Homeಮುಖಪುಟಗರ್ಭಪಾತ ಮಹಿಳೆಯ 'ಸಾಂವಿಧಾನಿಕ ಹಕ್ಕು': ಮಸೂದೆ ಅಂಗೀಕರಿಸಿದ ಫ್ರಾನ್ಸ್

ಗರ್ಭಪಾತ ಮಹಿಳೆಯ ‘ಸಾಂವಿಧಾನಿಕ ಹಕ್ಕು’: ಮಸೂದೆ ಅಂಗೀಕರಿಸಿದ ಫ್ರಾನ್ಸ್

- Advertisement -
- Advertisement -

ಗರ್ಭಪಾತವನ್ನು ಮಹಿಳೆಯ ‘ಸಾಂವಿಧಾನಿಕ ಹಕ್ಕು, ಎಂದು ಪ್ರತಿಪಾದಿಸಿರುವ ಫ್ರಾನ್ಸ್‌ನ ಶಾಸಕಾಂಗ, ಸೋಮವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಸಂವಿಧಾನದ 34ನೇ ವಿಧಿಗೆ ತಿದ್ದುಪಡಿ ತರುವ ಮಸೂದೆಯನ್ನು ಅಂಗೀಕರಿಸಿದೆ. ಈ ಮೂಲಕ ಗರ್ಭಪಾತವನ್ನು ಸಂವಿಧಾನಾತ್ಮಕ ಹಕ್ಕಾಗಿ ಘೋಷಿಸಿದ ವಿಶ್ವದ ಮೊದಲ ದೇಶ ಎನಿಸಿಕೊಂಡಿದೆ.

ಸರ್ಕಾರದ ಮಂಡಿಸಿದ ಮಸೂದೆಯನ್ನು ಸೆನೆಟರ್‌ಗಳು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಪ್ಯಾರಿಸ್‌ನ ಹೊರವಲಯದ ವರ್ಸೆಲ್ಲೆಸ್ ಅರಮನೆಯಲ್ಲಿ ನಡೆದ ಸಂಸತ್ತಿನ ಜಂಟಿ ಅಧಿವೇಶನದಲ್ಲಿ 780 ಮತಗಳು ಈ ಮಸೂದೆಯ ಪರವಾಗಿ ಚಲಾವಣೆಯಾದರೆ, ಕೇವಲ 72 ಮಂದಿ ವಿರೋಧಿಸಿದ್ದಾರೆ.

ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದವರು ಮಕ್ಕಳನ್ನು ಹೊಂದುವ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆಯೇ ಹೊರತು, ಗರ್ಭಪಾತವನ್ನು ಅವರು ಸಂಪೂರ್ಣವಾಗಿ ವಿರೋಧಿಸಿಲ್ಲ ಎಂದು ವರದಿಯಾಗಿದೆ.

ಸಂಸತ್ತಿನಲ್ಲಿ ನಡೆದ ಮತದಾನದ ಫಲಿತಾಂಶವನ್ನು ಬೃಹತ್ ಪರದೆಯಲ್ಲಿ ಪ್ರದರ್ಶಿಸುತ್ತಿದ್ದಂತೆ, ಗರ್ಭಪಾತದ ಹಕ್ಕನ್ನು ಬೆಂಬಲಿಸುವ ಕಾರ್ಯಕರ್ತರು ಪ್ಯಾರಿಸ್‌ನಲ್ಲಿ ಜಮಾಯಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಐಫೆಲ್ ಟವರ್ ಬಳಿ “ನನ್ನದೇಹ ನನ್ನ ಹಕ್ಕು” ಎಂಬ ಸಂದೇಶವನ್ನು ಪ್ರದರ್ಶಿಸಿದ್ದಾರೆ.

ಗರ್ಭಪಾತದ ಹಕ್ಕು ಫ್ರಾನ್ಸ್‌ನಲ್ಲಿ ದೊಡ್ಡ ಮಟ್ಟದಲ್ಲಿ ಸ್ವೀಕೃತವಾಗಿದ್ದು, ಗರ್ಭಪಾತವನ್ನು ಕಾನೂನುಬದ್ಧಗೊಳಿಸುವ ಕ್ರಮವನ್ನು ಫ್ರಾನ್ಸ್‌ನ ಶೇಕಡ 80ರಷ್ಟು ಮಂದಿ ಬೆಂಬಲಿಸಿರುವುದು ಸಮೀಕ್ಷೆಯಿಂದ ಗೊತ್ತಾಗಿದೆ. ಆದರೆ, ಗರ್ಭಪಾತ ವಿರೋಧಿ ಸಂಘಟನೆಗಳು ಇದನ್ನು ಕಟುವಾಗಿ ಟೀಕಿಸಿವೆ.

“ನಿಮ್ಮ ದೇಹ ನಿಮಗೆ ಸೇರಿದ್ದು, ನಿಮಗಾಗಿ ಬೇರೆ ಯಾರೂ ನಿರ್ಧಾರ ಕೈಗೊಳ್ಳುವಂತಿಲ್ಲ” ಎನ್ನುವ ಸಂದೇಶವನ್ನು ಎಲ್ಲ ಮಹಿಳೆಯರಿಗೆ ರವಾನಿಸುತ್ತಿದ್ದೇವೆ ಎಂದು ಪ್ರಧಾನಿ ಗ್ಯಾಬ್ರಿಯೆಲ್ ಅಟ್ಟಲ್ ಹೇಳಿದ್ದಾರೆ. ಫ್ರಾನ್ಸ್ ನಲ್ಲಿ 1974ರಿಂದಲೂ ಗರ್ಭಪಾತದ ಹಕ್ಕಿಗೆ ಸಂಬಂಧಿಸಿದ ಕಾನೂನು ಜಾರಿಯಲ್ಲಿದೆ.

ಅಮೆರಿಕದಲ್ಲಿ ಗರ್ಭಪಾತವನ್ನು ಮಹಿಳೆಯರ ಸಾಂವಿಧಾನಿಕ ಹಕ್ಕು ಎಂದು ಘೋಷಿಸಿದ ರಾಯ್ ವಿ.ವೇಡ್ ಅವರ ತೀರ್ಪನ್ನು 2022ರಲ್ಲಿ ಅಮೆರಿಕದ ಸುಪ್ರೀಂಕೋರ್ಟ್ ತಳ್ಳಿಹಾಕಿದ ಹಿನ್ನೆಲೆಯಲ್ಲಿ ಫ್ರಾನ್ಸ್ ಇದೀಗ ಇದನ್ನು ಮೂಲಭೂತ ಕಾನೂನಾಗಿ ಜಾರಿಗೊಳಿಸಿದ ಮೊದಲ ದೇಶವಾಗಲಿದೆ.

ಫ್ರಾನ್ಸ್ ಮೊದಲ ಬಾರಿಗೆ 1975ರಲ್ಲಿ ಗರ್ಭಪಾತವನ್ನು ಕಾನೂನುಬದ್ಧಗೊಳಿಸಿತ್ತು. ಆಗಿನ ಆರೋಗ್ಯ ಸಚಿವೆ ಸಿಮೋನ್ ವೇಲ್ ನೇತೃತ್ವದಲ್ಲಿ ಅಭಿಯಾನ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಸಿಮೋನ್‌ ವೇಲ್ ಅವರು ನಾಝಿಗಳ ಆಶ್ವಿಟ್ಜ್ ಹತ್ಯಾಕಾಂಡದಲ್ಲಿ ಬದುಕುಳಿದವರು. ಫ್ರಾನ್ಸ್‌ನ ದೊಡ್ದ ಸ್ತ್ರೀವಾದಿಯಾಗಿದ್ದರು.

ಇದನ್ನೂ ಓದಿ : ಉಕ್ರೇನ್ ವಿರುದ್ಧ ಯುದ್ಧದಲ್ಲಿ ಹೋರಾಡುವಂತೆ ರಷ್ಯಾದಿಂದ ಬಲವಂತ: ಭಾರತೀಯರಿಂದ ವಿಡಿಯೋ ರಿಲೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...