HomeUncategorizedಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

- Advertisement -
- Advertisement -

ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನದ ಮೇಲೆ, 2016 ರ ಬಹು-ಶತಕೋಟಿ ಡಾಲರ್ ಮೊತ್ತದ ರಫೇಲ್ ಫೈಟರ್ ಜೆಟ್‌ಗಳನ್ನು ಭಾರತಕ್ಕೆ ಮಾರಾಟ ಮಾಡಿದ ಬಗ್ಗೆ ತನಿಖೆ ನಡೆಸಲು ಫ್ರೆಂಚ್ ನ್ಯಾಯಾಧೀಶರನ್ನು ನೇಮಿಸಲಾಗಿದೆ ಎಂದು ‘ರಾಷ್ಟ್ರೀಯ ಹಣಕಾಸು ಅಭಿಯೋಜಕರ ಕಚೇರಿ’ (ಪಿಎನ್‌ಎಫ್) ಶುಕ್ರವಾರ ತಿಳಿಸಿದೆ. ‘ಪಿಎನ್‌ಎಫ್‌’  ಫ್ರಾನ್ಸ್‌ನ ನ್ಯಾಯಾಂಗ ಸಂಸ್ಥೆಯಾಗಿದ್ದು ಇದು ಗಂಭೀರ ಆರ್ಥಿಕ ಮತ್ತು ಹಣಕಾಸಿನ ಅಪರಾಧಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತದೆ.

ರಫೇಲ್‌ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಸಾಬಿತಾದರೆ ಭಾರತದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಲಿದ್ದು, ಪ್ರಧಾನಿ ಮೋದಿಗೆ ಹಿನ್ನಡೆ ಆಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಮತ್ತು ಫ್ರೆಂಚ್ ವಿಮಾನ ತಯಾರಕ ಡಸಾಲ್ಟ್ ನಡುವಿನ 36 ವಿಮಾನಗಳಿಗೆ 7.8 ಬಿಲಿಯನ್ ಯುರೋ ( 9.3 ಬಿಲಿಯನ್ ಡಾಲರ್‌‌) ಒಪ್ಪಂದವು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದೆ. ಇದು ರಾಜಕೀಯವಾಗಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದನ್ನು ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಫ್ರೆಂಚ್ ತನಿಖಾ ವೆಬ್‌ಸೈಟ್ ಆಗಿರುವ ಮೀಡಿಯಾಪಾರ್ಟ್‌ ಕಳೆದ ಏಪ್ರೀಲ್‌ನಲ್ಲಿ ರಫೇಲ್‌ ಮಾರಾಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹಲವಾರು ವರದಿಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ‘ಪಿಎನ್‌ಎಫ್’ 2016 ರ ರಫೇಲ್‌ ಒಪ್ಪಂದದ ಸುತ್ತಲಿನ ಅನುಮಾನಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸಿದೆ.

ಮೀಡಿಯಾಪಾರ್ಟ್ ವೆಬ್‌ಸೈಟ್‌ ಏಪ್ರಿಲ್‌ನಲ್ಲಿ ಮಾಡಿದ್ದ ವರದಿಯಲ್ಲಿ, “ಗುಪ್ತವಾಗಿ ಲಕ್ಷಾಂತರ ಯುರೋಗಳಷ್ಟು ಕಮೀಷನ್‌‌ಗಳನ್ನು ಮಾರಾಟ ಮಾಡಲು ಸಹಾಯ ಮಾಡಿದವರಿಗೆ ನೀಡಲಾಗಿದೆ” ಎಂದು ಹೇಳಿದೆ. ಈ ಹಣಗಳಲ್ಲಿ ಒಂದಷ್ಟು ಲಂಚವಾಗಿ ಭಾರತೀಯ ಅಧಿಕಾರಿಗಳಿಗೆ ಕೂಡಾ ನೀಡಲಾಗಿತ್ತು ಎಂದು ಅದು ಉಲ್ಲೇಖಿಸಿದೆ.

ಈ ವರದಿಗಳ ನಂತರ, ಹಣಕಾಸಿನ ಅಪರಾಧದಲ್ಲಿ ಪರಿಣತಿ ಹೊಂದಿರುವ ‘ಫ್ರಾನ್ಸ್‌ನ ಶೆರ್ಪಾ ಎನ್‌ಜಿಒ’, ಇತರ ಆರೋಪಗಳೊಂದಿಗೆ ಭ್ರಷ್ಟಾಚಾರ ಮತ್ತು ಪ್ರಭಾವ ಬೀರಿದ್ದಕ್ಕಾಗಿ ಅಧಿಕೃತ ದೂರು ದಾಖಲಿಸಿದ್ದು, ಒಪ್ಪಂದದ ತನಿಖೆಗಾಗಿ ತನಿಖಾ ಮ್ಯಾಜಿಸ್ಟ್ರೇಟ್‌ನನ್ನು ನೇಮಕ ಮಾಡಲು ಒತ್ತಾಯಿಸಿತ್ತು.

ಶೆರ್ಪಾ 2018 ರಲ್ಲಿ ಈ ಒಪ್ಪಂದದ ಬಗ್ಗೆ ತನಿಖೆ ತನಿಖೆ ನಡೆಸಬೇಕು ಎಂದು ಕೇಳಿದ್ದರು, ಆದರೆ ಪಿಎನ್‌ಎಫ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅದು ತನ್ನ ಈ ಮೊದಲ ದೂರಿನಲ್ಲಿ, ಡಸಾಲ್ಟ್ ತನ್ನ ಭಾರತೀಯ ಪಾಲುದಾರನಾಗಿ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿದೆ ಎಂಬ ಅಂಶವನ್ನು ಖಂಡಿಸಿತ್ತು. ರಿಲಾಯನ್ಸ್‌‌ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆಯಾಗಿದೆ.

ಇದನ್ನು ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ಭಾರತಕ್ಕೆ 126 ಜೆಟ್‌ಗಳನ್ನು ಪೂರೈಸುವ ಒಪ್ಪಂದವನ್ನು ಡಸಾಲ್ಟ್ 2012 ರಲ್ಲಿ ಮಾಡಿಕೊಂಡಿತ್ತು ಮತ್ತು ಭಾರತೀಯ ಏರೋಸ್ಪೇಸ್ ಕಂಪನಿಯಾದ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ನೊಂದಿಗೆ ಮಾತುಕತೆ ಕೂಡಾ ನಡೆಸಿತ್ತು.

ಮಾರ್ಚ್ 2015 ರ ಹೊತ್ತಿಗೆ, ಈ ಮಾತುಕತೆಗಳು ಬಹುತೇಕ ತೀರ್ಮಾನಕ್ಕೆ ಬಂದಿದ್ದವು ಎಂದು ಡಸಾಲ್ಟ್ ಹೇಳಿತ್ತು. ಆದರೆ ಅದೇ ವರ್ಷದ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ ನಂತರ, ಈ ಒಪ್ಪಂದದ ಮಾತುಕತೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು.

ಈ ಮಧ್ಯೆ ಏರೋನಾಟಿಕ್ಸ್‌ನಲ್ಲಿ ಯಾವುದೇ ಅನುಭವವಿಲ್ಲದ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿ ಕೇವಲ 36 ಜೆಟ್‌ಗಳಿಗೆ ಹೊಸ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಈ ಮಾತುಕತೆ ನಡೆಯುತ್ತಿದ್ದ ಜನವರಿ 2016 ರ ಸಮಯದಲ್ಲಿ ಫ್ರಾಸ್ಸ್‌ನ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಸಹ-ಪಾಲುದಾರ ಜೂಲಿ ಗಯೆಟ್ ನಿರ್ಮಿಸಿದ ಚಿತ್ರಕ್ಕೆ ರಿಲಯನ್ಸ್ ಹಣಕಾಸು ಒದಗಿಸಿತ್ತು.

ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಮಯದಲ್ಲಿಯೆ, ರಿಲಾಯನ್ಸ್‌ಗೆ ಸೇರಿದ ಫ್ರೆಂಚ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು, 2015 ರಲ್ಲಿ ಫ್ರಾನ್ಸ್ ಸರ್ಕಾರವು 143.7 ಮಿಲಿಯನ್ ಯುರೋ ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸಿದೆ ಎಂದು ಫ್ರಾನ್ಸ್‌ನ ಲೆ ಮಾಂಡೆ ಪತ್ರಿಕೆ ಬಹಿರಂಗಪಡಿಸಿದೆ.

ಇದನ್ನು ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ನೀಡಲಾಗುತ್ತದೆ; ಇದರ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...