Homeಅಂತರಾಷ್ಟ್ರೀಯಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

ಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

- Advertisement -
- Advertisement -

ಟಿಪ್ಪು ಸುಲ್ತಾನ್ ವಂಶಸ್ಥೆ, ಬ್ರಿಟಿಷ್ ಭಾರತೀಯ ಗೂಢಚಾರಿ ನೂರ್ ಇನಾಯತ್ ಖಾನ್ ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿಯ ನಾಜಿಗಳ ವಿರುದ್ಧ ಹೋರಾಡಿದ ಕಾರಣಕ್ಕೆ ಫ್ರೆಂಚ್ ಅಂಚೆ ಸೇವೆಯು ನೂರ್ ಅವರ ಅಂಚೆಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ. 

18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನನ ವಂಶಸ್ಥೆಯಾಗಿರುವ ನೂರ್ ಇನಾಯತ್ ಖಾನ್, ಎರಡನೇ ಮಹಾಯುದ್ಧದ ಸಮಯದಲ್ಲಿ ಗುಪ್ತ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ಪ್ರತಿರೋಧದಲ್ಲಿ ವಹಿಸಿದ ಪಾತ್ರಕ್ಕಾಗಿ ಫ್ರಾನ್ಸ್ ಸ್ಮರಣಾರ್ಥ ಅಂಚೆ ಚೀಟಿಯೊಂದಿಗೆ ಗೌರವಿಸಲ್ಪಟ್ಟ ಏಕೈಕ ಭಾರತೀಯ ಮೂಲದ ಮಹಿಳೆಯಾಗಿದ್ದಾರೆ.

ಫ್ರೆಂಚ್ ಅಂಚೆ ಸೇವೆ, ಲಾ ಪೋಸ್ಟೆ, ನಾಜಿ ಜರ್ಮನಿಯ ವಿರುದ್ಧ ಹೋರಾಡಿದ “ಪ್ರತಿರೋಧದ ವ್ಯಕ್ತಿಗಳ” ಗೌರವಾರ್ಥವಾಗಿ ಬಿಡುಗಡೆ ಮಾಡಲಾದ ಅಂಚೆಚೀಟಿಯೊಂದಿಗೆ ನೂರ್ ಅವರನ್ನು ಗೌರವಿಸಿದೆ. ಎರಡನೇ ಮಹಾಯುದ್ಧದ 80 ವರ್ಷಗಳನ್ನು ಗುರುತಿಸಲು ಈ ತಿಂಗಳು ಬಿಡುಗಡೆ ಮಾಡಲಾದ ಅಂಚೆಚೀಟಿಗಳ ಸೆಟ್‌ನಲ್ಲಿ ಆಯ್ಕೆಯಾದ ಒಂದು ಡಜನ್ ಯುದ್ಧ ವೀರರು ಮತ್ತು ನಾಯಕಿಯರಲ್ಲಿ ಅವರು ಒಬ್ಬರು.

“ಯುದ್ಧದ ಅಂತ್ಯದ 80 ನೇ ಮಹತ್ವದ ವಾರ್ಷಿಕೋತ್ಸವದಂದು ಫ್ರಾನ್ಸ್ ನೂರ್ ಇನಾಯತ್ ಖಾನ್ ಅವರಿಗೆ ಅಂಚೆ ಚೀಟಿ ನೀಡಿ ಗೌರವಿಸಿರುವುದು ನನಗೆ ಸಂತೋಷ ತಂದಿದೆ” ಎಂದು ನೂರ್ ಅವರ ಜೀವನ ಚರಿತ್ರೆ – ‘ಸ್ಪೈ ಪ್ರಿನ್ಸೆಸ್: ದಿ ಲೈಫ್ ಆಫ್ ನೂರ್ ಇನಾಯತ್ ಖಾನ್’ ನ ಲಂಡನ್ ಮೂಲದ ಲೇಖಕಿ ಶ್ರಬಾನಿ ಬಸು ಹೇಳಿದ್ದಾರೆ. 

“ನೂರ್ ಫ್ಯಾಸಿಸಂ ವಿರುದ್ಧದ ಹೋರಾಟದಲ್ಲಿ ತನ್ನ ಪ್ರಾಣವನ್ನು ತ್ಯಾಗ ಮಾಡಿದಳು. ಅವಳು ಪ್ಯಾರಿಸ್‌ನಲ್ಲಿ ಬೆಳೆದಳು, ಇಂಗ್ಲೆಂಡ್‌ನಲ್ಲಿ ಯುದ್ಧ ಪ್ರಯತ್ನದಲ್ಲಿ ಸೇರಿಕೊಂಡಳು, ಮತ್ತು ಫ್ರಾನ್ಸ್‌ನಲ್ಲಿ ಸಾಮಾನ್ಯ ಜನರು ಪೋಸ್ಟ್ ಮಾಡುವ ಅಂಚೆ ಚೀಟಿಯಲ್ಲಿ ಅವಳ ಮುಖವನ್ನು ನೋಡುವುದು ಅದ್ಭುತವಾಗಿದೆ,” ಎಂದು ಅವರು ಹೇಳಿದರು.

ಪ್ರತಿಯೊಂದು ಅಂಚೆಚೀಟಿ ಛಾಯಾಚಿತ್ರದಿಂದ ತೆಗೆದ ಕೆತ್ತನೆಯ ರೂಪದಲ್ಲಿದ್ದು, ನೂರ್ ಅವರ ಮೇಲಿನ ಅಂಚೆಚೀಟಿ ಅವರ ಬ್ರಿಟಿಷ್ ಮಹಿಳಾ ಸಹಾಯಕ ವಾಯುಪಡೆ (WAAF) ಸಮವಸ್ತ್ರವನ್ನು ಪ್ರದರ್ಶಿಸುತ್ತದೆ.

“ನೂರ್ ಅವರ ಜನ್ಮ ಶತಮಾನೋತ್ಸವದ ನೆನಪಿಗಾಗಿ ಬ್ರಿಟನ್ 2014 ರಲ್ಲಿ ಅವರನ್ನು ಗೌರವಿಸಿತು. ಈಗ ಬ್ರಿಟನ್ ಮತ್ತು ಫ್ರಾನ್ಸ್ ಅವರ ಗೌರವಾರ್ಥವಾಗಿ ಅಂಚೆಚೀಟಿ ಹೊರಡಿಸಿವೆ. ಅವರ ಪೂರ್ವಜರ ದೇಶವಾದ ಭಾರತವು ಕೂಡ ಅಂಚೆಚೀಟಿಯೊಂದಿಗೆ ಅವರನ್ನು ಗೌರವಿಸುವ ಸಮಯ ಬಂದಿದೆ” ಎಂದು ಬಸು ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...