Homeಅಂತರಾಷ್ಟ್ರೀಯಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ - ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ – ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

"ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ." - ಮ್ಯಾಕ್ರಾನ್

- Advertisement -
- Advertisement -

ತೀವ್ರ ಕುತೂಹಲ ಮತ್ತು ಜಿದ್ದಾಜಿದ್ದಿನಿಂದ ಕೂಡಿದ್ದ ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆಯಾಗಿದ್ದಾರೆ. ತೀವ್ರ ಬಲಪಂಥೀಯ ನಾಯಕಿಯಾದ ಮರೀನ್ ಲಿ ಪೆನ್ ಪೈಪೋಟಿ ನೀಡಿದರೂ ಸೋಲು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಇಮ್ಯಾನುಯೆಲ್ ಮ್ಯಾಕ್ರಾನ್ ಶೇ.58.6 ರಷ್ಟು ಮತಗಳನ್ನು ಪಡೆದರೆ ಕನ್ಸರ್ವೇಟಿವ್ ಪಾರ್ಟಿಯ ಲಿ ಪೆನ್ ಶೇ.41.4 ಮತಗಳಿಗೆ ತೃಪ್ತಿಪಟ್ಟುಕೊಂಡರು. ಕಳೆದ 20 ವರ್ಷದ ಫ್ರಾನ್ಸ್ ಇತಿಹಾಸದಲ್ಲಿ ಸತತ ಎರಡನೇ ಬಾರಿಗೆ ಆಯ್ಕೆಯಾದ ಕೀರ್ತಿಗೆ ಮ್ಯಾಕ್ರಾನ್ ಭಾಜನರಾಗಿದ್ದಾರೆ.

ಮತದಾರರಿಗೆ ಕೃತಜ್ಞತೆ ಅರ್ಪಿಸಿರುವ ಮ್ಯಾಕ್ರಾನ್, “ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಐಫೆಲ್ ಟವರ್‌ನ ಬುಡದಲ್ಲಿರುವ ಸೆಂಟ್ರಲ್ ಪ್ಯಾರಿಸ್‌ನ ಚಾಂಪ್ ಡಿ ಮಾರ್ಸ್‌ನಲ್ಲಿ ವಿಜಯ ಭಾಷಣ ಮಾಡಿದ ಅವರು, “ಹಿಂದಿನ ಆಡಳಿತದಂತೆಯೇ ಮುಂದುವರೆಯುತ್ತೇನೆ, ಇದು ಹೊಸ ಯುಗವಾಗಿದೆ” ಎಂದಿದ್ದಾರೆ.

ಮ್ಯಾಕ್ರಾನ್ ಕುರಿತು

2017ರಲ್ಲಿ ಲಿ ಪೆನ್ ಅವರನ್ನು ಭಾರೀ ಅಂತರದಿಂದ ಸೋಲಿಸಿದ್ದ 46 ವರ್ಷದ ಮ್ಯಾಕ್ರಾನ್, ಈ ಬಾರಿ ಗೆಲ್ಲಲು ತೀವ್ರ ಬೆವರು ಹರಿಸಿದ್ದರು. 2017ರಲ್ಲಿ ಮ್ಯಾಕ್ರಾನ್ ಹೊಸ ಮುಖವಾಗಿದ್ದರು ಮತ್ತು ಉದಾರವಾದಿ ಪ್ರಗತಿಪರ ಎಂದು ಬಿಂಬಿಸಿಕೊಂಡಿದ್ದರು. ಹಾಗಾಗಿ ಅಲ್ಲಿನ ಎಡಪಕ್ಷಗಳು, ಅಲ್ಪ ಸಂಖ್ಯಾತರರು ಸಹ ಅವರನ್ನು ಬೆಂಬಲಿಸಿದ್ದರು. ಆದರೆ ನಂತರದ ಆಡಳಿತದಲ್ಲಿ ಅವರ ವ್ಯಾಪಾರೋದ್ಯಮ ಪರವಾದ ನೀತಿ ನಿರ್ಧಾರಗಳು ಎಡಪಂಥೀಯರಿಂದ ಟೀಕೆಗೆ ಗುರಿಯಾಗಿದ್ದವು. ಧಾರ್ಮಿಕ ಸಂಘಟನೆಗಳ ಮೇಲೆ ಕಠಿಣ ಕ್ರಮ ಜರುಗಿಸಿದ ಮ್ಯಾಕ್ರಾನ್ ತೀರ್ಮಾನಗಳು ಅಲ್ಪಸಂಖ್ಯಾತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದವು. ಆದರೆ ಈ ಎಲ್ಲದರ ನಡುವೆಯು ಅವರು ಗೆಲ್ಲಲು ಸಾಧ್ಯವಾಗಿದ್ದು ಎದುರಾಳಿ ಲಿ ಪೆನ್‌ರವರ ಉಗ್ರ ರಾಷ್ಟ್ರೀಯತೆ ಮತ್ತು ಬಲಪಂಥೀಯತೆಯಿಂದ.

ಯಾರಿದು ಮರೀನ್ ಲಿ ಪೆನ್

ವಲಸೆ ವಿರೋಧಿಯಾದ ಮತ್ತು ತೀವ್ರ ಬಲಪಂಥೀಯ ಸಿದ್ದಾಂತ ಪ್ರತಿಪಾದಿಸುವ 53 ವರ್ಷದ ಲಿ ಪೆನ್ 2017 ರಲ್ಲಿ ಹೀನಾಯವಾಗಿ ಸೋತಿದ್ದರು. ಅವರ ಅಪಾಯಕಾರಿ ರಾಜಕಾರಣ ಪ್ರೆಂಚ್ ಗಣರಾಜ್ಯಕ್ಕೆ ಮಾರಕ ಎಂದು ಹೇಳಲಾಗಿತ್ತು. ಆದರೆ ನಂತರ ಅವರು ಉಗ್ರ ರಾಷ್ಟ್ರೀಯತೆ ಮತ್ತು ವ್ಯವಸ್ಥೆಯ ವಿರೋಧಿ ರಾಜಕಾರಣದ ಮತ್ತೇರಿಸುವ ಮಿಶ್ರಪೇಯವನ್ನು ಮತದಾರರ ಮುಂದೆ ಇಟ್ಟು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ತಮ್ಮ ತೀವ್ರ ಬಲಪಂಥೀಯ ಬೆಂಬಲ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡು ಬೆಲೆ ಏರಿಕೆ, ಹಣದುಬ್ಬರ ಕುರಿತು ಅಸಮಾಧಾನ ಹೆಚ್ಚಿದ ಅಸಮಾಧಾನವನ್ನು ಬಳಸಿ ಮ್ಯಾಕ್ರಾನ್ ಆಡಳಿತದ ಕುರಿತು ಭ್ರಮನಿರಸನ ಹೊಂದಿದ ಮತದಾರರನ್ನೂ ತಮ್ಮತ್ತ ಸೆಳೆದುಕೊಂಡಿದ್ದಾರೆ. ಹಾಗಾಗಿ ಅವರು ಈ ಬಾರಿ ತೀವ್ರ ಪೈಪೋಟಿ ನೀಡಲು ಸಾಧ್ಯವಾಯಿತು ಎನ್ನಲಾಗಿದೆ.

ಮರೀನ್ ಲಿ ಪೆನ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಉಕ್ರೇನ್ ವಿರುದ್ಧದ ಯುದ್ಧವನ್ನು ಲಿ ಪೆನ್ ವಿರೋಧಿಸುವ ಜೊತೆಗೆ ರಷ್ಯಾದ ಮೇಲೆ ಅಮೆರಿಕ ಮತ್ತು ಐರೋಪ್ಯ ಒಕ್ಕೂಟ ಸಾರಿರುವ ನಿರ್ಬಂಧಗಳನ್ನೂ ಟೀಕಿಸಿದ್ದರು. ಈ ನಿರ್ಬಂಧಗಳು ಫ್ರೆಂಚ್ ಗ್ರಾಹಕರ ಹಿತಗಳನ್ನು ಬಾಧಿಸುತ್ತಿವೆ ಎಂದು ವಾದಿಸಿದ್ದರು. ನ್ಯಾಟೋ ಕಮಾಂಡ್ ನಿಂದ ಫ್ರೆಂಚ್ ಪಡೆಗಳನ್ನು ವಾಪಸು ಕರೆಸಿಕೊಳ್ಳಬೇಕೆಂಬುದು ಮಾತನಾಡಿದ್ದರು. ಇವೆಲ್ಲವೂ ಯೂರೋಪ್ ಒಕ್ಕೂಟಕ್ಕೆ ಭಾರೀ ತಲೆನೋವಾಗಿದ್ದವು. ಸದ್ಯದ ಅವರ ಸೋಲಿನಿಂದ ಯೂರೋಪಿಯನ್ ಒಕ್ಕೂಟ ನಿಟ್ಟುಸಿರಿ ಬಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...