Homeಮುಖಪುಟಗರ್ಭಪಾತ ಮಹಿಳೆಯ 'ಸಾಂವಿಧಾನಿಕ ಹಕ್ಕು': ಮಸೂದೆ ಅಂಗೀಕರಿಸಿದ ಫ್ರಾನ್ಸ್

ಗರ್ಭಪಾತ ಮಹಿಳೆಯ ‘ಸಾಂವಿಧಾನಿಕ ಹಕ್ಕು’: ಮಸೂದೆ ಅಂಗೀಕರಿಸಿದ ಫ್ರಾನ್ಸ್

- Advertisement -
- Advertisement -

ಗರ್ಭಪಾತವನ್ನು ಮಹಿಳೆಯ ‘ಸಾಂವಿಧಾನಿಕ ಹಕ್ಕು, ಎಂದು ಪ್ರತಿಪಾದಿಸಿರುವ ಫ್ರಾನ್ಸ್‌ನ ಶಾಸಕಾಂಗ, ಸೋಮವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಸಂವಿಧಾನದ 34ನೇ ವಿಧಿಗೆ ತಿದ್ದುಪಡಿ ತರುವ ಮಸೂದೆಯನ್ನು ಅಂಗೀಕರಿಸಿದೆ. ಈ ಮೂಲಕ ಗರ್ಭಪಾತವನ್ನು ಸಂವಿಧಾನಾತ್ಮಕ ಹಕ್ಕಾಗಿ ಘೋಷಿಸಿದ ವಿಶ್ವದ ಮೊದಲ ದೇಶ ಎನಿಸಿಕೊಂಡಿದೆ.

ಸರ್ಕಾರದ ಮಂಡಿಸಿದ ಮಸೂದೆಯನ್ನು ಸೆನೆಟರ್‌ಗಳು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಪ್ಯಾರಿಸ್‌ನ ಹೊರವಲಯದ ವರ್ಸೆಲ್ಲೆಸ್ ಅರಮನೆಯಲ್ಲಿ ನಡೆದ ಸಂಸತ್ತಿನ ಜಂಟಿ ಅಧಿವೇಶನದಲ್ಲಿ 780 ಮತಗಳು ಈ ಮಸೂದೆಯ ಪರವಾಗಿ ಚಲಾವಣೆಯಾದರೆ, ಕೇವಲ 72 ಮಂದಿ ವಿರೋಧಿಸಿದ್ದಾರೆ.

ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದವರು ಮಕ್ಕಳನ್ನು ಹೊಂದುವ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆಯೇ ಹೊರತು, ಗರ್ಭಪಾತವನ್ನು ಅವರು ಸಂಪೂರ್ಣವಾಗಿ ವಿರೋಧಿಸಿಲ್ಲ ಎಂದು ವರದಿಯಾಗಿದೆ.

ಸಂಸತ್ತಿನಲ್ಲಿ ನಡೆದ ಮತದಾನದ ಫಲಿತಾಂಶವನ್ನು ಬೃಹತ್ ಪರದೆಯಲ್ಲಿ ಪ್ರದರ್ಶಿಸುತ್ತಿದ್ದಂತೆ, ಗರ್ಭಪಾತದ ಹಕ್ಕನ್ನು ಬೆಂಬಲಿಸುವ ಕಾರ್ಯಕರ್ತರು ಪ್ಯಾರಿಸ್‌ನಲ್ಲಿ ಜಮಾಯಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಐಫೆಲ್ ಟವರ್ ಬಳಿ “ನನ್ನದೇಹ ನನ್ನ ಹಕ್ಕು” ಎಂಬ ಸಂದೇಶವನ್ನು ಪ್ರದರ್ಶಿಸಿದ್ದಾರೆ.

ಗರ್ಭಪಾತದ ಹಕ್ಕು ಫ್ರಾನ್ಸ್‌ನಲ್ಲಿ ದೊಡ್ಡ ಮಟ್ಟದಲ್ಲಿ ಸ್ವೀಕೃತವಾಗಿದ್ದು, ಗರ್ಭಪಾತವನ್ನು ಕಾನೂನುಬದ್ಧಗೊಳಿಸುವ ಕ್ರಮವನ್ನು ಫ್ರಾನ್ಸ್‌ನ ಶೇಕಡ 80ರಷ್ಟು ಮಂದಿ ಬೆಂಬಲಿಸಿರುವುದು ಸಮೀಕ್ಷೆಯಿಂದ ಗೊತ್ತಾಗಿದೆ. ಆದರೆ, ಗರ್ಭಪಾತ ವಿರೋಧಿ ಸಂಘಟನೆಗಳು ಇದನ್ನು ಕಟುವಾಗಿ ಟೀಕಿಸಿವೆ.

“ನಿಮ್ಮ ದೇಹ ನಿಮಗೆ ಸೇರಿದ್ದು, ನಿಮಗಾಗಿ ಬೇರೆ ಯಾರೂ ನಿರ್ಧಾರ ಕೈಗೊಳ್ಳುವಂತಿಲ್ಲ” ಎನ್ನುವ ಸಂದೇಶವನ್ನು ಎಲ್ಲ ಮಹಿಳೆಯರಿಗೆ ರವಾನಿಸುತ್ತಿದ್ದೇವೆ ಎಂದು ಪ್ರಧಾನಿ ಗ್ಯಾಬ್ರಿಯೆಲ್ ಅಟ್ಟಲ್ ಹೇಳಿದ್ದಾರೆ. ಫ್ರಾನ್ಸ್ ನಲ್ಲಿ 1974ರಿಂದಲೂ ಗರ್ಭಪಾತದ ಹಕ್ಕಿಗೆ ಸಂಬಂಧಿಸಿದ ಕಾನೂನು ಜಾರಿಯಲ್ಲಿದೆ.

ಅಮೆರಿಕದಲ್ಲಿ ಗರ್ಭಪಾತವನ್ನು ಮಹಿಳೆಯರ ಸಾಂವಿಧಾನಿಕ ಹಕ್ಕು ಎಂದು ಘೋಷಿಸಿದ ರಾಯ್ ವಿ.ವೇಡ್ ಅವರ ತೀರ್ಪನ್ನು 2022ರಲ್ಲಿ ಅಮೆರಿಕದ ಸುಪ್ರೀಂಕೋರ್ಟ್ ತಳ್ಳಿಹಾಕಿದ ಹಿನ್ನೆಲೆಯಲ್ಲಿ ಫ್ರಾನ್ಸ್ ಇದೀಗ ಇದನ್ನು ಮೂಲಭೂತ ಕಾನೂನಾಗಿ ಜಾರಿಗೊಳಿಸಿದ ಮೊದಲ ದೇಶವಾಗಲಿದೆ.

ಫ್ರಾನ್ಸ್ ಮೊದಲ ಬಾರಿಗೆ 1975ರಲ್ಲಿ ಗರ್ಭಪಾತವನ್ನು ಕಾನೂನುಬದ್ಧಗೊಳಿಸಿತ್ತು. ಆಗಿನ ಆರೋಗ್ಯ ಸಚಿವೆ ಸಿಮೋನ್ ವೇಲ್ ನೇತೃತ್ವದಲ್ಲಿ ಅಭಿಯಾನ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಸಿಮೋನ್‌ ವೇಲ್ ಅವರು ನಾಝಿಗಳ ಆಶ್ವಿಟ್ಜ್ ಹತ್ಯಾಕಾಂಡದಲ್ಲಿ ಬದುಕುಳಿದವರು. ಫ್ರಾನ್ಸ್‌ನ ದೊಡ್ದ ಸ್ತ್ರೀವಾದಿಯಾಗಿದ್ದರು.

ಇದನ್ನೂ ಓದಿ : ಉಕ್ರೇನ್ ವಿರುದ್ಧ ಯುದ್ಧದಲ್ಲಿ ಹೋರಾಡುವಂತೆ ರಷ್ಯಾದಿಂದ ಬಲವಂತ: ಭಾರತೀಯರಿಂದ ವಿಡಿಯೋ ರಿಲೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...