Homeಅಂತರಾಷ್ಟ್ರೀಯಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ - ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ – ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

"ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ." - ಮ್ಯಾಕ್ರಾನ್

- Advertisement -
- Advertisement -

ತೀವ್ರ ಕುತೂಹಲ ಮತ್ತು ಜಿದ್ದಾಜಿದ್ದಿನಿಂದ ಕೂಡಿದ್ದ ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆಯಾಗಿದ್ದಾರೆ. ತೀವ್ರ ಬಲಪಂಥೀಯ ನಾಯಕಿಯಾದ ಮರೀನ್ ಲಿ ಪೆನ್ ಪೈಪೋಟಿ ನೀಡಿದರೂ ಸೋಲು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಇಮ್ಯಾನುಯೆಲ್ ಮ್ಯಾಕ್ರಾನ್ ಶೇ.58.6 ರಷ್ಟು ಮತಗಳನ್ನು ಪಡೆದರೆ ಕನ್ಸರ್ವೇಟಿವ್ ಪಾರ್ಟಿಯ ಲಿ ಪೆನ್ ಶೇ.41.4 ಮತಗಳಿಗೆ ತೃಪ್ತಿಪಟ್ಟುಕೊಂಡರು. ಕಳೆದ 20 ವರ್ಷದ ಫ್ರಾನ್ಸ್ ಇತಿಹಾಸದಲ್ಲಿ ಸತತ ಎರಡನೇ ಬಾರಿಗೆ ಆಯ್ಕೆಯಾದ ಕೀರ್ತಿಗೆ ಮ್ಯಾಕ್ರಾನ್ ಭಾಜನರಾಗಿದ್ದಾರೆ.

ಮತದಾರರಿಗೆ ಕೃತಜ್ಞತೆ ಅರ್ಪಿಸಿರುವ ಮ್ಯಾಕ್ರಾನ್, “ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಐಫೆಲ್ ಟವರ್‌ನ ಬುಡದಲ್ಲಿರುವ ಸೆಂಟ್ರಲ್ ಪ್ಯಾರಿಸ್‌ನ ಚಾಂಪ್ ಡಿ ಮಾರ್ಸ್‌ನಲ್ಲಿ ವಿಜಯ ಭಾಷಣ ಮಾಡಿದ ಅವರು, “ಹಿಂದಿನ ಆಡಳಿತದಂತೆಯೇ ಮುಂದುವರೆಯುತ್ತೇನೆ, ಇದು ಹೊಸ ಯುಗವಾಗಿದೆ” ಎಂದಿದ್ದಾರೆ.

ಮ್ಯಾಕ್ರಾನ್ ಕುರಿತು

2017ರಲ್ಲಿ ಲಿ ಪೆನ್ ಅವರನ್ನು ಭಾರೀ ಅಂತರದಿಂದ ಸೋಲಿಸಿದ್ದ 46 ವರ್ಷದ ಮ್ಯಾಕ್ರಾನ್, ಈ ಬಾರಿ ಗೆಲ್ಲಲು ತೀವ್ರ ಬೆವರು ಹರಿಸಿದ್ದರು. 2017ರಲ್ಲಿ ಮ್ಯಾಕ್ರಾನ್ ಹೊಸ ಮುಖವಾಗಿದ್ದರು ಮತ್ತು ಉದಾರವಾದಿ ಪ್ರಗತಿಪರ ಎಂದು ಬಿಂಬಿಸಿಕೊಂಡಿದ್ದರು. ಹಾಗಾಗಿ ಅಲ್ಲಿನ ಎಡಪಕ್ಷಗಳು, ಅಲ್ಪ ಸಂಖ್ಯಾತರರು ಸಹ ಅವರನ್ನು ಬೆಂಬಲಿಸಿದ್ದರು. ಆದರೆ ನಂತರದ ಆಡಳಿತದಲ್ಲಿ ಅವರ ವ್ಯಾಪಾರೋದ್ಯಮ ಪರವಾದ ನೀತಿ ನಿರ್ಧಾರಗಳು ಎಡಪಂಥೀಯರಿಂದ ಟೀಕೆಗೆ ಗುರಿಯಾಗಿದ್ದವು. ಧಾರ್ಮಿಕ ಸಂಘಟನೆಗಳ ಮೇಲೆ ಕಠಿಣ ಕ್ರಮ ಜರುಗಿಸಿದ ಮ್ಯಾಕ್ರಾನ್ ತೀರ್ಮಾನಗಳು ಅಲ್ಪಸಂಖ್ಯಾತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದವು. ಆದರೆ ಈ ಎಲ್ಲದರ ನಡುವೆಯು ಅವರು ಗೆಲ್ಲಲು ಸಾಧ್ಯವಾಗಿದ್ದು ಎದುರಾಳಿ ಲಿ ಪೆನ್‌ರವರ ಉಗ್ರ ರಾಷ್ಟ್ರೀಯತೆ ಮತ್ತು ಬಲಪಂಥೀಯತೆಯಿಂದ.

ಯಾರಿದು ಮರೀನ್ ಲಿ ಪೆನ್

ವಲಸೆ ವಿರೋಧಿಯಾದ ಮತ್ತು ತೀವ್ರ ಬಲಪಂಥೀಯ ಸಿದ್ದಾಂತ ಪ್ರತಿಪಾದಿಸುವ 53 ವರ್ಷದ ಲಿ ಪೆನ್ 2017 ರಲ್ಲಿ ಹೀನಾಯವಾಗಿ ಸೋತಿದ್ದರು. ಅವರ ಅಪಾಯಕಾರಿ ರಾಜಕಾರಣ ಪ್ರೆಂಚ್ ಗಣರಾಜ್ಯಕ್ಕೆ ಮಾರಕ ಎಂದು ಹೇಳಲಾಗಿತ್ತು. ಆದರೆ ನಂತರ ಅವರು ಉಗ್ರ ರಾಷ್ಟ್ರೀಯತೆ ಮತ್ತು ವ್ಯವಸ್ಥೆಯ ವಿರೋಧಿ ರಾಜಕಾರಣದ ಮತ್ತೇರಿಸುವ ಮಿಶ್ರಪೇಯವನ್ನು ಮತದಾರರ ಮುಂದೆ ಇಟ್ಟು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ತಮ್ಮ ತೀವ್ರ ಬಲಪಂಥೀಯ ಬೆಂಬಲ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡು ಬೆಲೆ ಏರಿಕೆ, ಹಣದುಬ್ಬರ ಕುರಿತು ಅಸಮಾಧಾನ ಹೆಚ್ಚಿದ ಅಸಮಾಧಾನವನ್ನು ಬಳಸಿ ಮ್ಯಾಕ್ರಾನ್ ಆಡಳಿತದ ಕುರಿತು ಭ್ರಮನಿರಸನ ಹೊಂದಿದ ಮತದಾರರನ್ನೂ ತಮ್ಮತ್ತ ಸೆಳೆದುಕೊಂಡಿದ್ದಾರೆ. ಹಾಗಾಗಿ ಅವರು ಈ ಬಾರಿ ತೀವ್ರ ಪೈಪೋಟಿ ನೀಡಲು ಸಾಧ್ಯವಾಯಿತು ಎನ್ನಲಾಗಿದೆ.

ಮರೀನ್ ಲಿ ಪೆನ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಉಕ್ರೇನ್ ವಿರುದ್ಧದ ಯುದ್ಧವನ್ನು ಲಿ ಪೆನ್ ವಿರೋಧಿಸುವ ಜೊತೆಗೆ ರಷ್ಯಾದ ಮೇಲೆ ಅಮೆರಿಕ ಮತ್ತು ಐರೋಪ್ಯ ಒಕ್ಕೂಟ ಸಾರಿರುವ ನಿರ್ಬಂಧಗಳನ್ನೂ ಟೀಕಿಸಿದ್ದರು. ಈ ನಿರ್ಬಂಧಗಳು ಫ್ರೆಂಚ್ ಗ್ರಾಹಕರ ಹಿತಗಳನ್ನು ಬಾಧಿಸುತ್ತಿವೆ ಎಂದು ವಾದಿಸಿದ್ದರು. ನ್ಯಾಟೋ ಕಮಾಂಡ್ ನಿಂದ ಫ್ರೆಂಚ್ ಪಡೆಗಳನ್ನು ವಾಪಸು ಕರೆಸಿಕೊಳ್ಳಬೇಕೆಂಬುದು ಮಾತನಾಡಿದ್ದರು. ಇವೆಲ್ಲವೂ ಯೂರೋಪ್ ಒಕ್ಕೂಟಕ್ಕೆ ಭಾರೀ ತಲೆನೋವಾಗಿದ್ದವು. ಸದ್ಯದ ಅವರ ಸೋಲಿನಿಂದ ಯೂರೋಪಿಯನ್ ಒಕ್ಕೂಟ ನಿಟ್ಟುಸಿರಿ ಬಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...