Homeಮುಖಪುಟಮಾನವ ಕಳ್ಳ ಸಾಗಾಣಿಕೆ ಶಂಕೆ: 300 ಭಾರತೀಯರಿದ್ದ ವಿಮಾನ ವಶಕ್ಕೆ ಪಡೆದ ಫ್ರಾನ್ಸ್

ಮಾನವ ಕಳ್ಳ ಸಾಗಾಣಿಕೆ ಶಂಕೆ: 300 ಭಾರತೀಯರಿದ್ದ ವಿಮಾನ ವಶಕ್ಕೆ ಪಡೆದ ಫ್ರಾನ್ಸ್

- Advertisement -
- Advertisement -

ಮಾನವ ಕಳ್ಳಸಾಗಣಿಕೆ ಶಂಕೆಯ ಮೇರೆಗೆ 303 ಭಾರತೀಯರನ್ನು ಹೊತ್ತು ನಿಕರಾಗುವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಫ್ರಾನ್ಸ್ ತಡೆದಿದೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.

ರೊಮೇನಿಯಾದ ಸಣ್ಣ ವಿಮಾನಯಾನ ಕಂಪನಿ ಲೆಜೆಂಡ್ ಏರ್‌ಲೈನ್ಸ್‌ಗೆ ಸೇರಿದ ಎ340 ವಿಮಾನ ಯನೈಟೆಡ್ ಅರಬ್ ಎಮಿರೇಟ್ಸ್‌(ಯುಎಇ) ಯಿಂದ ಸೆಂಟ್ರಲ್ ಅಮೆರಿಕಾದ ನಿಕರಾಗುವಾ ದೇಶಕ್ಕೆ ತೆರಳುತ್ತಿತ್ತು. ಇದನ್ನು ಪ್ಯಾರಿಸ್‌ನ ಪೂರ್ವದ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಇಂಧನ ತುಂಬಲು ನಿಲ್ಲಿಸಿದ್ದಾಗ ಭದ್ರತಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರೊಮೇನಿಯಾ ಮೂಲದ ಸಣ್ಣ ಚಾರ್ಟರ್ ಕಂಪನಿ ಲೆಜೆಂಡ್ ಏರ್‌ಲೈನ್ಸ್ ನಿರ್ವಹಿಸುತ್ತಿರುವ ವಿಮಾನವು ಮಾನವ ಕಳ್ಳಸಾಗಣೆಗೆ ಬಲಿಯಾಗಬಹುದಾದ ಜನರನ್ನು ಹೊತ್ತೊಯ್ಯುತ್ತಿದೆ ಎಂಬ ಅನಾಮಧೇಯ ಮೂಲಗಳ ಮಾಹಿತಿ ಆಧರಿಸಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುರುವಾರ ರಾತ್ರಿ ವಿಮಾನವನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಗುರುವಾರ ರಾತ್ರಿಯಿಡೀ ಪ್ರಯಾಣಿಕರು ವಿಮಾನದೊಳಗಡೆಯೇ ಇದ್ದರು. ಶುಕ್ರವಾರ ಅವರನ್ನು ವಿಮಾನ ನಿಲ್ದಾಣದ ಮುಖ್ಯ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮರ್ನೆ ಪ್ರಾದೇಶಿಕ ಆಡಳಿತದ ಅಧಿಕಾರಿ ತಿಳಿಸಿದ್ದಾರೆ.

ವಿಶೇಷ ಫ್ರೆಂಚ್ ಸಂಘಟಿತ ಅಪರಾಧ ಘಟಕದ ತನಿಖಾಧಿಕಾರಿಗಳು, ಗಡಿ ಪೊಲೀಸ್ ಮತ್ತು ವಾಯುಯಾನ ಅಧಿಕಾರಿಗಳು ಪ್ರಯಾಣಿಕರು ಮತ್ತು ವಿಮಾನದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ, ನಾವು ಭಾರತೀಯರ ಸಹಾಯಕ್ಕೆ ಧಾವಿಸಿದ್ದೇವೆ. ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇವೆ. ಪ್ರಯಾಣಿಕರ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ.

ಈ ಬಗ್ಗೆ ಮಾಹಿತಿ ಪಡೆಯಲು ವಿಮಾನಯಾನ ಸಂಸ್ಥೆ ಲೆಜೆಂಡ್ ಏರ್‌ಲೈನ್ಸ್ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಎಬಿಸಿ ನ್ಯೂಸ್ ತಿಳಿಸಿದೆ.

ಇದನ್ನೂ ಓದಿ: ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...