Homeಮುಖಪುಟಗರ್ಭಪಾತ ಮಹಿಳೆಯ 'ಸಾಂವಿಧಾನಿಕ ಹಕ್ಕು': ಮಸೂದೆ ಅಂಗೀಕರಿಸಿದ ಫ್ರಾನ್ಸ್

ಗರ್ಭಪಾತ ಮಹಿಳೆಯ ‘ಸಾಂವಿಧಾನಿಕ ಹಕ್ಕು’: ಮಸೂದೆ ಅಂಗೀಕರಿಸಿದ ಫ್ರಾನ್ಸ್

- Advertisement -
- Advertisement -

ಗರ್ಭಪಾತವನ್ನು ಮಹಿಳೆಯ ‘ಸಾಂವಿಧಾನಿಕ ಹಕ್ಕು, ಎಂದು ಪ್ರತಿಪಾದಿಸಿರುವ ಫ್ರಾನ್ಸ್‌ನ ಶಾಸಕಾಂಗ, ಸೋಮವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಸಂವಿಧಾನದ 34ನೇ ವಿಧಿಗೆ ತಿದ್ದುಪಡಿ ತರುವ ಮಸೂದೆಯನ್ನು ಅಂಗೀಕರಿಸಿದೆ. ಈ ಮೂಲಕ ಗರ್ಭಪಾತವನ್ನು ಸಂವಿಧಾನಾತ್ಮಕ ಹಕ್ಕಾಗಿ ಘೋಷಿಸಿದ ವಿಶ್ವದ ಮೊದಲ ದೇಶ ಎನಿಸಿಕೊಂಡಿದೆ.

ಸರ್ಕಾರದ ಮಂಡಿಸಿದ ಮಸೂದೆಯನ್ನು ಸೆನೆಟರ್‌ಗಳು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಪ್ಯಾರಿಸ್‌ನ ಹೊರವಲಯದ ವರ್ಸೆಲ್ಲೆಸ್ ಅರಮನೆಯಲ್ಲಿ ನಡೆದ ಸಂಸತ್ತಿನ ಜಂಟಿ ಅಧಿವೇಶನದಲ್ಲಿ 780 ಮತಗಳು ಈ ಮಸೂದೆಯ ಪರವಾಗಿ ಚಲಾವಣೆಯಾದರೆ, ಕೇವಲ 72 ಮಂದಿ ವಿರೋಧಿಸಿದ್ದಾರೆ.

ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದವರು ಮಕ್ಕಳನ್ನು ಹೊಂದುವ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆಯೇ ಹೊರತು, ಗರ್ಭಪಾತವನ್ನು ಅವರು ಸಂಪೂರ್ಣವಾಗಿ ವಿರೋಧಿಸಿಲ್ಲ ಎಂದು ವರದಿಯಾಗಿದೆ.

ಸಂಸತ್ತಿನಲ್ಲಿ ನಡೆದ ಮತದಾನದ ಫಲಿತಾಂಶವನ್ನು ಬೃಹತ್ ಪರದೆಯಲ್ಲಿ ಪ್ರದರ್ಶಿಸುತ್ತಿದ್ದಂತೆ, ಗರ್ಭಪಾತದ ಹಕ್ಕನ್ನು ಬೆಂಬಲಿಸುವ ಕಾರ್ಯಕರ್ತರು ಪ್ಯಾರಿಸ್‌ನಲ್ಲಿ ಜಮಾಯಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಐಫೆಲ್ ಟವರ್ ಬಳಿ “ನನ್ನದೇಹ ನನ್ನ ಹಕ್ಕು” ಎಂಬ ಸಂದೇಶವನ್ನು ಪ್ರದರ್ಶಿಸಿದ್ದಾರೆ.

ಗರ್ಭಪಾತದ ಹಕ್ಕು ಫ್ರಾನ್ಸ್‌ನಲ್ಲಿ ದೊಡ್ಡ ಮಟ್ಟದಲ್ಲಿ ಸ್ವೀಕೃತವಾಗಿದ್ದು, ಗರ್ಭಪಾತವನ್ನು ಕಾನೂನುಬದ್ಧಗೊಳಿಸುವ ಕ್ರಮವನ್ನು ಫ್ರಾನ್ಸ್‌ನ ಶೇಕಡ 80ರಷ್ಟು ಮಂದಿ ಬೆಂಬಲಿಸಿರುವುದು ಸಮೀಕ್ಷೆಯಿಂದ ಗೊತ್ತಾಗಿದೆ. ಆದರೆ, ಗರ್ಭಪಾತ ವಿರೋಧಿ ಸಂಘಟನೆಗಳು ಇದನ್ನು ಕಟುವಾಗಿ ಟೀಕಿಸಿವೆ.

“ನಿಮ್ಮ ದೇಹ ನಿಮಗೆ ಸೇರಿದ್ದು, ನಿಮಗಾಗಿ ಬೇರೆ ಯಾರೂ ನಿರ್ಧಾರ ಕೈಗೊಳ್ಳುವಂತಿಲ್ಲ” ಎನ್ನುವ ಸಂದೇಶವನ್ನು ಎಲ್ಲ ಮಹಿಳೆಯರಿಗೆ ರವಾನಿಸುತ್ತಿದ್ದೇವೆ ಎಂದು ಪ್ರಧಾನಿ ಗ್ಯಾಬ್ರಿಯೆಲ್ ಅಟ್ಟಲ್ ಹೇಳಿದ್ದಾರೆ. ಫ್ರಾನ್ಸ್ ನಲ್ಲಿ 1974ರಿಂದಲೂ ಗರ್ಭಪಾತದ ಹಕ್ಕಿಗೆ ಸಂಬಂಧಿಸಿದ ಕಾನೂನು ಜಾರಿಯಲ್ಲಿದೆ.

ಅಮೆರಿಕದಲ್ಲಿ ಗರ್ಭಪಾತವನ್ನು ಮಹಿಳೆಯರ ಸಾಂವಿಧಾನಿಕ ಹಕ್ಕು ಎಂದು ಘೋಷಿಸಿದ ರಾಯ್ ವಿ.ವೇಡ್ ಅವರ ತೀರ್ಪನ್ನು 2022ರಲ್ಲಿ ಅಮೆರಿಕದ ಸುಪ್ರೀಂಕೋರ್ಟ್ ತಳ್ಳಿಹಾಕಿದ ಹಿನ್ನೆಲೆಯಲ್ಲಿ ಫ್ರಾನ್ಸ್ ಇದೀಗ ಇದನ್ನು ಮೂಲಭೂತ ಕಾನೂನಾಗಿ ಜಾರಿಗೊಳಿಸಿದ ಮೊದಲ ದೇಶವಾಗಲಿದೆ.

ಫ್ರಾನ್ಸ್ ಮೊದಲ ಬಾರಿಗೆ 1975ರಲ್ಲಿ ಗರ್ಭಪಾತವನ್ನು ಕಾನೂನುಬದ್ಧಗೊಳಿಸಿತ್ತು. ಆಗಿನ ಆರೋಗ್ಯ ಸಚಿವೆ ಸಿಮೋನ್ ವೇಲ್ ನೇತೃತ್ವದಲ್ಲಿ ಅಭಿಯಾನ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಸಿಮೋನ್‌ ವೇಲ್ ಅವರು ನಾಝಿಗಳ ಆಶ್ವಿಟ್ಜ್ ಹತ್ಯಾಕಾಂಡದಲ್ಲಿ ಬದುಕುಳಿದವರು. ಫ್ರಾನ್ಸ್‌ನ ದೊಡ್ದ ಸ್ತ್ರೀವಾದಿಯಾಗಿದ್ದರು.

ಇದನ್ನೂ ಓದಿ : ಉಕ್ರೇನ್ ವಿರುದ್ಧ ಯುದ್ಧದಲ್ಲಿ ಹೋರಾಡುವಂತೆ ರಷ್ಯಾದಿಂದ ಬಲವಂತ: ಭಾರತೀಯರಿಂದ ವಿಡಿಯೋ ರಿಲೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...