇರಬಹುದು ಸರಿಯಾದ ತನಿಖೆ ನಡೆದು ಅಪರಾಧಿ ಗೆ ಕಠಿಣವಾದ ಶಿಕ್ಷೆಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...