Homeಮುಖಪುಟಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರಿನವರಾದ ಇವರು ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ನ ಹೈ ಎನರ್ಜಿ ಫಿಸಿಕ್ಸ್‌ ಸೆಂಟರ್‌ನಲ್ಲಿ ಬೋಧಿಸುವ ಭೌತವಿಜ್ಞಾನಿ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಫ್ರಾನ್ಸ್ ಸರ್ಕಾರ ಅತ್ಯುನ್ನತ ಗೌರವವಾದ ‘ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಸಂದಿದೆ.

ಬೆಂಗಳೂರಿನವರಾದ ಪ್ರೊ. ರೋಹಿಣಿ ಗೋಡ್ಬೋಲೆ ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ. ಪ್ರಸ್ತುತ ಅವರು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಬೋಧಿಸುತ್ತಿದ್ದಾರೆ. ಸ್ಟೋನಿ ಬ್ರೂಕ್‌ನಲ್ಲಿರುವ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್‌ನಿಂದ ಸೈದ್ಧಾಂತಿಕ ಕಣ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಅದಕ್ಕೂ ಮೊದಲು ಅವರು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಈ ಬಗ್ಗೆ ಐಐಎಸ್‌ಸಿಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಲಾಗಿದೆ. ಟ್ವೀಟ್‌ನಲ್ಲಿ, ”ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿಯಾದ ’ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಪಡೆದಿರುವುದಕ್ಕೆ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಅಭಿನಂದನೆಗಳು! ಫ್ರಾನ್ಸ್ ಮತ್ತು ಭಾರತದ ಸಹಯೋಗಗಳಲ್ಲಿ ನಡೆದ ’ವಿಜ್ಞಾನದಲ್ಲಿ ಮಹಿಳೆಯರನ್ನು ಉತ್ತೇಜಿಸುವ ಕಾರ್ಯಗಳಲ್ಲಿ’ ನೀಡಿದ ಕೊಡುಗೆಗಳಿಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ” ಎಂದು ಬರೆದಿದೆ.

ಪ್ರೊಫೆಸರ್‌ ರೋಹಿಣಿ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರತಿಪಾದಿಸುವರಾಗಿದ್ದಾರೆ. ಮಹಿಳೆಯರು ಉನ್ನತ ಶಿಕ್ಷಣವನ್ನು ಆರಿಸಿಕೊಳ್ಳುತ್ತಿದ್ದರೂ ವಿಜ್ಞಾನ ಮತ್ತು ಸಂಶೋಧನಾ ಪಿಎಚ್‌ಡಿ ಕೋರ್ಸ್‌ಗಳಲ್ಲಿ ಇನ್ನೂ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

“ವಿಜ್ಞಾನ ಸಂಶೋಧನೆ ವಿಷಯದಲ್ಲಿ ಕಾಲೇಜಿನಿಂದ ವಿಶ್ವವಿದ್ಯಾಲಯಕ್ಕೆ ಬರುವ ಮಹಿಳೆಯರಲ್ಲಿ 10% ಜನ ಹಿಂದೆ ಸರಿಯುತ್ತಾರೆ. ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿಗೆ 5% ಮಹಿಳೆಯರು ಹಿಂದೆ ಸರಿಯುತ್ತಾರೆ ಮತ್ತು ಪಿಎಚ್‌ಡಿಯಿಂದ ಯಶಸ್ವಿ ವೈಜ್ಞಾನಿಕ ವೃತ್ತಿಜೀವನಕ್ಕೆ 15% ಮಹಿಳೆಯರು ಹಿಂದೆ ಸರಿಯುತ್ತಾರೆ” ಎಂದು ರೋಹಿಣಿ ಅಭಿಪ್ರಾಯಪಡುತ್ತಾರೆ. ವೈಜ್ಞಾನಿಕ ಸಂಶೋಧನೆಯಲ್ಲಿ ಹೆಚ್ಚಿನ ಮಹಿಳೆಯರು ಭಾಗವಹಿಸುವಂತಾಗಲು ಸಾಮಾಜಿಕ ಬದಲಾವಣೆ ಸೇರಿದಂತೆ ನೀತಿ ನಿರೂಪಣೆಗಳಲ್ಲಿಯೂ ಬದಲಾವಣೆಗಳನ್ನೂ ಮಾಡುವ ಅವಶ್ಯಕತೆಯಿದೆ ಎಂದು ಅವರು ಹೇಳುತ್ತಾರೆ.

1982 ರಲ್ಲಿ ಬಾಂಬೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿರುವ ರೋಹಿಣಿ, ನಂತರ 1995 ರಲ್ಲಿ ಐಐಎಸ್ಸಿಯಲ್ಲಿ ಸಹಾಯಕ ಪ್ರಾಧ್ಯಾಪಕರಾದರು. ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ತಮ್ಮ ವೃತ್ತಿಜೀವನದಲ್ಲಿ ವಿವಿಧ ವೈಜ್ಞಾನಿಕ ವಿಷಯಗಳ ಬಗ್ಗೆ 100 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ. ಸಿಇಆರ್ಎನ್‌ನ ಯುರೋಪಿಯನ್ ಆರ್ಗನೈಸೇಶನ್ ಫಾರ್ ನ್ಯೂಕ್ಲಿಯರ್ ರಿಸರ್ಚ್‌ನಲ್ಲಿ ಅವರು ನೀಡಿದ ಕೊಡುಗೆ ಅವರನ್ನು ಹೆಚ್ಚು ಜನಪ್ರಿಯರನ್ನಾಗಿಸಿದೆ.


ಇದನ್ನೂ ಓದಿ: ಇಂದಿರಾ ಗಾಂಧಿ ಜನ್ಮದಿನ: ಮಹಿಳೆಯರಿಗಾಗಿ ಉಚಿತ ಮೊಬೈಲ್ ಕ್ಲಿನಿಕ್ ಆರಂಭಿಸಿದ ಚತ್ತೀಸ್‌ಗಢ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...