Homeಅಂತರಾಷ್ಟ್ರೀಯಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

ಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

- Advertisement -
- Advertisement -

ಟಿಪ್ಪು ಸುಲ್ತಾನ್ ವಂಶಸ್ಥೆ, ಬ್ರಿಟಿಷ್ ಭಾರತೀಯ ಗೂಢಚಾರಿ ನೂರ್ ಇನಾಯತ್ ಖಾನ್ ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿಯ ನಾಜಿಗಳ ವಿರುದ್ಧ ಹೋರಾಡಿದ ಕಾರಣಕ್ಕೆ ಫ್ರೆಂಚ್ ಅಂಚೆ ಸೇವೆಯು ನೂರ್ ಅವರ ಅಂಚೆಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ. 

18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನನ ವಂಶಸ್ಥೆಯಾಗಿರುವ ನೂರ್ ಇನಾಯತ್ ಖಾನ್, ಎರಡನೇ ಮಹಾಯುದ್ಧದ ಸಮಯದಲ್ಲಿ ಗುಪ್ತ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ಪ್ರತಿರೋಧದಲ್ಲಿ ವಹಿಸಿದ ಪಾತ್ರಕ್ಕಾಗಿ ಫ್ರಾನ್ಸ್ ಸ್ಮರಣಾರ್ಥ ಅಂಚೆ ಚೀಟಿಯೊಂದಿಗೆ ಗೌರವಿಸಲ್ಪಟ್ಟ ಏಕೈಕ ಭಾರತೀಯ ಮೂಲದ ಮಹಿಳೆಯಾಗಿದ್ದಾರೆ.

ಫ್ರೆಂಚ್ ಅಂಚೆ ಸೇವೆ, ಲಾ ಪೋಸ್ಟೆ, ನಾಜಿ ಜರ್ಮನಿಯ ವಿರುದ್ಧ ಹೋರಾಡಿದ “ಪ್ರತಿರೋಧದ ವ್ಯಕ್ತಿಗಳ” ಗೌರವಾರ್ಥವಾಗಿ ಬಿಡುಗಡೆ ಮಾಡಲಾದ ಅಂಚೆಚೀಟಿಯೊಂದಿಗೆ ನೂರ್ ಅವರನ್ನು ಗೌರವಿಸಿದೆ. ಎರಡನೇ ಮಹಾಯುದ್ಧದ 80 ವರ್ಷಗಳನ್ನು ಗುರುತಿಸಲು ಈ ತಿಂಗಳು ಬಿಡುಗಡೆ ಮಾಡಲಾದ ಅಂಚೆಚೀಟಿಗಳ ಸೆಟ್‌ನಲ್ಲಿ ಆಯ್ಕೆಯಾದ ಒಂದು ಡಜನ್ ಯುದ್ಧ ವೀರರು ಮತ್ತು ನಾಯಕಿಯರಲ್ಲಿ ಅವರು ಒಬ್ಬರು.

“ಯುದ್ಧದ ಅಂತ್ಯದ 80 ನೇ ಮಹತ್ವದ ವಾರ್ಷಿಕೋತ್ಸವದಂದು ಫ್ರಾನ್ಸ್ ನೂರ್ ಇನಾಯತ್ ಖಾನ್ ಅವರಿಗೆ ಅಂಚೆ ಚೀಟಿ ನೀಡಿ ಗೌರವಿಸಿರುವುದು ನನಗೆ ಸಂತೋಷ ತಂದಿದೆ” ಎಂದು ನೂರ್ ಅವರ ಜೀವನ ಚರಿತ್ರೆ – ‘ಸ್ಪೈ ಪ್ರಿನ್ಸೆಸ್: ದಿ ಲೈಫ್ ಆಫ್ ನೂರ್ ಇನಾಯತ್ ಖಾನ್’ ನ ಲಂಡನ್ ಮೂಲದ ಲೇಖಕಿ ಶ್ರಬಾನಿ ಬಸು ಹೇಳಿದ್ದಾರೆ. 

“ನೂರ್ ಫ್ಯಾಸಿಸಂ ವಿರುದ್ಧದ ಹೋರಾಟದಲ್ಲಿ ತನ್ನ ಪ್ರಾಣವನ್ನು ತ್ಯಾಗ ಮಾಡಿದಳು. ಅವಳು ಪ್ಯಾರಿಸ್‌ನಲ್ಲಿ ಬೆಳೆದಳು, ಇಂಗ್ಲೆಂಡ್‌ನಲ್ಲಿ ಯುದ್ಧ ಪ್ರಯತ್ನದಲ್ಲಿ ಸೇರಿಕೊಂಡಳು, ಮತ್ತು ಫ್ರಾನ್ಸ್‌ನಲ್ಲಿ ಸಾಮಾನ್ಯ ಜನರು ಪೋಸ್ಟ್ ಮಾಡುವ ಅಂಚೆ ಚೀಟಿಯಲ್ಲಿ ಅವಳ ಮುಖವನ್ನು ನೋಡುವುದು ಅದ್ಭುತವಾಗಿದೆ,” ಎಂದು ಅವರು ಹೇಳಿದರು.

ಪ್ರತಿಯೊಂದು ಅಂಚೆಚೀಟಿ ಛಾಯಾಚಿತ್ರದಿಂದ ತೆಗೆದ ಕೆತ್ತನೆಯ ರೂಪದಲ್ಲಿದ್ದು, ನೂರ್ ಅವರ ಮೇಲಿನ ಅಂಚೆಚೀಟಿ ಅವರ ಬ್ರಿಟಿಷ್ ಮಹಿಳಾ ಸಹಾಯಕ ವಾಯುಪಡೆ (WAAF) ಸಮವಸ್ತ್ರವನ್ನು ಪ್ರದರ್ಶಿಸುತ್ತದೆ.

“ನೂರ್ ಅವರ ಜನ್ಮ ಶತಮಾನೋತ್ಸವದ ನೆನಪಿಗಾಗಿ ಬ್ರಿಟನ್ 2014 ರಲ್ಲಿ ಅವರನ್ನು ಗೌರವಿಸಿತು. ಈಗ ಬ್ರಿಟನ್ ಮತ್ತು ಫ್ರಾನ್ಸ್ ಅವರ ಗೌರವಾರ್ಥವಾಗಿ ಅಂಚೆಚೀಟಿ ಹೊರಡಿಸಿವೆ. ಅವರ ಪೂರ್ವಜರ ದೇಶವಾದ ಭಾರತವು ಕೂಡ ಅಂಚೆಚೀಟಿಯೊಂದಿಗೆ ಅವರನ್ನು ಗೌರವಿಸುವ ಸಮಯ ಬಂದಿದೆ” ಎಂದು ಬಸು ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...