Homeಅಂತರಾಷ್ಟ್ರೀಯಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ - ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ – ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

"ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ." - ಮ್ಯಾಕ್ರಾನ್

- Advertisement -
- Advertisement -

ತೀವ್ರ ಕುತೂಹಲ ಮತ್ತು ಜಿದ್ದಾಜಿದ್ದಿನಿಂದ ಕೂಡಿದ್ದ ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆಯಾಗಿದ್ದಾರೆ. ತೀವ್ರ ಬಲಪಂಥೀಯ ನಾಯಕಿಯಾದ ಮರೀನ್ ಲಿ ಪೆನ್ ಪೈಪೋಟಿ ನೀಡಿದರೂ ಸೋಲು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಇಮ್ಯಾನುಯೆಲ್ ಮ್ಯಾಕ್ರಾನ್ ಶೇ.58.6 ರಷ್ಟು ಮತಗಳನ್ನು ಪಡೆದರೆ ಕನ್ಸರ್ವೇಟಿವ್ ಪಾರ್ಟಿಯ ಲಿ ಪೆನ್ ಶೇ.41.4 ಮತಗಳಿಗೆ ತೃಪ್ತಿಪಟ್ಟುಕೊಂಡರು. ಕಳೆದ 20 ವರ್ಷದ ಫ್ರಾನ್ಸ್ ಇತಿಹಾಸದಲ್ಲಿ ಸತತ ಎರಡನೇ ಬಾರಿಗೆ ಆಯ್ಕೆಯಾದ ಕೀರ್ತಿಗೆ ಮ್ಯಾಕ್ರಾನ್ ಭಾಜನರಾಗಿದ್ದಾರೆ.

ಮತದಾರರಿಗೆ ಕೃತಜ್ಞತೆ ಅರ್ಪಿಸಿರುವ ಮ್ಯಾಕ್ರಾನ್, “ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಐಫೆಲ್ ಟವರ್‌ನ ಬುಡದಲ್ಲಿರುವ ಸೆಂಟ್ರಲ್ ಪ್ಯಾರಿಸ್‌ನ ಚಾಂಪ್ ಡಿ ಮಾರ್ಸ್‌ನಲ್ಲಿ ವಿಜಯ ಭಾಷಣ ಮಾಡಿದ ಅವರು, “ಹಿಂದಿನ ಆಡಳಿತದಂತೆಯೇ ಮುಂದುವರೆಯುತ್ತೇನೆ, ಇದು ಹೊಸ ಯುಗವಾಗಿದೆ” ಎಂದಿದ್ದಾರೆ.

ಮ್ಯಾಕ್ರಾನ್ ಕುರಿತು

2017ರಲ್ಲಿ ಲಿ ಪೆನ್ ಅವರನ್ನು ಭಾರೀ ಅಂತರದಿಂದ ಸೋಲಿಸಿದ್ದ 46 ವರ್ಷದ ಮ್ಯಾಕ್ರಾನ್, ಈ ಬಾರಿ ಗೆಲ್ಲಲು ತೀವ್ರ ಬೆವರು ಹರಿಸಿದ್ದರು. 2017ರಲ್ಲಿ ಮ್ಯಾಕ್ರಾನ್ ಹೊಸ ಮುಖವಾಗಿದ್ದರು ಮತ್ತು ಉದಾರವಾದಿ ಪ್ರಗತಿಪರ ಎಂದು ಬಿಂಬಿಸಿಕೊಂಡಿದ್ದರು. ಹಾಗಾಗಿ ಅಲ್ಲಿನ ಎಡಪಕ್ಷಗಳು, ಅಲ್ಪ ಸಂಖ್ಯಾತರರು ಸಹ ಅವರನ್ನು ಬೆಂಬಲಿಸಿದ್ದರು. ಆದರೆ ನಂತರದ ಆಡಳಿತದಲ್ಲಿ ಅವರ ವ್ಯಾಪಾರೋದ್ಯಮ ಪರವಾದ ನೀತಿ ನಿರ್ಧಾರಗಳು ಎಡಪಂಥೀಯರಿಂದ ಟೀಕೆಗೆ ಗುರಿಯಾಗಿದ್ದವು. ಧಾರ್ಮಿಕ ಸಂಘಟನೆಗಳ ಮೇಲೆ ಕಠಿಣ ಕ್ರಮ ಜರುಗಿಸಿದ ಮ್ಯಾಕ್ರಾನ್ ತೀರ್ಮಾನಗಳು ಅಲ್ಪಸಂಖ್ಯಾತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದವು. ಆದರೆ ಈ ಎಲ್ಲದರ ನಡುವೆಯು ಅವರು ಗೆಲ್ಲಲು ಸಾಧ್ಯವಾಗಿದ್ದು ಎದುರಾಳಿ ಲಿ ಪೆನ್‌ರವರ ಉಗ್ರ ರಾಷ್ಟ್ರೀಯತೆ ಮತ್ತು ಬಲಪಂಥೀಯತೆಯಿಂದ.

ಯಾರಿದು ಮರೀನ್ ಲಿ ಪೆನ್

ವಲಸೆ ವಿರೋಧಿಯಾದ ಮತ್ತು ತೀವ್ರ ಬಲಪಂಥೀಯ ಸಿದ್ದಾಂತ ಪ್ರತಿಪಾದಿಸುವ 53 ವರ್ಷದ ಲಿ ಪೆನ್ 2017 ರಲ್ಲಿ ಹೀನಾಯವಾಗಿ ಸೋತಿದ್ದರು. ಅವರ ಅಪಾಯಕಾರಿ ರಾಜಕಾರಣ ಪ್ರೆಂಚ್ ಗಣರಾಜ್ಯಕ್ಕೆ ಮಾರಕ ಎಂದು ಹೇಳಲಾಗಿತ್ತು. ಆದರೆ ನಂತರ ಅವರು ಉಗ್ರ ರಾಷ್ಟ್ರೀಯತೆ ಮತ್ತು ವ್ಯವಸ್ಥೆಯ ವಿರೋಧಿ ರಾಜಕಾರಣದ ಮತ್ತೇರಿಸುವ ಮಿಶ್ರಪೇಯವನ್ನು ಮತದಾರರ ಮುಂದೆ ಇಟ್ಟು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ತಮ್ಮ ತೀವ್ರ ಬಲಪಂಥೀಯ ಬೆಂಬಲ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡು ಬೆಲೆ ಏರಿಕೆ, ಹಣದುಬ್ಬರ ಕುರಿತು ಅಸಮಾಧಾನ ಹೆಚ್ಚಿದ ಅಸಮಾಧಾನವನ್ನು ಬಳಸಿ ಮ್ಯಾಕ್ರಾನ್ ಆಡಳಿತದ ಕುರಿತು ಭ್ರಮನಿರಸನ ಹೊಂದಿದ ಮತದಾರರನ್ನೂ ತಮ್ಮತ್ತ ಸೆಳೆದುಕೊಂಡಿದ್ದಾರೆ. ಹಾಗಾಗಿ ಅವರು ಈ ಬಾರಿ ತೀವ್ರ ಪೈಪೋಟಿ ನೀಡಲು ಸಾಧ್ಯವಾಯಿತು ಎನ್ನಲಾಗಿದೆ.

ಮರೀನ್ ಲಿ ಪೆನ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಉಕ್ರೇನ್ ವಿರುದ್ಧದ ಯುದ್ಧವನ್ನು ಲಿ ಪೆನ್ ವಿರೋಧಿಸುವ ಜೊತೆಗೆ ರಷ್ಯಾದ ಮೇಲೆ ಅಮೆರಿಕ ಮತ್ತು ಐರೋಪ್ಯ ಒಕ್ಕೂಟ ಸಾರಿರುವ ನಿರ್ಬಂಧಗಳನ್ನೂ ಟೀಕಿಸಿದ್ದರು. ಈ ನಿರ್ಬಂಧಗಳು ಫ್ರೆಂಚ್ ಗ್ರಾಹಕರ ಹಿತಗಳನ್ನು ಬಾಧಿಸುತ್ತಿವೆ ಎಂದು ವಾದಿಸಿದ್ದರು. ನ್ಯಾಟೋ ಕಮಾಂಡ್ ನಿಂದ ಫ್ರೆಂಚ್ ಪಡೆಗಳನ್ನು ವಾಪಸು ಕರೆಸಿಕೊಳ್ಳಬೇಕೆಂಬುದು ಮಾತನಾಡಿದ್ದರು. ಇವೆಲ್ಲವೂ ಯೂರೋಪ್ ಒಕ್ಕೂಟಕ್ಕೆ ಭಾರೀ ತಲೆನೋವಾಗಿದ್ದವು. ಸದ್ಯದ ಅವರ ಸೋಲಿನಿಂದ ಯೂರೋಪಿಯನ್ ಒಕ್ಕೂಟ ನಿಟ್ಟುಸಿರಿ ಬಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...