HomeUncategorizedಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

- Advertisement -
- Advertisement -

ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನದ ಮೇಲೆ, 2016 ರ ಬಹು-ಶತಕೋಟಿ ಡಾಲರ್ ಮೊತ್ತದ ರಫೇಲ್ ಫೈಟರ್ ಜೆಟ್‌ಗಳನ್ನು ಭಾರತಕ್ಕೆ ಮಾರಾಟ ಮಾಡಿದ ಬಗ್ಗೆ ತನಿಖೆ ನಡೆಸಲು ಫ್ರೆಂಚ್ ನ್ಯಾಯಾಧೀಶರನ್ನು ನೇಮಿಸಲಾಗಿದೆ ಎಂದು ‘ರಾಷ್ಟ್ರೀಯ ಹಣಕಾಸು ಅಭಿಯೋಜಕರ ಕಚೇರಿ’ (ಪಿಎನ್‌ಎಫ್) ಶುಕ್ರವಾರ ತಿಳಿಸಿದೆ. ‘ಪಿಎನ್‌ಎಫ್‌’  ಫ್ರಾನ್ಸ್‌ನ ನ್ಯಾಯಾಂಗ ಸಂಸ್ಥೆಯಾಗಿದ್ದು ಇದು ಗಂಭೀರ ಆರ್ಥಿಕ ಮತ್ತು ಹಣಕಾಸಿನ ಅಪರಾಧಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತದೆ.

ರಫೇಲ್‌ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಸಾಬಿತಾದರೆ ಭಾರತದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಲಿದ್ದು, ಪ್ರಧಾನಿ ಮೋದಿಗೆ ಹಿನ್ನಡೆ ಆಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಮತ್ತು ಫ್ರೆಂಚ್ ವಿಮಾನ ತಯಾರಕ ಡಸಾಲ್ಟ್ ನಡುವಿನ 36 ವಿಮಾನಗಳಿಗೆ 7.8 ಬಿಲಿಯನ್ ಯುರೋ ( 9.3 ಬಿಲಿಯನ್ ಡಾಲರ್‌‌) ಒಪ್ಪಂದವು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದೆ. ಇದು ರಾಜಕೀಯವಾಗಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದನ್ನು ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಫ್ರೆಂಚ್ ತನಿಖಾ ವೆಬ್‌ಸೈಟ್ ಆಗಿರುವ ಮೀಡಿಯಾಪಾರ್ಟ್‌ ಕಳೆದ ಏಪ್ರೀಲ್‌ನಲ್ಲಿ ರಫೇಲ್‌ ಮಾರಾಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹಲವಾರು ವರದಿಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ‘ಪಿಎನ್‌ಎಫ್’ 2016 ರ ರಫೇಲ್‌ ಒಪ್ಪಂದದ ಸುತ್ತಲಿನ ಅನುಮಾನಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸಿದೆ.

ಮೀಡಿಯಾಪಾರ್ಟ್ ವೆಬ್‌ಸೈಟ್‌ ಏಪ್ರಿಲ್‌ನಲ್ಲಿ ಮಾಡಿದ್ದ ವರದಿಯಲ್ಲಿ, “ಗುಪ್ತವಾಗಿ ಲಕ್ಷಾಂತರ ಯುರೋಗಳಷ್ಟು ಕಮೀಷನ್‌‌ಗಳನ್ನು ಮಾರಾಟ ಮಾಡಲು ಸಹಾಯ ಮಾಡಿದವರಿಗೆ ನೀಡಲಾಗಿದೆ” ಎಂದು ಹೇಳಿದೆ. ಈ ಹಣಗಳಲ್ಲಿ ಒಂದಷ್ಟು ಲಂಚವಾಗಿ ಭಾರತೀಯ ಅಧಿಕಾರಿಗಳಿಗೆ ಕೂಡಾ ನೀಡಲಾಗಿತ್ತು ಎಂದು ಅದು ಉಲ್ಲೇಖಿಸಿದೆ.

ಈ ವರದಿಗಳ ನಂತರ, ಹಣಕಾಸಿನ ಅಪರಾಧದಲ್ಲಿ ಪರಿಣತಿ ಹೊಂದಿರುವ ‘ಫ್ರಾನ್ಸ್‌ನ ಶೆರ್ಪಾ ಎನ್‌ಜಿಒ’, ಇತರ ಆರೋಪಗಳೊಂದಿಗೆ ಭ್ರಷ್ಟಾಚಾರ ಮತ್ತು ಪ್ರಭಾವ ಬೀರಿದ್ದಕ್ಕಾಗಿ ಅಧಿಕೃತ ದೂರು ದಾಖಲಿಸಿದ್ದು, ಒಪ್ಪಂದದ ತನಿಖೆಗಾಗಿ ತನಿಖಾ ಮ್ಯಾಜಿಸ್ಟ್ರೇಟ್‌ನನ್ನು ನೇಮಕ ಮಾಡಲು ಒತ್ತಾಯಿಸಿತ್ತು.

ಶೆರ್ಪಾ 2018 ರಲ್ಲಿ ಈ ಒಪ್ಪಂದದ ಬಗ್ಗೆ ತನಿಖೆ ತನಿಖೆ ನಡೆಸಬೇಕು ಎಂದು ಕೇಳಿದ್ದರು, ಆದರೆ ಪಿಎನ್‌ಎಫ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅದು ತನ್ನ ಈ ಮೊದಲ ದೂರಿನಲ್ಲಿ, ಡಸಾಲ್ಟ್ ತನ್ನ ಭಾರತೀಯ ಪಾಲುದಾರನಾಗಿ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿದೆ ಎಂಬ ಅಂಶವನ್ನು ಖಂಡಿಸಿತ್ತು. ರಿಲಾಯನ್ಸ್‌‌ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆಯಾಗಿದೆ.

ಇದನ್ನು ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ಭಾರತಕ್ಕೆ 126 ಜೆಟ್‌ಗಳನ್ನು ಪೂರೈಸುವ ಒಪ್ಪಂದವನ್ನು ಡಸಾಲ್ಟ್ 2012 ರಲ್ಲಿ ಮಾಡಿಕೊಂಡಿತ್ತು ಮತ್ತು ಭಾರತೀಯ ಏರೋಸ್ಪೇಸ್ ಕಂಪನಿಯಾದ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ನೊಂದಿಗೆ ಮಾತುಕತೆ ಕೂಡಾ ನಡೆಸಿತ್ತು.

ಮಾರ್ಚ್ 2015 ರ ಹೊತ್ತಿಗೆ, ಈ ಮಾತುಕತೆಗಳು ಬಹುತೇಕ ತೀರ್ಮಾನಕ್ಕೆ ಬಂದಿದ್ದವು ಎಂದು ಡಸಾಲ್ಟ್ ಹೇಳಿತ್ತು. ಆದರೆ ಅದೇ ವರ್ಷದ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ ನಂತರ, ಈ ಒಪ್ಪಂದದ ಮಾತುಕತೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು.

ಈ ಮಧ್ಯೆ ಏರೋನಾಟಿಕ್ಸ್‌ನಲ್ಲಿ ಯಾವುದೇ ಅನುಭವವಿಲ್ಲದ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿ ಕೇವಲ 36 ಜೆಟ್‌ಗಳಿಗೆ ಹೊಸ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಈ ಮಾತುಕತೆ ನಡೆಯುತ್ತಿದ್ದ ಜನವರಿ 2016 ರ ಸಮಯದಲ್ಲಿ ಫ್ರಾಸ್ಸ್‌ನ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಸಹ-ಪಾಲುದಾರ ಜೂಲಿ ಗಯೆಟ್ ನಿರ್ಮಿಸಿದ ಚಿತ್ರಕ್ಕೆ ರಿಲಯನ್ಸ್ ಹಣಕಾಸು ಒದಗಿಸಿತ್ತು.

ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಮಯದಲ್ಲಿಯೆ, ರಿಲಾಯನ್ಸ್‌ಗೆ ಸೇರಿದ ಫ್ರೆಂಚ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು, 2015 ರಲ್ಲಿ ಫ್ರಾನ್ಸ್ ಸರ್ಕಾರವು 143.7 ಮಿಲಿಯನ್ ಯುರೋ ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸಿದೆ ಎಂದು ಫ್ರಾನ್ಸ್‌ನ ಲೆ ಮಾಂಡೆ ಪತ್ರಿಕೆ ಬಹಿರಂಗಪಡಿಸಿದೆ.

ಇದನ್ನು ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ನೀಡಲಾಗುತ್ತದೆ; ಇದರ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...