HomeUncategorizedಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

- Advertisement -
- Advertisement -

ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನದ ಮೇಲೆ, 2016 ರ ಬಹು-ಶತಕೋಟಿ ಡಾಲರ್ ಮೊತ್ತದ ರಫೇಲ್ ಫೈಟರ್ ಜೆಟ್‌ಗಳನ್ನು ಭಾರತಕ್ಕೆ ಮಾರಾಟ ಮಾಡಿದ ಬಗ್ಗೆ ತನಿಖೆ ನಡೆಸಲು ಫ್ರೆಂಚ್ ನ್ಯಾಯಾಧೀಶರನ್ನು ನೇಮಿಸಲಾಗಿದೆ ಎಂದು ‘ರಾಷ್ಟ್ರೀಯ ಹಣಕಾಸು ಅಭಿಯೋಜಕರ ಕಚೇರಿ’ (ಪಿಎನ್‌ಎಫ್) ಶುಕ್ರವಾರ ತಿಳಿಸಿದೆ. ‘ಪಿಎನ್‌ಎಫ್‌’  ಫ್ರಾನ್ಸ್‌ನ ನ್ಯಾಯಾಂಗ ಸಂಸ್ಥೆಯಾಗಿದ್ದು ಇದು ಗಂಭೀರ ಆರ್ಥಿಕ ಮತ್ತು ಹಣಕಾಸಿನ ಅಪರಾಧಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತದೆ.

ರಫೇಲ್‌ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆಯಲ್ಲಿ ಸಾಬಿತಾದರೆ ಭಾರತದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಲಿದ್ದು, ಪ್ರಧಾನಿ ಮೋದಿಗೆ ಹಿನ್ನಡೆ ಆಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಮತ್ತು ಫ್ರೆಂಚ್ ವಿಮಾನ ತಯಾರಕ ಡಸಾಲ್ಟ್ ನಡುವಿನ 36 ವಿಮಾನಗಳಿಗೆ 7.8 ಬಿಲಿಯನ್ ಯುರೋ ( 9.3 ಬಿಲಿಯನ್ ಡಾಲರ್‌‌) ಒಪ್ಪಂದವು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದೆ. ಇದು ರಾಜಕೀಯವಾಗಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದನ್ನು ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಫ್ರೆಂಚ್ ತನಿಖಾ ವೆಬ್‌ಸೈಟ್ ಆಗಿರುವ ಮೀಡಿಯಾಪಾರ್ಟ್‌ ಕಳೆದ ಏಪ್ರೀಲ್‌ನಲ್ಲಿ ರಫೇಲ್‌ ಮಾರಾಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹಲವಾರು ವರದಿಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ‘ಪಿಎನ್‌ಎಫ್’ 2016 ರ ರಫೇಲ್‌ ಒಪ್ಪಂದದ ಸುತ್ತಲಿನ ಅನುಮಾನಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸಿದೆ.

ಮೀಡಿಯಾಪಾರ್ಟ್ ವೆಬ್‌ಸೈಟ್‌ ಏಪ್ರಿಲ್‌ನಲ್ಲಿ ಮಾಡಿದ್ದ ವರದಿಯಲ್ಲಿ, “ಗುಪ್ತವಾಗಿ ಲಕ್ಷಾಂತರ ಯುರೋಗಳಷ್ಟು ಕಮೀಷನ್‌‌ಗಳನ್ನು ಮಾರಾಟ ಮಾಡಲು ಸಹಾಯ ಮಾಡಿದವರಿಗೆ ನೀಡಲಾಗಿದೆ” ಎಂದು ಹೇಳಿದೆ. ಈ ಹಣಗಳಲ್ಲಿ ಒಂದಷ್ಟು ಲಂಚವಾಗಿ ಭಾರತೀಯ ಅಧಿಕಾರಿಗಳಿಗೆ ಕೂಡಾ ನೀಡಲಾಗಿತ್ತು ಎಂದು ಅದು ಉಲ್ಲೇಖಿಸಿದೆ.

ಈ ವರದಿಗಳ ನಂತರ, ಹಣಕಾಸಿನ ಅಪರಾಧದಲ್ಲಿ ಪರಿಣತಿ ಹೊಂದಿರುವ ‘ಫ್ರಾನ್ಸ್‌ನ ಶೆರ್ಪಾ ಎನ್‌ಜಿಒ’, ಇತರ ಆರೋಪಗಳೊಂದಿಗೆ ಭ್ರಷ್ಟಾಚಾರ ಮತ್ತು ಪ್ರಭಾವ ಬೀರಿದ್ದಕ್ಕಾಗಿ ಅಧಿಕೃತ ದೂರು ದಾಖಲಿಸಿದ್ದು, ಒಪ್ಪಂದದ ತನಿಖೆಗಾಗಿ ತನಿಖಾ ಮ್ಯಾಜಿಸ್ಟ್ರೇಟ್‌ನನ್ನು ನೇಮಕ ಮಾಡಲು ಒತ್ತಾಯಿಸಿತ್ತು.

ಶೆರ್ಪಾ 2018 ರಲ್ಲಿ ಈ ಒಪ್ಪಂದದ ಬಗ್ಗೆ ತನಿಖೆ ತನಿಖೆ ನಡೆಸಬೇಕು ಎಂದು ಕೇಳಿದ್ದರು, ಆದರೆ ಪಿಎನ್‌ಎಫ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅದು ತನ್ನ ಈ ಮೊದಲ ದೂರಿನಲ್ಲಿ, ಡಸಾಲ್ಟ್ ತನ್ನ ಭಾರತೀಯ ಪಾಲುದಾರನಾಗಿ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿದೆ ಎಂಬ ಅಂಶವನ್ನು ಖಂಡಿಸಿತ್ತು. ರಿಲಾಯನ್ಸ್‌‌ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆಯಾಗಿದೆ.

ಇದನ್ನು ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ಭಾರತಕ್ಕೆ 126 ಜೆಟ್‌ಗಳನ್ನು ಪೂರೈಸುವ ಒಪ್ಪಂದವನ್ನು ಡಸಾಲ್ಟ್ 2012 ರಲ್ಲಿ ಮಾಡಿಕೊಂಡಿತ್ತು ಮತ್ತು ಭಾರತೀಯ ಏರೋಸ್ಪೇಸ್ ಕಂಪನಿಯಾದ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ನೊಂದಿಗೆ ಮಾತುಕತೆ ಕೂಡಾ ನಡೆಸಿತ್ತು.

ಮಾರ್ಚ್ 2015 ರ ಹೊತ್ತಿಗೆ, ಈ ಮಾತುಕತೆಗಳು ಬಹುತೇಕ ತೀರ್ಮಾನಕ್ಕೆ ಬಂದಿದ್ದವು ಎಂದು ಡಸಾಲ್ಟ್ ಹೇಳಿತ್ತು. ಆದರೆ ಅದೇ ವರ್ಷದ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ ನಂತರ, ಈ ಒಪ್ಪಂದದ ಮಾತುಕತೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು.

ಈ ಮಧ್ಯೆ ಏರೋನಾಟಿಕ್ಸ್‌ನಲ್ಲಿ ಯಾವುದೇ ಅನುಭವವಿಲ್ಲದ ರಿಲಯನ್ಸ್ ಗ್ರೂಪ್ ಅನ್ನು ಆಯ್ಕೆ ಮಾಡಿ ಕೇವಲ 36 ಜೆಟ್‌ಗಳಿಗೆ ಹೊಸ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಈ ಮಾತುಕತೆ ನಡೆಯುತ್ತಿದ್ದ ಜನವರಿ 2016 ರ ಸಮಯದಲ್ಲಿ ಫ್ರಾಸ್ಸ್‌ನ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಸಹ-ಪಾಲುದಾರ ಜೂಲಿ ಗಯೆಟ್ ನಿರ್ಮಿಸಿದ ಚಿತ್ರಕ್ಕೆ ರಿಲಯನ್ಸ್ ಹಣಕಾಸು ಒದಗಿಸಿತ್ತು.

ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಮಯದಲ್ಲಿಯೆ, ರಿಲಾಯನ್ಸ್‌ಗೆ ಸೇರಿದ ಫ್ರೆಂಚ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು, 2015 ರಲ್ಲಿ ಫ್ರಾನ್ಸ್ ಸರ್ಕಾರವು 143.7 ಮಿಲಿಯನ್ ಯುರೋ ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸಿದೆ ಎಂದು ಫ್ರಾನ್ಸ್‌ನ ಲೆ ಮಾಂಡೆ ಪತ್ರಿಕೆ ಬಹಿರಂಗಪಡಿಸಿದೆ.

ಇದನ್ನು ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ನೀಡಲಾಗುತ್ತದೆ; ಇದರ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...