Homeಅಂತರಾಷ್ಟ್ರೀಯಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ - ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ – ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

"ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ." - ಮ್ಯಾಕ್ರಾನ್

- Advertisement -
- Advertisement -

ತೀವ್ರ ಕುತೂಹಲ ಮತ್ತು ಜಿದ್ದಾಜಿದ್ದಿನಿಂದ ಕೂಡಿದ್ದ ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆಯಾಗಿದ್ದಾರೆ. ತೀವ್ರ ಬಲಪಂಥೀಯ ನಾಯಕಿಯಾದ ಮರೀನ್ ಲಿ ಪೆನ್ ಪೈಪೋಟಿ ನೀಡಿದರೂ ಸೋಲು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಇಮ್ಯಾನುಯೆಲ್ ಮ್ಯಾಕ್ರಾನ್ ಶೇ.58.6 ರಷ್ಟು ಮತಗಳನ್ನು ಪಡೆದರೆ ಕನ್ಸರ್ವೇಟಿವ್ ಪಾರ್ಟಿಯ ಲಿ ಪೆನ್ ಶೇ.41.4 ಮತಗಳಿಗೆ ತೃಪ್ತಿಪಟ್ಟುಕೊಂಡರು. ಕಳೆದ 20 ವರ್ಷದ ಫ್ರಾನ್ಸ್ ಇತಿಹಾಸದಲ್ಲಿ ಸತತ ಎರಡನೇ ಬಾರಿಗೆ ಆಯ್ಕೆಯಾದ ಕೀರ್ತಿಗೆ ಮ್ಯಾಕ್ರಾನ್ ಭಾಜನರಾಗಿದ್ದಾರೆ.

ಮತದಾರರಿಗೆ ಕೃತಜ್ಞತೆ ಅರ್ಪಿಸಿರುವ ಮ್ಯಾಕ್ರಾನ್, “ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಐಫೆಲ್ ಟವರ್‌ನ ಬುಡದಲ್ಲಿರುವ ಸೆಂಟ್ರಲ್ ಪ್ಯಾರಿಸ್‌ನ ಚಾಂಪ್ ಡಿ ಮಾರ್ಸ್‌ನಲ್ಲಿ ವಿಜಯ ಭಾಷಣ ಮಾಡಿದ ಅವರು, “ಹಿಂದಿನ ಆಡಳಿತದಂತೆಯೇ ಮುಂದುವರೆಯುತ್ತೇನೆ, ಇದು ಹೊಸ ಯುಗವಾಗಿದೆ” ಎಂದಿದ್ದಾರೆ.

ಮ್ಯಾಕ್ರಾನ್ ಕುರಿತು

2017ರಲ್ಲಿ ಲಿ ಪೆನ್ ಅವರನ್ನು ಭಾರೀ ಅಂತರದಿಂದ ಸೋಲಿಸಿದ್ದ 46 ವರ್ಷದ ಮ್ಯಾಕ್ರಾನ್, ಈ ಬಾರಿ ಗೆಲ್ಲಲು ತೀವ್ರ ಬೆವರು ಹರಿಸಿದ್ದರು. 2017ರಲ್ಲಿ ಮ್ಯಾಕ್ರಾನ್ ಹೊಸ ಮುಖವಾಗಿದ್ದರು ಮತ್ತು ಉದಾರವಾದಿ ಪ್ರಗತಿಪರ ಎಂದು ಬಿಂಬಿಸಿಕೊಂಡಿದ್ದರು. ಹಾಗಾಗಿ ಅಲ್ಲಿನ ಎಡಪಕ್ಷಗಳು, ಅಲ್ಪ ಸಂಖ್ಯಾತರರು ಸಹ ಅವರನ್ನು ಬೆಂಬಲಿಸಿದ್ದರು. ಆದರೆ ನಂತರದ ಆಡಳಿತದಲ್ಲಿ ಅವರ ವ್ಯಾಪಾರೋದ್ಯಮ ಪರವಾದ ನೀತಿ ನಿರ್ಧಾರಗಳು ಎಡಪಂಥೀಯರಿಂದ ಟೀಕೆಗೆ ಗುರಿಯಾಗಿದ್ದವು. ಧಾರ್ಮಿಕ ಸಂಘಟನೆಗಳ ಮೇಲೆ ಕಠಿಣ ಕ್ರಮ ಜರುಗಿಸಿದ ಮ್ಯಾಕ್ರಾನ್ ತೀರ್ಮಾನಗಳು ಅಲ್ಪಸಂಖ್ಯಾತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದವು. ಆದರೆ ಈ ಎಲ್ಲದರ ನಡುವೆಯು ಅವರು ಗೆಲ್ಲಲು ಸಾಧ್ಯವಾಗಿದ್ದು ಎದುರಾಳಿ ಲಿ ಪೆನ್‌ರವರ ಉಗ್ರ ರಾಷ್ಟ್ರೀಯತೆ ಮತ್ತು ಬಲಪಂಥೀಯತೆಯಿಂದ.

ಯಾರಿದು ಮರೀನ್ ಲಿ ಪೆನ್

ವಲಸೆ ವಿರೋಧಿಯಾದ ಮತ್ತು ತೀವ್ರ ಬಲಪಂಥೀಯ ಸಿದ್ದಾಂತ ಪ್ರತಿಪಾದಿಸುವ 53 ವರ್ಷದ ಲಿ ಪೆನ್ 2017 ರಲ್ಲಿ ಹೀನಾಯವಾಗಿ ಸೋತಿದ್ದರು. ಅವರ ಅಪಾಯಕಾರಿ ರಾಜಕಾರಣ ಪ್ರೆಂಚ್ ಗಣರಾಜ್ಯಕ್ಕೆ ಮಾರಕ ಎಂದು ಹೇಳಲಾಗಿತ್ತು. ಆದರೆ ನಂತರ ಅವರು ಉಗ್ರ ರಾಷ್ಟ್ರೀಯತೆ ಮತ್ತು ವ್ಯವಸ್ಥೆಯ ವಿರೋಧಿ ರಾಜಕಾರಣದ ಮತ್ತೇರಿಸುವ ಮಿಶ್ರಪೇಯವನ್ನು ಮತದಾರರ ಮುಂದೆ ಇಟ್ಟು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ತಮ್ಮ ತೀವ್ರ ಬಲಪಂಥೀಯ ಬೆಂಬಲ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡು ಬೆಲೆ ಏರಿಕೆ, ಹಣದುಬ್ಬರ ಕುರಿತು ಅಸಮಾಧಾನ ಹೆಚ್ಚಿದ ಅಸಮಾಧಾನವನ್ನು ಬಳಸಿ ಮ್ಯಾಕ್ರಾನ್ ಆಡಳಿತದ ಕುರಿತು ಭ್ರಮನಿರಸನ ಹೊಂದಿದ ಮತದಾರರನ್ನೂ ತಮ್ಮತ್ತ ಸೆಳೆದುಕೊಂಡಿದ್ದಾರೆ. ಹಾಗಾಗಿ ಅವರು ಈ ಬಾರಿ ತೀವ್ರ ಪೈಪೋಟಿ ನೀಡಲು ಸಾಧ್ಯವಾಯಿತು ಎನ್ನಲಾಗಿದೆ.

ಮರೀನ್ ಲಿ ಪೆನ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಉಕ್ರೇನ್ ವಿರುದ್ಧದ ಯುದ್ಧವನ್ನು ಲಿ ಪೆನ್ ವಿರೋಧಿಸುವ ಜೊತೆಗೆ ರಷ್ಯಾದ ಮೇಲೆ ಅಮೆರಿಕ ಮತ್ತು ಐರೋಪ್ಯ ಒಕ್ಕೂಟ ಸಾರಿರುವ ನಿರ್ಬಂಧಗಳನ್ನೂ ಟೀಕಿಸಿದ್ದರು. ಈ ನಿರ್ಬಂಧಗಳು ಫ್ರೆಂಚ್ ಗ್ರಾಹಕರ ಹಿತಗಳನ್ನು ಬಾಧಿಸುತ್ತಿವೆ ಎಂದು ವಾದಿಸಿದ್ದರು. ನ್ಯಾಟೋ ಕಮಾಂಡ್ ನಿಂದ ಫ್ರೆಂಚ್ ಪಡೆಗಳನ್ನು ವಾಪಸು ಕರೆಸಿಕೊಳ್ಳಬೇಕೆಂಬುದು ಮಾತನಾಡಿದ್ದರು. ಇವೆಲ್ಲವೂ ಯೂರೋಪ್ ಒಕ್ಕೂಟಕ್ಕೆ ಭಾರೀ ತಲೆನೋವಾಗಿದ್ದವು. ಸದ್ಯದ ಅವರ ಸೋಲಿನಿಂದ ಯೂರೋಪಿಯನ್ ಒಕ್ಕೂಟ ನಿಟ್ಟುಸಿರಿ ಬಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...