Homeಮುಖಪುಟಸಿರಿಯಾ ಅಧ್ಯಕ್ಷ ಅಸ್ಸಾದ್ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಫ್ರಾನ್ಸ್

ಸಿರಿಯಾ ಅಧ್ಯಕ್ಷ ಅಸ್ಸಾದ್ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಫ್ರಾನ್ಸ್

- Advertisement -
- Advertisement -

2013ರಲ್ಲಿ ರಾಸಾಯನಿಕ ದಾಳಿಗೆ ಸಂಬಂಧಿಸಿದಂತೆ ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಯುದ್ಧಾಪರಾಧಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್‌ಗೆ ಫ್ರಾನ್ಸ್ ಅಂತಾರಾಷ್ಟ್ರೀಯ ಬಂಧನ ವಾರಂಟ್ ಜಾರಿ ಮಾಡಿದೆ ಎಂದು ಬುಧವಾರ ವರದಿಯಾಗಿದೆ.

ಆಗಸ್ಟ್ 2013 ರಲ್ಲಿ ಡಮಾಸ್ಕಸ್ ಬಳಿ ಸರಿನ್ ಗ್ಯಾಸ್ ದಾಳಿಯಿಂದಾಗಿ 1,400 ಕ್ಕೂ ಹೆಚ್ಚು ಜನರು ಉಸಿರುಗಟ್ಟಿ ಸಾವನ್ನಪ್ಪಿದರು.

ಈ ಪ್ರಕರಣ ಕುರಿತಂತೆ 2021 ರಿಂದ ವಿಚಾರಣೆ ನಡೆಸುತ್ತಿರುವ ಪ್ಯಾರಿಸ್ ನ್ಯಾಯಾಲಯದ ಘಟಕವು ಅಸ್ಸಾದ್ ಮಾತ್ರವಲ್ಲದೆ, ಅವರ ಸಹೋದರ ಮಹರ್, ನಾಲ್ಕನೇ ವಿಭಾಗದ ಡಿ-ಫ್ಯಾಕ್ಟೋ ಮುಖ್ಯಸ್ಯ ಸಿರಿಯನ್ ಸೇನೆಯ ಗಣ್ಯ ಮಿಲಿಟರಿ ಘಟಕ ಮತ್ತು ಇಬ್ಬರು ಜನರಲ್‌ಗಳ ಬಂಧನಕ್ಕಾಗಿಯೂ ಅಂತರರಾಷ್ಟ್ರೀಯ ವಾರಂಟ್‌ಗಳನ್ನು ನೀಡಿದೆ.

ಸಾರ್ವತ್ರಿಕ ನ್ಯಾಯವ್ಯಾಪ್ತಿಯ ತತ್ವದ ಅಡಿಯಲ್ಲಿ ವಿಶ್ವದ ಎಲ್ಲಿಯಾದರೂ ಮಾಡಿದ ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳನ್ನು ಫ್ರಾನ್ಸ್ ವಿಚಾರಣೆಗೆ ಒಳಪಡಿಸಬಹುದು.

ಸಿರಿಯನ್ ಸೆಂಟರ್ ಫಾರ್ ಮೀಡಿಯಾ ಮತ್ತು ಫ್ರೀಡಂ ಆಫ್ ಎಕ್ಸ್‌ಪ್ರೆಶನ್ (SCM) ಎನ್‌ಜಿಒ, ವಕೀಲರ ಸಂಘ ಓಪನ್ ಸೊಸೈಟಿ ಜಸ್ಟೀಸ್ ಇನಿಶಿಯೇಟಿವ್ (ಒಎಸ್‌ಜೆಐ) ಮತ್ತು ಸಿರಿಯಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ದಾಖಲಿಸುವ ಸಿರಿಯನ್ ಆರ್ಕೈವ್ ಸಂಸ್ಥೆ ಸಲ್ಲಿಸಿದ ದೂರಿನ ನಂತರ ತನಿಖೆ ನಡೆಸಲಾಯಿತು.

ಬಂಧನದ ವಾರಂಟ್ ಕುರಿತು ಎಸ್‌ಸಿಎಂ ಅಧ್ಯಕ್ಷ ಮಜೆನ್ ದರ್ವಿಶ್ ಅಸ್ಸಾದ್ ಮಾತನಾಡಿದ್ದು, ”ಇದೊಂದು ದೊಡ್ಡ ಬೆಳವಣಿಗೆಯಾಗಿದೆ” ಎಂದು ಹೇಳಿದರು.

”ಸಿರಿಯಾದ ಅಧ್ಯಕ್ಷರಿಗೆ ತಿಳಿಯದೆ ರಾಸಾಯನಿಕ ದಾಳಿ ನಡೆಯಲು ಸಾಧ್ಯವಿಲ್ಲ ಎಂದು ಸ್ವತಂತ್ರ ನ್ಯಾಯಾಲಯ ಹೇಳಿದೆ. ಅವರು ಜವಾಬ್ದಾರಿಯನ್ನು ಹೊಂದಿದ್ದಾರೆ ಮತ್ತು ಜವಾಬ್ದಾರಿಯುತರಾಗಿರಬೇಕು” ಎಂದು ಅವರು AFP ಗೆ ತಿಳಿಸಿದರು.

ಓಪನ್ ಸೊಸೈಟಿ ಜಸ್ಟೀಸ್ ಇನಿಶಿಯೇಟಿವ್‌ನ ಸ್ಟೀವ್ ಕೋಸ್ಟಾಸ್ ಮಾತಣಾಡಿ, ”ಇದೊಂದು ಐತಿಹಾಸಿಕ ಕ್ಷಣ. ಅತ್ಯಂತ ಗಂಭೀರವಾದ ಅಂತರರಾಷ್ಟ್ರೀಯ ಅಪರಾಧಗಳಿಗೆ ಯಾವುದೇ ವಿನಾಯಿತಿ ಇಲ್ಲ ಎಂಬ ತತ್ವವನ್ನು ಸ್ಥಾಪಿಸಲು ಫ್ರಾನ್ಸ್‌ಗೆ ಅವಕಾಶವಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವಸಂಸ್ಥೆಯ ಮೌನವೇ ಇಸ್ರೇಲಿನ ಅನಾಗರಿಕ ದಾಳಿಗೆ ಪ್ರೇರಣೆ: ಜೋರ್ಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...