Homeಅಂತರಾಷ್ಟ್ರೀಯಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ - ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ – ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

"ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ." - ಮ್ಯಾಕ್ರಾನ್

- Advertisement -
- Advertisement -

ತೀವ್ರ ಕುತೂಹಲ ಮತ್ತು ಜಿದ್ದಾಜಿದ್ದಿನಿಂದ ಕೂಡಿದ್ದ ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆಯಾಗಿದ್ದಾರೆ. ತೀವ್ರ ಬಲಪಂಥೀಯ ನಾಯಕಿಯಾದ ಮರೀನ್ ಲಿ ಪೆನ್ ಪೈಪೋಟಿ ನೀಡಿದರೂ ಸೋಲು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಇಮ್ಯಾನುಯೆಲ್ ಮ್ಯಾಕ್ರಾನ್ ಶೇ.58.6 ರಷ್ಟು ಮತಗಳನ್ನು ಪಡೆದರೆ ಕನ್ಸರ್ವೇಟಿವ್ ಪಾರ್ಟಿಯ ಲಿ ಪೆನ್ ಶೇ.41.4 ಮತಗಳಿಗೆ ತೃಪ್ತಿಪಟ್ಟುಕೊಂಡರು. ಕಳೆದ 20 ವರ್ಷದ ಫ್ರಾನ್ಸ್ ಇತಿಹಾಸದಲ್ಲಿ ಸತತ ಎರಡನೇ ಬಾರಿಗೆ ಆಯ್ಕೆಯಾದ ಕೀರ್ತಿಗೆ ಮ್ಯಾಕ್ರಾನ್ ಭಾಜನರಾಗಿದ್ದಾರೆ.

ಮತದಾರರಿಗೆ ಕೃತಜ್ಞತೆ ಅರ್ಪಿಸಿರುವ ಮ್ಯಾಕ್ರಾನ್, “ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಐಫೆಲ್ ಟವರ್‌ನ ಬುಡದಲ್ಲಿರುವ ಸೆಂಟ್ರಲ್ ಪ್ಯಾರಿಸ್‌ನ ಚಾಂಪ್ ಡಿ ಮಾರ್ಸ್‌ನಲ್ಲಿ ವಿಜಯ ಭಾಷಣ ಮಾಡಿದ ಅವರು, “ಹಿಂದಿನ ಆಡಳಿತದಂತೆಯೇ ಮುಂದುವರೆಯುತ್ತೇನೆ, ಇದು ಹೊಸ ಯುಗವಾಗಿದೆ” ಎಂದಿದ್ದಾರೆ.

ಮ್ಯಾಕ್ರಾನ್ ಕುರಿತು

2017ರಲ್ಲಿ ಲಿ ಪೆನ್ ಅವರನ್ನು ಭಾರೀ ಅಂತರದಿಂದ ಸೋಲಿಸಿದ್ದ 46 ವರ್ಷದ ಮ್ಯಾಕ್ರಾನ್, ಈ ಬಾರಿ ಗೆಲ್ಲಲು ತೀವ್ರ ಬೆವರು ಹರಿಸಿದ್ದರು. 2017ರಲ್ಲಿ ಮ್ಯಾಕ್ರಾನ್ ಹೊಸ ಮುಖವಾಗಿದ್ದರು ಮತ್ತು ಉದಾರವಾದಿ ಪ್ರಗತಿಪರ ಎಂದು ಬಿಂಬಿಸಿಕೊಂಡಿದ್ದರು. ಹಾಗಾಗಿ ಅಲ್ಲಿನ ಎಡಪಕ್ಷಗಳು, ಅಲ್ಪ ಸಂಖ್ಯಾತರರು ಸಹ ಅವರನ್ನು ಬೆಂಬಲಿಸಿದ್ದರು. ಆದರೆ ನಂತರದ ಆಡಳಿತದಲ್ಲಿ ಅವರ ವ್ಯಾಪಾರೋದ್ಯಮ ಪರವಾದ ನೀತಿ ನಿರ್ಧಾರಗಳು ಎಡಪಂಥೀಯರಿಂದ ಟೀಕೆಗೆ ಗುರಿಯಾಗಿದ್ದವು. ಧಾರ್ಮಿಕ ಸಂಘಟನೆಗಳ ಮೇಲೆ ಕಠಿಣ ಕ್ರಮ ಜರುಗಿಸಿದ ಮ್ಯಾಕ್ರಾನ್ ತೀರ್ಮಾನಗಳು ಅಲ್ಪಸಂಖ್ಯಾತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದವು. ಆದರೆ ಈ ಎಲ್ಲದರ ನಡುವೆಯು ಅವರು ಗೆಲ್ಲಲು ಸಾಧ್ಯವಾಗಿದ್ದು ಎದುರಾಳಿ ಲಿ ಪೆನ್‌ರವರ ಉಗ್ರ ರಾಷ್ಟ್ರೀಯತೆ ಮತ್ತು ಬಲಪಂಥೀಯತೆಯಿಂದ.

ಯಾರಿದು ಮರೀನ್ ಲಿ ಪೆನ್

ವಲಸೆ ವಿರೋಧಿಯಾದ ಮತ್ತು ತೀವ್ರ ಬಲಪಂಥೀಯ ಸಿದ್ದಾಂತ ಪ್ರತಿಪಾದಿಸುವ 53 ವರ್ಷದ ಲಿ ಪೆನ್ 2017 ರಲ್ಲಿ ಹೀನಾಯವಾಗಿ ಸೋತಿದ್ದರು. ಅವರ ಅಪಾಯಕಾರಿ ರಾಜಕಾರಣ ಪ್ರೆಂಚ್ ಗಣರಾಜ್ಯಕ್ಕೆ ಮಾರಕ ಎಂದು ಹೇಳಲಾಗಿತ್ತು. ಆದರೆ ನಂತರ ಅವರು ಉಗ್ರ ರಾಷ್ಟ್ರೀಯತೆ ಮತ್ತು ವ್ಯವಸ್ಥೆಯ ವಿರೋಧಿ ರಾಜಕಾರಣದ ಮತ್ತೇರಿಸುವ ಮಿಶ್ರಪೇಯವನ್ನು ಮತದಾರರ ಮುಂದೆ ಇಟ್ಟು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ತಮ್ಮ ತೀವ್ರ ಬಲಪಂಥೀಯ ಬೆಂಬಲ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡು ಬೆಲೆ ಏರಿಕೆ, ಹಣದುಬ್ಬರ ಕುರಿತು ಅಸಮಾಧಾನ ಹೆಚ್ಚಿದ ಅಸಮಾಧಾನವನ್ನು ಬಳಸಿ ಮ್ಯಾಕ್ರಾನ್ ಆಡಳಿತದ ಕುರಿತು ಭ್ರಮನಿರಸನ ಹೊಂದಿದ ಮತದಾರರನ್ನೂ ತಮ್ಮತ್ತ ಸೆಳೆದುಕೊಂಡಿದ್ದಾರೆ. ಹಾಗಾಗಿ ಅವರು ಈ ಬಾರಿ ತೀವ್ರ ಪೈಪೋಟಿ ನೀಡಲು ಸಾಧ್ಯವಾಯಿತು ಎನ್ನಲಾಗಿದೆ.

ಮರೀನ್ ಲಿ ಪೆನ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಉಕ್ರೇನ್ ವಿರುದ್ಧದ ಯುದ್ಧವನ್ನು ಲಿ ಪೆನ್ ವಿರೋಧಿಸುವ ಜೊತೆಗೆ ರಷ್ಯಾದ ಮೇಲೆ ಅಮೆರಿಕ ಮತ್ತು ಐರೋಪ್ಯ ಒಕ್ಕೂಟ ಸಾರಿರುವ ನಿರ್ಬಂಧಗಳನ್ನೂ ಟೀಕಿಸಿದ್ದರು. ಈ ನಿರ್ಬಂಧಗಳು ಫ್ರೆಂಚ್ ಗ್ರಾಹಕರ ಹಿತಗಳನ್ನು ಬಾಧಿಸುತ್ತಿವೆ ಎಂದು ವಾದಿಸಿದ್ದರು. ನ್ಯಾಟೋ ಕಮಾಂಡ್ ನಿಂದ ಫ್ರೆಂಚ್ ಪಡೆಗಳನ್ನು ವಾಪಸು ಕರೆಸಿಕೊಳ್ಳಬೇಕೆಂಬುದು ಮಾತನಾಡಿದ್ದರು. ಇವೆಲ್ಲವೂ ಯೂರೋಪ್ ಒಕ್ಕೂಟಕ್ಕೆ ಭಾರೀ ತಲೆನೋವಾಗಿದ್ದವು. ಸದ್ಯದ ಅವರ ಸೋಲಿನಿಂದ ಯೂರೋಪಿಯನ್ ಒಕ್ಕೂಟ ನಿಟ್ಟುಸಿರಿ ಬಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...