HomeUncategorizedಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

- Advertisement -
- Advertisement -

ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನದ ಮೇಲೆ, 2016 ರ ಬಹು-ಶತಕೋಟಿ ಡಾಲರ್ ಮೊತ್ತದ ರಫೇಲ್ ಫೈಟರ್ ಜೆಟ್‌ಗಳನ್ನು ಭಾರತಕ್ಕೆ ಮಾರಾಟ ಮಾಡಿದ ಬಗ್ಗೆ ತನಿಖೆ ನಡೆಸಲು ಫ್ರೆಂಚ್ ನ್ಯಾಯಾಧೀಶರನ್ನು ನೇಮಿಸಲಾಗಿದೆ ಎಂದು ‘ರಾಷ್ಟ್ರೀಯ ಹಣಕಾಸು ಅಭಿಯೋಜಕರ ಕಚೇರಿ’ (ಪಿಎನ್‌ಎಫ್) ಶುಕ್ರವಾರ ತಿಳಿಸಿದೆ. ‘ಪಿಎನ್‌ಎಫ್‌’  ಫ್ರಾನ್ಸ್‌ನ ನ್ಯಾಯಾಂಗ ಸಂಸ್ಥೆಯಾಗಿದ್ದು ಇದು ಗಂಭೀರ ಆರ್ಥಿಕ ಮತ್ತು ಹಣಕಾಸಿನ ಅಪರಾಧಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತದೆ.

ರಫೇಲ್‌ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಸಾಬಿತಾದರೆ ಭಾರತದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಲಿದ್ದು, ಪ್ರಧಾನಿ ಮೋದಿಗೆ ಹಿನ್ನಡೆ ಆಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಮತ್ತು ಫ್ರೆಂಚ್ ವಿಮಾನ ತಯಾರಕ ಡಸಾಲ್ಟ್ ನಡುವಿನ 36 ವಿಮಾನಗಳಿಗೆ 7.8 ಬಿಲಿಯನ್ ಯುರೋ ( 9.3 ಬಿಲಿಯನ್ ಡಾಲರ್‌‌) ಒಪ್ಪಂದವು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದೆ. ಇದು ರಾಜಕೀಯವಾಗಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದನ್ನು ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಫ್ರೆಂಚ್ ತನಿಖಾ ವೆಬ್‌ಸೈಟ್ ಆಗಿರುವ ಮೀಡಿಯಾಪಾರ್ಟ್‌ ಕಳೆದ ಏಪ್ರೀಲ್‌ನಲ್ಲಿ ರಫೇಲ್‌ ಮಾರಾಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹಲವಾರು ವರದಿಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ‘ಪಿಎನ್‌ಎಫ್’ 2016 ರ ರಫೇಲ್‌ ಒಪ್ಪಂದದ ಸುತ್ತಲಿನ ಅನುಮಾನಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸಿದೆ.

ಮೀಡಿಯಾಪಾರ್ಟ್ ವೆಬ್‌ಸೈಟ್‌ ಏಪ್ರಿಲ್‌ನಲ್ಲಿ ಮಾಡಿದ್ದ ವರದಿಯಲ್ಲಿ, “ಗುಪ್ತವಾಗಿ ಲಕ್ಷಾಂತರ ಯುರೋಗಳಷ್ಟು ಕಮೀಷನ್‌‌ಗಳನ್ನು ಮಾರಾಟ ಮಾಡಲು ಸಹಾಯ ಮಾಡಿದವರಿಗೆ ನೀಡಲಾಗಿದೆ” ಎಂದು ಹೇಳಿದೆ. ಈ ಹಣಗಳಲ್ಲಿ ಒಂದಷ್ಟು ಲಂಚವಾಗಿ ಭಾರತೀಯ ಅಧಿಕಾರಿಗಳಿಗೆ ಕೂಡಾ ನೀಡಲಾಗಿತ್ತು ಎಂದು ಅದು ಉಲ್ಲೇಖಿಸಿದೆ.

ಈ ವರದಿಗಳ ನಂತರ, ಹಣಕಾಸಿನ ಅಪರಾಧದಲ್ಲಿ ಪರಿಣತಿ ಹೊಂದಿರುವ ‘ಫ್ರಾನ್ಸ್‌ನ ಶೆರ್ಪಾ ಎನ್‌ಜಿಒ’, ಇತರ ಆರೋಪಗಳೊಂದಿಗೆ ಭ್ರಷ್ಟಾಚಾರ ಮತ್ತು ಪ್ರಭಾವ ಬೀರಿದ್ದಕ್ಕಾಗಿ ಅಧಿಕೃತ ದೂರು ದಾಖಲಿಸಿದ್ದು, ಒಪ್ಪಂದದ ತನಿಖೆಗಾಗಿ ತನಿಖಾ ಮ್ಯಾಜಿಸ್ಟ್ರೇಟ್‌ನನ್ನು ನೇಮಕ ಮಾಡಲು ಒತ್ತಾಯಿಸಿತ್ತು.

ಶೆರ್ಪಾ 2018 ರಲ್ಲಿ ಈ ಒಪ್ಪಂದದ ಬಗ್ಗೆ ತನಿಖೆ ತನಿಖೆ ನಡೆಸಬೇಕು ಎಂದು ಕೇಳಿದ್ದರು, ಆದರೆ ಪಿಎನ್‌ಎಫ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅದು ತನ್ನ ಈ ಮೊದಲ ದೂರಿನಲ್ಲಿ, ಡಸಾಲ್ಟ್ ತನ್ನ ಭಾರತೀಯ ಪಾಲುದಾರನಾಗಿ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿದೆ ಎಂಬ ಅಂಶವನ್ನು ಖಂಡಿಸಿತ್ತು. ರಿಲಾಯನ್ಸ್‌‌ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆಯಾಗಿದೆ.

ಇದನ್ನು ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ಭಾರತಕ್ಕೆ 126 ಜೆಟ್‌ಗಳನ್ನು ಪೂರೈಸುವ ಒಪ್ಪಂದವನ್ನು ಡಸಾಲ್ಟ್ 2012 ರಲ್ಲಿ ಮಾಡಿಕೊಂಡಿತ್ತು ಮತ್ತು ಭಾರತೀಯ ಏರೋಸ್ಪೇಸ್ ಕಂಪನಿಯಾದ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ನೊಂದಿಗೆ ಮಾತುಕತೆ ಕೂಡಾ ನಡೆಸಿತ್ತು.

ಮಾರ್ಚ್ 2015 ರ ಹೊತ್ತಿಗೆ, ಈ ಮಾತುಕತೆಗಳು ಬಹುತೇಕ ತೀರ್ಮಾನಕ್ಕೆ ಬಂದಿದ್ದವು ಎಂದು ಡಸಾಲ್ಟ್ ಹೇಳಿತ್ತು. ಆದರೆ ಅದೇ ವರ್ಷದ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ ನಂತರ, ಈ ಒಪ್ಪಂದದ ಮಾತುಕತೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು.

ಈ ಮಧ್ಯೆ ಏರೋನಾಟಿಕ್ಸ್‌ನಲ್ಲಿ ಯಾವುದೇ ಅನುಭವವಿಲ್ಲದ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿ ಕೇವಲ 36 ಜೆಟ್‌ಗಳಿಗೆ ಹೊಸ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಈ ಮಾತುಕತೆ ನಡೆಯುತ್ತಿದ್ದ ಜನವರಿ 2016 ರ ಸಮಯದಲ್ಲಿ ಫ್ರಾಸ್ಸ್‌ನ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಸಹ-ಪಾಲುದಾರ ಜೂಲಿ ಗಯೆಟ್ ನಿರ್ಮಿಸಿದ ಚಿತ್ರಕ್ಕೆ ರಿಲಯನ್ಸ್ ಹಣಕಾಸು ಒದಗಿಸಿತ್ತು.

ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಮಯದಲ್ಲಿಯೆ, ರಿಲಾಯನ್ಸ್‌ಗೆ ಸೇರಿದ ಫ್ರೆಂಚ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು, 2015 ರಲ್ಲಿ ಫ್ರಾನ್ಸ್ ಸರ್ಕಾರವು 143.7 ಮಿಲಿಯನ್ ಯುರೋ ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸಿದೆ ಎಂದು ಫ್ರಾನ್ಸ್‌ನ ಲೆ ಮಾಂಡೆ ಪತ್ರಿಕೆ ಬಹಿರಂಗಪಡಿಸಿದೆ.

ಇದನ್ನು ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ನೀಡಲಾಗುತ್ತದೆ; ಇದರ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...