HomeUncategorizedಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

- Advertisement -
- Advertisement -

ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನದ ಮೇಲೆ, 2016 ರ ಬಹು-ಶತಕೋಟಿ ಡಾಲರ್ ಮೊತ್ತದ ರಫೇಲ್ ಫೈಟರ್ ಜೆಟ್‌ಗಳನ್ನು ಭಾರತಕ್ಕೆ ಮಾರಾಟ ಮಾಡಿದ ಬಗ್ಗೆ ತನಿಖೆ ನಡೆಸಲು ಫ್ರೆಂಚ್ ನ್ಯಾಯಾಧೀಶರನ್ನು ನೇಮಿಸಲಾಗಿದೆ ಎಂದು ‘ರಾಷ್ಟ್ರೀಯ ಹಣಕಾಸು ಅಭಿಯೋಜಕರ ಕಚೇರಿ’ (ಪಿಎನ್‌ಎಫ್) ಶುಕ್ರವಾರ ತಿಳಿಸಿದೆ. ‘ಪಿಎನ್‌ಎಫ್‌’  ಫ್ರಾನ್ಸ್‌ನ ನ್ಯಾಯಾಂಗ ಸಂಸ್ಥೆಯಾಗಿದ್ದು ಇದು ಗಂಭೀರ ಆರ್ಥಿಕ ಮತ್ತು ಹಣಕಾಸಿನ ಅಪರಾಧಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತದೆ.

ರಫೇಲ್‌ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಸಾಬಿತಾದರೆ ಭಾರತದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಲಿದ್ದು, ಪ್ರಧಾನಿ ಮೋದಿಗೆ ಹಿನ್ನಡೆ ಆಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಮತ್ತು ಫ್ರೆಂಚ್ ವಿಮಾನ ತಯಾರಕ ಡಸಾಲ್ಟ್ ನಡುವಿನ 36 ವಿಮಾನಗಳಿಗೆ 7.8 ಬಿಲಿಯನ್ ಯುರೋ ( 9.3 ಬಿಲಿಯನ್ ಡಾಲರ್‌‌) ಒಪ್ಪಂದವು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದೆ. ಇದು ರಾಜಕೀಯವಾಗಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದನ್ನು ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಫ್ರೆಂಚ್ ತನಿಖಾ ವೆಬ್‌ಸೈಟ್ ಆಗಿರುವ ಮೀಡಿಯಾಪಾರ್ಟ್‌ ಕಳೆದ ಏಪ್ರೀಲ್‌ನಲ್ಲಿ ರಫೇಲ್‌ ಮಾರಾಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹಲವಾರು ವರದಿಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ‘ಪಿಎನ್‌ಎಫ್’ 2016 ರ ರಫೇಲ್‌ ಒಪ್ಪಂದದ ಸುತ್ತಲಿನ ಅನುಮಾನಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸಿದೆ.

ಮೀಡಿಯಾಪಾರ್ಟ್ ವೆಬ್‌ಸೈಟ್‌ ಏಪ್ರಿಲ್‌ನಲ್ಲಿ ಮಾಡಿದ್ದ ವರದಿಯಲ್ಲಿ, “ಗುಪ್ತವಾಗಿ ಲಕ್ಷಾಂತರ ಯುರೋಗಳಷ್ಟು ಕಮೀಷನ್‌‌ಗಳನ್ನು ಮಾರಾಟ ಮಾಡಲು ಸಹಾಯ ಮಾಡಿದವರಿಗೆ ನೀಡಲಾಗಿದೆ” ಎಂದು ಹೇಳಿದೆ. ಈ ಹಣಗಳಲ್ಲಿ ಒಂದಷ್ಟು ಲಂಚವಾಗಿ ಭಾರತೀಯ ಅಧಿಕಾರಿಗಳಿಗೆ ಕೂಡಾ ನೀಡಲಾಗಿತ್ತು ಎಂದು ಅದು ಉಲ್ಲೇಖಿಸಿದೆ.

ಈ ವರದಿಗಳ ನಂತರ, ಹಣಕಾಸಿನ ಅಪರಾಧದಲ್ಲಿ ಪರಿಣತಿ ಹೊಂದಿರುವ ‘ಫ್ರಾನ್ಸ್‌ನ ಶೆರ್ಪಾ ಎನ್‌ಜಿಒ’, ಇತರ ಆರೋಪಗಳೊಂದಿಗೆ ಭ್ರಷ್ಟಾಚಾರ ಮತ್ತು ಪ್ರಭಾವ ಬೀರಿದ್ದಕ್ಕಾಗಿ ಅಧಿಕೃತ ದೂರು ದಾಖಲಿಸಿದ್ದು, ಒಪ್ಪಂದದ ತನಿಖೆಗಾಗಿ ತನಿಖಾ ಮ್ಯಾಜಿಸ್ಟ್ರೇಟ್‌ನನ್ನು ನೇಮಕ ಮಾಡಲು ಒತ್ತಾಯಿಸಿತ್ತು.

ಶೆರ್ಪಾ 2018 ರಲ್ಲಿ ಈ ಒಪ್ಪಂದದ ಬಗ್ಗೆ ತನಿಖೆ ತನಿಖೆ ನಡೆಸಬೇಕು ಎಂದು ಕೇಳಿದ್ದರು, ಆದರೆ ಪಿಎನ್‌ಎಫ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅದು ತನ್ನ ಈ ಮೊದಲ ದೂರಿನಲ್ಲಿ, ಡಸಾಲ್ಟ್ ತನ್ನ ಭಾರತೀಯ ಪಾಲುದಾರನಾಗಿ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿದೆ ಎಂಬ ಅಂಶವನ್ನು ಖಂಡಿಸಿತ್ತು. ರಿಲಾಯನ್ಸ್‌‌ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆಯಾಗಿದೆ.

ಇದನ್ನು ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ಭಾರತಕ್ಕೆ 126 ಜೆಟ್‌ಗಳನ್ನು ಪೂರೈಸುವ ಒಪ್ಪಂದವನ್ನು ಡಸಾಲ್ಟ್ 2012 ರಲ್ಲಿ ಮಾಡಿಕೊಂಡಿತ್ತು ಮತ್ತು ಭಾರತೀಯ ಏರೋಸ್ಪೇಸ್ ಕಂಪನಿಯಾದ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ನೊಂದಿಗೆ ಮಾತುಕತೆ ಕೂಡಾ ನಡೆಸಿತ್ತು.

ಮಾರ್ಚ್ 2015 ರ ಹೊತ್ತಿಗೆ, ಈ ಮಾತುಕತೆಗಳು ಬಹುತೇಕ ತೀರ್ಮಾನಕ್ಕೆ ಬಂದಿದ್ದವು ಎಂದು ಡಸಾಲ್ಟ್ ಹೇಳಿತ್ತು. ಆದರೆ ಅದೇ ವರ್ಷದ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ ನಂತರ, ಈ ಒಪ್ಪಂದದ ಮಾತುಕತೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು.

ಈ ಮಧ್ಯೆ ಏರೋನಾಟಿಕ್ಸ್‌ನಲ್ಲಿ ಯಾವುದೇ ಅನುಭವವಿಲ್ಲದ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿ ಕೇವಲ 36 ಜೆಟ್‌ಗಳಿಗೆ ಹೊಸ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಈ ಮಾತುಕತೆ ನಡೆಯುತ್ತಿದ್ದ ಜನವರಿ 2016 ರ ಸಮಯದಲ್ಲಿ ಫ್ರಾಸ್ಸ್‌ನ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಸಹ-ಪಾಲುದಾರ ಜೂಲಿ ಗಯೆಟ್ ನಿರ್ಮಿಸಿದ ಚಿತ್ರಕ್ಕೆ ರಿಲಯನ್ಸ್ ಹಣಕಾಸು ಒದಗಿಸಿತ್ತು.

ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಮಯದಲ್ಲಿಯೆ, ರಿಲಾಯನ್ಸ್‌ಗೆ ಸೇರಿದ ಫ್ರೆಂಚ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು, 2015 ರಲ್ಲಿ ಫ್ರಾನ್ಸ್ ಸರ್ಕಾರವು 143.7 ಮಿಲಿಯನ್ ಯುರೋ ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸಿದೆ ಎಂದು ಫ್ರಾನ್ಸ್‌ನ ಲೆ ಮಾಂಡೆ ಪತ್ರಿಕೆ ಬಹಿರಂಗಪಡಿಸಿದೆ.

ಇದನ್ನು ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ನೀಡಲಾಗುತ್ತದೆ; ಇದರ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...