Homeಅಂತರಾಷ್ಟ್ರೀಯಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

ಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

- Advertisement -
- Advertisement -

ಟಿಪ್ಪು ಸುಲ್ತಾನ್ ವಂಶಸ್ಥೆ, ಬ್ರಿಟಿಷ್ ಭಾರತೀಯ ಗೂಢಚಾರಿ ನೂರ್ ಇನಾಯತ್ ಖಾನ್ ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿಯ ನಾಜಿಗಳ ವಿರುದ್ಧ ಹೋರಾಡಿದ ಕಾರಣಕ್ಕೆ ಫ್ರೆಂಚ್ ಅಂಚೆ ಸೇವೆಯು ನೂರ್ ಅವರ ಅಂಚೆಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ. 

18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನನ ವಂಶಸ್ಥೆಯಾಗಿರುವ ನೂರ್ ಇನಾಯತ್ ಖಾನ್, ಎರಡನೇ ಮಹಾಯುದ್ಧದ ಸಮಯದಲ್ಲಿ ಗುಪ್ತ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ಪ್ರತಿರೋಧದಲ್ಲಿ ವಹಿಸಿದ ಪಾತ್ರಕ್ಕಾಗಿ ಫ್ರಾನ್ಸ್ ಸ್ಮರಣಾರ್ಥ ಅಂಚೆ ಚೀಟಿಯೊಂದಿಗೆ ಗೌರವಿಸಲ್ಪಟ್ಟ ಏಕೈಕ ಭಾರತೀಯ ಮೂಲದ ಮಹಿಳೆಯಾಗಿದ್ದಾರೆ.

ಫ್ರೆಂಚ್ ಅಂಚೆ ಸೇವೆ, ಲಾ ಪೋಸ್ಟೆ, ನಾಜಿ ಜರ್ಮನಿಯ ವಿರುದ್ಧ ಹೋರಾಡಿದ “ಪ್ರತಿರೋಧದ ವ್ಯಕ್ತಿಗಳ” ಗೌರವಾರ್ಥವಾಗಿ ಬಿಡುಗಡೆ ಮಾಡಲಾದ ಅಂಚೆಚೀಟಿಯೊಂದಿಗೆ ನೂರ್ ಅವರನ್ನು ಗೌರವಿಸಿದೆ. ಎರಡನೇ ಮಹಾಯುದ್ಧದ 80 ವರ್ಷಗಳನ್ನು ಗುರುತಿಸಲು ಈ ತಿಂಗಳು ಬಿಡುಗಡೆ ಮಾಡಲಾದ ಅಂಚೆಚೀಟಿಗಳ ಸೆಟ್‌ನಲ್ಲಿ ಆಯ್ಕೆಯಾದ ಒಂದು ಡಜನ್ ಯುದ್ಧ ವೀರರು ಮತ್ತು ನಾಯಕಿಯರಲ್ಲಿ ಅವರು ಒಬ್ಬರು.

“ಯುದ್ಧದ ಅಂತ್ಯದ 80 ನೇ ಮಹತ್ವದ ವಾರ್ಷಿಕೋತ್ಸವದಂದು ಫ್ರಾನ್ಸ್ ನೂರ್ ಇನಾಯತ್ ಖಾನ್ ಅವರಿಗೆ ಅಂಚೆ ಚೀಟಿ ನೀಡಿ ಗೌರವಿಸಿರುವುದು ನನಗೆ ಸಂತೋಷ ತಂದಿದೆ” ಎಂದು ನೂರ್ ಅವರ ಜೀವನ ಚರಿತ್ರೆ – ‘ಸ್ಪೈ ಪ್ರಿನ್ಸೆಸ್: ದಿ ಲೈಫ್ ಆಫ್ ನೂರ್ ಇನಾಯತ್ ಖಾನ್’ ನ ಲಂಡನ್ ಮೂಲದ ಲೇಖಕಿ ಶ್ರಬಾನಿ ಬಸು ಹೇಳಿದ್ದಾರೆ. 

“ನೂರ್ ಫ್ಯಾಸಿಸಂ ವಿರುದ್ಧದ ಹೋರಾಟದಲ್ಲಿ ತನ್ನ ಪ್ರಾಣವನ್ನು ತ್ಯಾಗ ಮಾಡಿದಳು. ಅವಳು ಪ್ಯಾರಿಸ್‌ನಲ್ಲಿ ಬೆಳೆದಳು, ಇಂಗ್ಲೆಂಡ್‌ನಲ್ಲಿ ಯುದ್ಧ ಪ್ರಯತ್ನದಲ್ಲಿ ಸೇರಿಕೊಂಡಳು, ಮತ್ತು ಫ್ರಾನ್ಸ್‌ನಲ್ಲಿ ಸಾಮಾನ್ಯ ಜನರು ಪೋಸ್ಟ್ ಮಾಡುವ ಅಂಚೆ ಚೀಟಿಯಲ್ಲಿ ಅವಳ ಮುಖವನ್ನು ನೋಡುವುದು ಅದ್ಭುತವಾಗಿದೆ,” ಎಂದು ಅವರು ಹೇಳಿದರು.

ಪ್ರತಿಯೊಂದು ಅಂಚೆಚೀಟಿ ಛಾಯಾಚಿತ್ರದಿಂದ ತೆಗೆದ ಕೆತ್ತನೆಯ ರೂಪದಲ್ಲಿದ್ದು, ನೂರ್ ಅವರ ಮೇಲಿನ ಅಂಚೆಚೀಟಿ ಅವರ ಬ್ರಿಟಿಷ್ ಮಹಿಳಾ ಸಹಾಯಕ ವಾಯುಪಡೆ (WAAF) ಸಮವಸ್ತ್ರವನ್ನು ಪ್ರದರ್ಶಿಸುತ್ತದೆ.

“ನೂರ್ ಅವರ ಜನ್ಮ ಶತಮಾನೋತ್ಸವದ ನೆನಪಿಗಾಗಿ ಬ್ರಿಟನ್ 2014 ರಲ್ಲಿ ಅವರನ್ನು ಗೌರವಿಸಿತು. ಈಗ ಬ್ರಿಟನ್ ಮತ್ತು ಫ್ರಾನ್ಸ್ ಅವರ ಗೌರವಾರ್ಥವಾಗಿ ಅಂಚೆಚೀಟಿ ಹೊರಡಿಸಿವೆ. ಅವರ ಪೂರ್ವಜರ ದೇಶವಾದ ಭಾರತವು ಕೂಡ ಅಂಚೆಚೀಟಿಯೊಂದಿಗೆ ಅವರನ್ನು ಗೌರವಿಸುವ ಸಮಯ ಬಂದಿದೆ” ಎಂದು ಬಸು ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...