HomeUncategorizedಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

- Advertisement -
- Advertisement -

ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನದ ಮೇಲೆ, 2016 ರ ಬಹು-ಶತಕೋಟಿ ಡಾಲರ್ ಮೊತ್ತದ ರಫೇಲ್ ಫೈಟರ್ ಜೆಟ್‌ಗಳನ್ನು ಭಾರತಕ್ಕೆ ಮಾರಾಟ ಮಾಡಿದ ಬಗ್ಗೆ ತನಿಖೆ ನಡೆಸಲು ಫ್ರೆಂಚ್ ನ್ಯಾಯಾಧೀಶರನ್ನು ನೇಮಿಸಲಾಗಿದೆ ಎಂದು ‘ರಾಷ್ಟ್ರೀಯ ಹಣಕಾಸು ಅಭಿಯೋಜಕರ ಕಚೇರಿ’ (ಪಿಎನ್‌ಎಫ್) ಶುಕ್ರವಾರ ತಿಳಿಸಿದೆ. ‘ಪಿಎನ್‌ಎಫ್‌’  ಫ್ರಾನ್ಸ್‌ನ ನ್ಯಾಯಾಂಗ ಸಂಸ್ಥೆಯಾಗಿದ್ದು ಇದು ಗಂಭೀರ ಆರ್ಥಿಕ ಮತ್ತು ಹಣಕಾಸಿನ ಅಪರಾಧಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತದೆ.

ರಫೇಲ್‌ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಸಾಬಿತಾದರೆ ಭಾರತದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಲಿದ್ದು, ಪ್ರಧಾನಿ ಮೋದಿಗೆ ಹಿನ್ನಡೆ ಆಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಮತ್ತು ಫ್ರೆಂಚ್ ವಿಮಾನ ತಯಾರಕ ಡಸಾಲ್ಟ್ ನಡುವಿನ 36 ವಿಮಾನಗಳಿಗೆ 7.8 ಬಿಲಿಯನ್ ಯುರೋ ( 9.3 ಬಿಲಿಯನ್ ಡಾಲರ್‌‌) ಒಪ್ಪಂದವು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದೆ. ಇದು ರಾಜಕೀಯವಾಗಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದನ್ನು ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಫ್ರೆಂಚ್ ತನಿಖಾ ವೆಬ್‌ಸೈಟ್ ಆಗಿರುವ ಮೀಡಿಯಾಪಾರ್ಟ್‌ ಕಳೆದ ಏಪ್ರೀಲ್‌ನಲ್ಲಿ ರಫೇಲ್‌ ಮಾರಾಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹಲವಾರು ವರದಿಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ‘ಪಿಎನ್‌ಎಫ್’ 2016 ರ ರಫೇಲ್‌ ಒಪ್ಪಂದದ ಸುತ್ತಲಿನ ಅನುಮಾನಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸಿದೆ.

ಮೀಡಿಯಾಪಾರ್ಟ್ ವೆಬ್‌ಸೈಟ್‌ ಏಪ್ರಿಲ್‌ನಲ್ಲಿ ಮಾಡಿದ್ದ ವರದಿಯಲ್ಲಿ, “ಗುಪ್ತವಾಗಿ ಲಕ್ಷಾಂತರ ಯುರೋಗಳಷ್ಟು ಕಮೀಷನ್‌‌ಗಳನ್ನು ಮಾರಾಟ ಮಾಡಲು ಸಹಾಯ ಮಾಡಿದವರಿಗೆ ನೀಡಲಾಗಿದೆ” ಎಂದು ಹೇಳಿದೆ. ಈ ಹಣಗಳಲ್ಲಿ ಒಂದಷ್ಟು ಲಂಚವಾಗಿ ಭಾರತೀಯ ಅಧಿಕಾರಿಗಳಿಗೆ ಕೂಡಾ ನೀಡಲಾಗಿತ್ತು ಎಂದು ಅದು ಉಲ್ಲೇಖಿಸಿದೆ.

ಈ ವರದಿಗಳ ನಂತರ, ಹಣಕಾಸಿನ ಅಪರಾಧದಲ್ಲಿ ಪರಿಣತಿ ಹೊಂದಿರುವ ‘ಫ್ರಾನ್ಸ್‌ನ ಶೆರ್ಪಾ ಎನ್‌ಜಿಒ’, ಇತರ ಆರೋಪಗಳೊಂದಿಗೆ ಭ್ರಷ್ಟಾಚಾರ ಮತ್ತು ಪ್ರಭಾವ ಬೀರಿದ್ದಕ್ಕಾಗಿ ಅಧಿಕೃತ ದೂರು ದಾಖಲಿಸಿದ್ದು, ಒಪ್ಪಂದದ ತನಿಖೆಗಾಗಿ ತನಿಖಾ ಮ್ಯಾಜಿಸ್ಟ್ರೇಟ್‌ನನ್ನು ನೇಮಕ ಮಾಡಲು ಒತ್ತಾಯಿಸಿತ್ತು.

ಶೆರ್ಪಾ 2018 ರಲ್ಲಿ ಈ ಒಪ್ಪಂದದ ಬಗ್ಗೆ ತನಿಖೆ ತನಿಖೆ ನಡೆಸಬೇಕು ಎಂದು ಕೇಳಿದ್ದರು, ಆದರೆ ಪಿಎನ್‌ಎಫ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅದು ತನ್ನ ಈ ಮೊದಲ ದೂರಿನಲ್ಲಿ, ಡಸಾಲ್ಟ್ ತನ್ನ ಭಾರತೀಯ ಪಾಲುದಾರನಾಗಿ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿದೆ ಎಂಬ ಅಂಶವನ್ನು ಖಂಡಿಸಿತ್ತು. ರಿಲಾಯನ್ಸ್‌‌ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆಯಾಗಿದೆ.

ಇದನ್ನು ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ಭಾರತಕ್ಕೆ 126 ಜೆಟ್‌ಗಳನ್ನು ಪೂರೈಸುವ ಒಪ್ಪಂದವನ್ನು ಡಸಾಲ್ಟ್ 2012 ರಲ್ಲಿ ಮಾಡಿಕೊಂಡಿತ್ತು ಮತ್ತು ಭಾರತೀಯ ಏರೋಸ್ಪೇಸ್ ಕಂಪನಿಯಾದ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ನೊಂದಿಗೆ ಮಾತುಕತೆ ಕೂಡಾ ನಡೆಸಿತ್ತು.

ಮಾರ್ಚ್ 2015 ರ ಹೊತ್ತಿಗೆ, ಈ ಮಾತುಕತೆಗಳು ಬಹುತೇಕ ತೀರ್ಮಾನಕ್ಕೆ ಬಂದಿದ್ದವು ಎಂದು ಡಸಾಲ್ಟ್ ಹೇಳಿತ್ತು. ಆದರೆ ಅದೇ ವರ್ಷದ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ ನಂತರ, ಈ ಒಪ್ಪಂದದ ಮಾತುಕತೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು.

ಈ ಮಧ್ಯೆ ಏರೋನಾಟಿಕ್ಸ್‌ನಲ್ಲಿ ಯಾವುದೇ ಅನುಭವವಿಲ್ಲದ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿ ಕೇವಲ 36 ಜೆಟ್‌ಗಳಿಗೆ ಹೊಸ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಈ ಮಾತುಕತೆ ನಡೆಯುತ್ತಿದ್ದ ಜನವರಿ 2016 ರ ಸಮಯದಲ್ಲಿ ಫ್ರಾಸ್ಸ್‌ನ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಸಹ-ಪಾಲುದಾರ ಜೂಲಿ ಗಯೆಟ್ ನಿರ್ಮಿಸಿದ ಚಿತ್ರಕ್ಕೆ ರಿಲಯನ್ಸ್ ಹಣಕಾಸು ಒದಗಿಸಿತ್ತು.

ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಮಯದಲ್ಲಿಯೆ, ರಿಲಾಯನ್ಸ್‌ಗೆ ಸೇರಿದ ಫ್ರೆಂಚ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು, 2015 ರಲ್ಲಿ ಫ್ರಾನ್ಸ್ ಸರ್ಕಾರವು 143.7 ಮಿಲಿಯನ್ ಯುರೋ ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸಿದೆ ಎಂದು ಫ್ರಾನ್ಸ್‌ನ ಲೆ ಮಾಂಡೆ ಪತ್ರಿಕೆ ಬಹಿರಂಗಪಡಿಸಿದೆ.

ಇದನ್ನು ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ನೀಡಲಾಗುತ್ತದೆ; ಇದರ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...