Homeಮುಖಪುಟಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರಿನವರಾದ ಇವರು ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ನ ಹೈ ಎನರ್ಜಿ ಫಿಸಿಕ್ಸ್‌ ಸೆಂಟರ್‌ನಲ್ಲಿ ಬೋಧಿಸುವ ಭೌತವಿಜ್ಞಾನಿ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಫ್ರಾನ್ಸ್ ಸರ್ಕಾರ ಅತ್ಯುನ್ನತ ಗೌರವವಾದ ‘ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಸಂದಿದೆ.

ಬೆಂಗಳೂರಿನವರಾದ ಪ್ರೊ. ರೋಹಿಣಿ ಗೋಡ್ಬೋಲೆ ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ. ಪ್ರಸ್ತುತ ಅವರು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಬೋಧಿಸುತ್ತಿದ್ದಾರೆ. ಸ್ಟೋನಿ ಬ್ರೂಕ್‌ನಲ್ಲಿರುವ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್‌ನಿಂದ ಸೈದ್ಧಾಂತಿಕ ಕಣ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಅದಕ್ಕೂ ಮೊದಲು ಅವರು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಈ ಬಗ್ಗೆ ಐಐಎಸ್‌ಸಿಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಲಾಗಿದೆ. ಟ್ವೀಟ್‌ನಲ್ಲಿ, ”ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿಯಾದ ’ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಪಡೆದಿರುವುದಕ್ಕೆ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಅಭಿನಂದನೆಗಳು! ಫ್ರಾನ್ಸ್ ಮತ್ತು ಭಾರತದ ಸಹಯೋಗಗಳಲ್ಲಿ ನಡೆದ ’ವಿಜ್ಞಾನದಲ್ಲಿ ಮಹಿಳೆಯರನ್ನು ಉತ್ತೇಜಿಸುವ ಕಾರ್ಯಗಳಲ್ಲಿ’ ನೀಡಿದ ಕೊಡುಗೆಗಳಿಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ” ಎಂದು ಬರೆದಿದೆ.

ಪ್ರೊಫೆಸರ್‌ ರೋಹಿಣಿ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರತಿಪಾದಿಸುವರಾಗಿದ್ದಾರೆ. ಮಹಿಳೆಯರು ಉನ್ನತ ಶಿಕ್ಷಣವನ್ನು ಆರಿಸಿಕೊಳ್ಳುತ್ತಿದ್ದರೂ ವಿಜ್ಞಾನ ಮತ್ತು ಸಂಶೋಧನಾ ಪಿಎಚ್‌ಡಿ ಕೋರ್ಸ್‌ಗಳಲ್ಲಿ ಇನ್ನೂ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

“ವಿಜ್ಞಾನ ಸಂಶೋಧನೆ ವಿಷಯದಲ್ಲಿ ಕಾಲೇಜಿನಿಂದ ವಿಶ್ವವಿದ್ಯಾಲಯಕ್ಕೆ ಬರುವ ಮಹಿಳೆಯರಲ್ಲಿ 10% ಜನ ಹಿಂದೆ ಸರಿಯುತ್ತಾರೆ. ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿಗೆ 5% ಮಹಿಳೆಯರು ಹಿಂದೆ ಸರಿಯುತ್ತಾರೆ ಮತ್ತು ಪಿಎಚ್‌ಡಿಯಿಂದ ಯಶಸ್ವಿ ವೈಜ್ಞಾನಿಕ ವೃತ್ತಿಜೀವನಕ್ಕೆ 15% ಮಹಿಳೆಯರು ಹಿಂದೆ ಸರಿಯುತ್ತಾರೆ” ಎಂದು ರೋಹಿಣಿ ಅಭಿಪ್ರಾಯಪಡುತ್ತಾರೆ. ವೈಜ್ಞಾನಿಕ ಸಂಶೋಧನೆಯಲ್ಲಿ ಹೆಚ್ಚಿನ ಮಹಿಳೆಯರು ಭಾಗವಹಿಸುವಂತಾಗಲು ಸಾಮಾಜಿಕ ಬದಲಾವಣೆ ಸೇರಿದಂತೆ ನೀತಿ ನಿರೂಪಣೆಗಳಲ್ಲಿಯೂ ಬದಲಾವಣೆಗಳನ್ನೂ ಮಾಡುವ ಅವಶ್ಯಕತೆಯಿದೆ ಎಂದು ಅವರು ಹೇಳುತ್ತಾರೆ.

1982 ರಲ್ಲಿ ಬಾಂಬೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿರುವ ರೋಹಿಣಿ, ನಂತರ 1995 ರಲ್ಲಿ ಐಐಎಸ್ಸಿಯಲ್ಲಿ ಸಹಾಯಕ ಪ್ರಾಧ್ಯಾಪಕರಾದರು. ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ತಮ್ಮ ವೃತ್ತಿಜೀವನದಲ್ಲಿ ವಿವಿಧ ವೈಜ್ಞಾನಿಕ ವಿಷಯಗಳ ಬಗ್ಗೆ 100 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ. ಸಿಇಆರ್ಎನ್‌ನ ಯುರೋಪಿಯನ್ ಆರ್ಗನೈಸೇಶನ್ ಫಾರ್ ನ್ಯೂಕ್ಲಿಯರ್ ರಿಸರ್ಚ್‌ನಲ್ಲಿ ಅವರು ನೀಡಿದ ಕೊಡುಗೆ ಅವರನ್ನು ಹೆಚ್ಚು ಜನಪ್ರಿಯರನ್ನಾಗಿಸಿದೆ.


ಇದನ್ನೂ ಓದಿ: ಇಂದಿರಾ ಗಾಂಧಿ ಜನ್ಮದಿನ: ಮಹಿಳೆಯರಿಗಾಗಿ ಉಚಿತ ಮೊಬೈಲ್ ಕ್ಲಿನಿಕ್ ಆರಂಭಿಸಿದ ಚತ್ತೀಸ್‌ಗಢ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...