HomeUncategorizedಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

- Advertisement -
- Advertisement -

ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನದ ಮೇಲೆ, 2016 ರ ಬಹು-ಶತಕೋಟಿ ಡಾಲರ್ ಮೊತ್ತದ ರಫೇಲ್ ಫೈಟರ್ ಜೆಟ್‌ಗಳನ್ನು ಭಾರತಕ್ಕೆ ಮಾರಾಟ ಮಾಡಿದ ಬಗ್ಗೆ ತನಿಖೆ ನಡೆಸಲು ಫ್ರೆಂಚ್ ನ್ಯಾಯಾಧೀಶರನ್ನು ನೇಮಿಸಲಾಗಿದೆ ಎಂದು ‘ರಾಷ್ಟ್ರೀಯ ಹಣಕಾಸು ಅಭಿಯೋಜಕರ ಕಚೇರಿ’ (ಪಿಎನ್‌ಎಫ್) ಶುಕ್ರವಾರ ತಿಳಿಸಿದೆ. ‘ಪಿಎನ್‌ಎಫ್‌’  ಫ್ರಾನ್ಸ್‌ನ ನ್ಯಾಯಾಂಗ ಸಂಸ್ಥೆಯಾಗಿದ್ದು ಇದು ಗಂಭೀರ ಆರ್ಥಿಕ ಮತ್ತು ಹಣಕಾಸಿನ ಅಪರಾಧಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತದೆ.

ರಫೇಲ್‌ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಸಾಬಿತಾದರೆ ಭಾರತದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಲಿದ್ದು, ಪ್ರಧಾನಿ ಮೋದಿಗೆ ಹಿನ್ನಡೆ ಆಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಮತ್ತು ಫ್ರೆಂಚ್ ವಿಮಾನ ತಯಾರಕ ಡಸಾಲ್ಟ್ ನಡುವಿನ 36 ವಿಮಾನಗಳಿಗೆ 7.8 ಬಿಲಿಯನ್ ಯುರೋ ( 9.3 ಬಿಲಿಯನ್ ಡಾಲರ್‌‌) ಒಪ್ಪಂದವು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದೆ. ಇದು ರಾಜಕೀಯವಾಗಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದನ್ನು ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಫ್ರೆಂಚ್ ತನಿಖಾ ವೆಬ್‌ಸೈಟ್ ಆಗಿರುವ ಮೀಡಿಯಾಪಾರ್ಟ್‌ ಕಳೆದ ಏಪ್ರೀಲ್‌ನಲ್ಲಿ ರಫೇಲ್‌ ಮಾರಾಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹಲವಾರು ವರದಿಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ‘ಪಿಎನ್‌ಎಫ್’ 2016 ರ ರಫೇಲ್‌ ಒಪ್ಪಂದದ ಸುತ್ತಲಿನ ಅನುಮಾನಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸಿದೆ.

ಮೀಡಿಯಾಪಾರ್ಟ್ ವೆಬ್‌ಸೈಟ್‌ ಏಪ್ರಿಲ್‌ನಲ್ಲಿ ಮಾಡಿದ್ದ ವರದಿಯಲ್ಲಿ, “ಗುಪ್ತವಾಗಿ ಲಕ್ಷಾಂತರ ಯುರೋಗಳಷ್ಟು ಕಮೀಷನ್‌‌ಗಳನ್ನು ಮಾರಾಟ ಮಾಡಲು ಸಹಾಯ ಮಾಡಿದವರಿಗೆ ನೀಡಲಾಗಿದೆ” ಎಂದು ಹೇಳಿದೆ. ಈ ಹಣಗಳಲ್ಲಿ ಒಂದಷ್ಟು ಲಂಚವಾಗಿ ಭಾರತೀಯ ಅಧಿಕಾರಿಗಳಿಗೆ ಕೂಡಾ ನೀಡಲಾಗಿತ್ತು ಎಂದು ಅದು ಉಲ್ಲೇಖಿಸಿದೆ.

ಈ ವರದಿಗಳ ನಂತರ, ಹಣಕಾಸಿನ ಅಪರಾಧದಲ್ಲಿ ಪರಿಣತಿ ಹೊಂದಿರುವ ‘ಫ್ರಾನ್ಸ್‌ನ ಶೆರ್ಪಾ ಎನ್‌ಜಿಒ’, ಇತರ ಆರೋಪಗಳೊಂದಿಗೆ ಭ್ರಷ್ಟಾಚಾರ ಮತ್ತು ಪ್ರಭಾವ ಬೀರಿದ್ದಕ್ಕಾಗಿ ಅಧಿಕೃತ ದೂರು ದಾಖಲಿಸಿದ್ದು, ಒಪ್ಪಂದದ ತನಿಖೆಗಾಗಿ ತನಿಖಾ ಮ್ಯಾಜಿಸ್ಟ್ರೇಟ್‌ನನ್ನು ನೇಮಕ ಮಾಡಲು ಒತ್ತಾಯಿಸಿತ್ತು.

ಶೆರ್ಪಾ 2018 ರಲ್ಲಿ ಈ ಒಪ್ಪಂದದ ಬಗ್ಗೆ ತನಿಖೆ ತನಿಖೆ ನಡೆಸಬೇಕು ಎಂದು ಕೇಳಿದ್ದರು, ಆದರೆ ಪಿಎನ್‌ಎಫ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅದು ತನ್ನ ಈ ಮೊದಲ ದೂರಿನಲ್ಲಿ, ಡಸಾಲ್ಟ್ ತನ್ನ ಭಾರತೀಯ ಪಾಲುದಾರನಾಗಿ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿದೆ ಎಂಬ ಅಂಶವನ್ನು ಖಂಡಿಸಿತ್ತು. ರಿಲಾಯನ್ಸ್‌‌ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆಯಾಗಿದೆ.

ಇದನ್ನು ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ಭಾರತಕ್ಕೆ 126 ಜೆಟ್‌ಗಳನ್ನು ಪೂರೈಸುವ ಒಪ್ಪಂದವನ್ನು ಡಸಾಲ್ಟ್ 2012 ರಲ್ಲಿ ಮಾಡಿಕೊಂಡಿತ್ತು ಮತ್ತು ಭಾರತೀಯ ಏರೋಸ್ಪೇಸ್ ಕಂಪನಿಯಾದ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ನೊಂದಿಗೆ ಮಾತುಕತೆ ಕೂಡಾ ನಡೆಸಿತ್ತು.

ಮಾರ್ಚ್ 2015 ರ ಹೊತ್ತಿಗೆ, ಈ ಮಾತುಕತೆಗಳು ಬಹುತೇಕ ತೀರ್ಮಾನಕ್ಕೆ ಬಂದಿದ್ದವು ಎಂದು ಡಸಾಲ್ಟ್ ಹೇಳಿತ್ತು. ಆದರೆ ಅದೇ ವರ್ಷದ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ ನಂತರ, ಈ ಒಪ್ಪಂದದ ಮಾತುಕತೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು.

ಈ ಮಧ್ಯೆ ಏರೋನಾಟಿಕ್ಸ್‌ನಲ್ಲಿ ಯಾವುದೇ ಅನುಭವವಿಲ್ಲದ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿ ಕೇವಲ 36 ಜೆಟ್‌ಗಳಿಗೆ ಹೊಸ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಈ ಮಾತುಕತೆ ನಡೆಯುತ್ತಿದ್ದ ಜನವರಿ 2016 ರ ಸಮಯದಲ್ಲಿ ಫ್ರಾಸ್ಸ್‌ನ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಸಹ-ಪಾಲುದಾರ ಜೂಲಿ ಗಯೆಟ್ ನಿರ್ಮಿಸಿದ ಚಿತ್ರಕ್ಕೆ ರಿಲಯನ್ಸ್ ಹಣಕಾಸು ಒದಗಿಸಿತ್ತು.

ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಮಯದಲ್ಲಿಯೆ, ರಿಲಾಯನ್ಸ್‌ಗೆ ಸೇರಿದ ಫ್ರೆಂಚ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು, 2015 ರಲ್ಲಿ ಫ್ರಾನ್ಸ್ ಸರ್ಕಾರವು 143.7 ಮಿಲಿಯನ್ ಯುರೋ ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸಿದೆ ಎಂದು ಫ್ರಾನ್ಸ್‌ನ ಲೆ ಮಾಂಡೆ ಪತ್ರಿಕೆ ಬಹಿರಂಗಪಡಿಸಿದೆ.

ಇದನ್ನು ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ನೀಡಲಾಗುತ್ತದೆ; ಇದರ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...