Homeಅಂತರಾಷ್ಟ್ರೀಯಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ - ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ – ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

"ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ." - ಮ್ಯಾಕ್ರಾನ್

- Advertisement -
- Advertisement -

ತೀವ್ರ ಕುತೂಹಲ ಮತ್ತು ಜಿದ್ದಾಜಿದ್ದಿನಿಂದ ಕೂಡಿದ್ದ ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆಯಾಗಿದ್ದಾರೆ. ತೀವ್ರ ಬಲಪಂಥೀಯ ನಾಯಕಿಯಾದ ಮರೀನ್ ಲಿ ಪೆನ್ ಪೈಪೋಟಿ ನೀಡಿದರೂ ಸೋಲು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಇಮ್ಯಾನುಯೆಲ್ ಮ್ಯಾಕ್ರಾನ್ ಶೇ.58.6 ರಷ್ಟು ಮತಗಳನ್ನು ಪಡೆದರೆ ಕನ್ಸರ್ವೇಟಿವ್ ಪಾರ್ಟಿಯ ಲಿ ಪೆನ್ ಶೇ.41.4 ಮತಗಳಿಗೆ ತೃಪ್ತಿಪಟ್ಟುಕೊಂಡರು. ಕಳೆದ 20 ವರ್ಷದ ಫ್ರಾನ್ಸ್ ಇತಿಹಾಸದಲ್ಲಿ ಸತತ ಎರಡನೇ ಬಾರಿಗೆ ಆಯ್ಕೆಯಾದ ಕೀರ್ತಿಗೆ ಮ್ಯಾಕ್ರಾನ್ ಭಾಜನರಾಗಿದ್ದಾರೆ.

ಮತದಾರರಿಗೆ ಕೃತಜ್ಞತೆ ಅರ್ಪಿಸಿರುವ ಮ್ಯಾಕ್ರಾನ್, “ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಐಫೆಲ್ ಟವರ್‌ನ ಬುಡದಲ್ಲಿರುವ ಸೆಂಟ್ರಲ್ ಪ್ಯಾರಿಸ್‌ನ ಚಾಂಪ್ ಡಿ ಮಾರ್ಸ್‌ನಲ್ಲಿ ವಿಜಯ ಭಾಷಣ ಮಾಡಿದ ಅವರು, “ಹಿಂದಿನ ಆಡಳಿತದಂತೆಯೇ ಮುಂದುವರೆಯುತ್ತೇನೆ, ಇದು ಹೊಸ ಯುಗವಾಗಿದೆ” ಎಂದಿದ್ದಾರೆ.

ಮ್ಯಾಕ್ರಾನ್ ಕುರಿತು

2017ರಲ್ಲಿ ಲಿ ಪೆನ್ ಅವರನ್ನು ಭಾರೀ ಅಂತರದಿಂದ ಸೋಲಿಸಿದ್ದ 46 ವರ್ಷದ ಮ್ಯಾಕ್ರಾನ್, ಈ ಬಾರಿ ಗೆಲ್ಲಲು ತೀವ್ರ ಬೆವರು ಹರಿಸಿದ್ದರು. 2017ರಲ್ಲಿ ಮ್ಯಾಕ್ರಾನ್ ಹೊಸ ಮುಖವಾಗಿದ್ದರು ಮತ್ತು ಉದಾರವಾದಿ ಪ್ರಗತಿಪರ ಎಂದು ಬಿಂಬಿಸಿಕೊಂಡಿದ್ದರು. ಹಾಗಾಗಿ ಅಲ್ಲಿನ ಎಡಪಕ್ಷಗಳು, ಅಲ್ಪ ಸಂಖ್ಯಾತರರು ಸಹ ಅವರನ್ನು ಬೆಂಬಲಿಸಿದ್ದರು. ಆದರೆ ನಂತರದ ಆಡಳಿತದಲ್ಲಿ ಅವರ ವ್ಯಾಪಾರೋದ್ಯಮ ಪರವಾದ ನೀತಿ ನಿರ್ಧಾರಗಳು ಎಡಪಂಥೀಯರಿಂದ ಟೀಕೆಗೆ ಗುರಿಯಾಗಿದ್ದವು. ಧಾರ್ಮಿಕ ಸಂಘಟನೆಗಳ ಮೇಲೆ ಕಠಿಣ ಕ್ರಮ ಜರುಗಿಸಿದ ಮ್ಯಾಕ್ರಾನ್ ತೀರ್ಮಾನಗಳು ಅಲ್ಪಸಂಖ್ಯಾತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದವು. ಆದರೆ ಈ ಎಲ್ಲದರ ನಡುವೆಯು ಅವರು ಗೆಲ್ಲಲು ಸಾಧ್ಯವಾಗಿದ್ದು ಎದುರಾಳಿ ಲಿ ಪೆನ್‌ರವರ ಉಗ್ರ ರಾಷ್ಟ್ರೀಯತೆ ಮತ್ತು ಬಲಪಂಥೀಯತೆಯಿಂದ.

ಯಾರಿದು ಮರೀನ್ ಲಿ ಪೆನ್

ವಲಸೆ ವಿರೋಧಿಯಾದ ಮತ್ತು ತೀವ್ರ ಬಲಪಂಥೀಯ ಸಿದ್ದಾಂತ ಪ್ರತಿಪಾದಿಸುವ 53 ವರ್ಷದ ಲಿ ಪೆನ್ 2017 ರಲ್ಲಿ ಹೀನಾಯವಾಗಿ ಸೋತಿದ್ದರು. ಅವರ ಅಪಾಯಕಾರಿ ರಾಜಕಾರಣ ಪ್ರೆಂಚ್ ಗಣರಾಜ್ಯಕ್ಕೆ ಮಾರಕ ಎಂದು ಹೇಳಲಾಗಿತ್ತು. ಆದರೆ ನಂತರ ಅವರು ಉಗ್ರ ರಾಷ್ಟ್ರೀಯತೆ ಮತ್ತು ವ್ಯವಸ್ಥೆಯ ವಿರೋಧಿ ರಾಜಕಾರಣದ ಮತ್ತೇರಿಸುವ ಮಿಶ್ರಪೇಯವನ್ನು ಮತದಾರರ ಮುಂದೆ ಇಟ್ಟು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ತಮ್ಮ ತೀವ್ರ ಬಲಪಂಥೀಯ ಬೆಂಬಲ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡು ಬೆಲೆ ಏರಿಕೆ, ಹಣದುಬ್ಬರ ಕುರಿತು ಅಸಮಾಧಾನ ಹೆಚ್ಚಿದ ಅಸಮಾಧಾನವನ್ನು ಬಳಸಿ ಮ್ಯಾಕ್ರಾನ್ ಆಡಳಿತದ ಕುರಿತು ಭ್ರಮನಿರಸನ ಹೊಂದಿದ ಮತದಾರರನ್ನೂ ತಮ್ಮತ್ತ ಸೆಳೆದುಕೊಂಡಿದ್ದಾರೆ. ಹಾಗಾಗಿ ಅವರು ಈ ಬಾರಿ ತೀವ್ರ ಪೈಪೋಟಿ ನೀಡಲು ಸಾಧ್ಯವಾಯಿತು ಎನ್ನಲಾಗಿದೆ.

ಮರೀನ್ ಲಿ ಪೆನ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಉಕ್ರೇನ್ ವಿರುದ್ಧದ ಯುದ್ಧವನ್ನು ಲಿ ಪೆನ್ ವಿರೋಧಿಸುವ ಜೊತೆಗೆ ರಷ್ಯಾದ ಮೇಲೆ ಅಮೆರಿಕ ಮತ್ತು ಐರೋಪ್ಯ ಒಕ್ಕೂಟ ಸಾರಿರುವ ನಿರ್ಬಂಧಗಳನ್ನೂ ಟೀಕಿಸಿದ್ದರು. ಈ ನಿರ್ಬಂಧಗಳು ಫ್ರೆಂಚ್ ಗ್ರಾಹಕರ ಹಿತಗಳನ್ನು ಬಾಧಿಸುತ್ತಿವೆ ಎಂದು ವಾದಿಸಿದ್ದರು. ನ್ಯಾಟೋ ಕಮಾಂಡ್ ನಿಂದ ಫ್ರೆಂಚ್ ಪಡೆಗಳನ್ನು ವಾಪಸು ಕರೆಸಿಕೊಳ್ಳಬೇಕೆಂಬುದು ಮಾತನಾಡಿದ್ದರು. ಇವೆಲ್ಲವೂ ಯೂರೋಪ್ ಒಕ್ಕೂಟಕ್ಕೆ ಭಾರೀ ತಲೆನೋವಾಗಿದ್ದವು. ಸದ್ಯದ ಅವರ ಸೋಲಿನಿಂದ ಯೂರೋಪಿಯನ್ ಒಕ್ಕೂಟ ನಿಟ್ಟುಸಿರಿ ಬಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...