Homeಮುಖಪುಟಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರಿನವರಾದ ಇವರು ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ನ ಹೈ ಎನರ್ಜಿ ಫಿಸಿಕ್ಸ್‌ ಸೆಂಟರ್‌ನಲ್ಲಿ ಬೋಧಿಸುವ ಭೌತವಿಜ್ಞಾನಿ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಫ್ರಾನ್ಸ್ ಸರ್ಕಾರ ಅತ್ಯುನ್ನತ ಗೌರವವಾದ ‘ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಸಂದಿದೆ.

ಬೆಂಗಳೂರಿನವರಾದ ಪ್ರೊ. ರೋಹಿಣಿ ಗೋಡ್ಬೋಲೆ ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ. ಪ್ರಸ್ತುತ ಅವರು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಬೋಧಿಸುತ್ತಿದ್ದಾರೆ. ಸ್ಟೋನಿ ಬ್ರೂಕ್‌ನಲ್ಲಿರುವ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್‌ನಿಂದ ಸೈದ್ಧಾಂತಿಕ ಕಣ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಅದಕ್ಕೂ ಮೊದಲು ಅವರು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಈ ಬಗ್ಗೆ ಐಐಎಸ್‌ಸಿಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಲಾಗಿದೆ. ಟ್ವೀಟ್‌ನಲ್ಲಿ, ”ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿಯಾದ ’ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಪಡೆದಿರುವುದಕ್ಕೆ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಅಭಿನಂದನೆಗಳು! ಫ್ರಾನ್ಸ್ ಮತ್ತು ಭಾರತದ ಸಹಯೋಗಗಳಲ್ಲಿ ನಡೆದ ’ವಿಜ್ಞಾನದಲ್ಲಿ ಮಹಿಳೆಯರನ್ನು ಉತ್ತೇಜಿಸುವ ಕಾರ್ಯಗಳಲ್ಲಿ’ ನೀಡಿದ ಕೊಡುಗೆಗಳಿಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ” ಎಂದು ಬರೆದಿದೆ.

ಪ್ರೊಫೆಸರ್‌ ರೋಹಿಣಿ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರತಿಪಾದಿಸುವರಾಗಿದ್ದಾರೆ. ಮಹಿಳೆಯರು ಉನ್ನತ ಶಿಕ್ಷಣವನ್ನು ಆರಿಸಿಕೊಳ್ಳುತ್ತಿದ್ದರೂ ವಿಜ್ಞಾನ ಮತ್ತು ಸಂಶೋಧನಾ ಪಿಎಚ್‌ಡಿ ಕೋರ್ಸ್‌ಗಳಲ್ಲಿ ಇನ್ನೂ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

“ವಿಜ್ಞಾನ ಸಂಶೋಧನೆ ವಿಷಯದಲ್ಲಿ ಕಾಲೇಜಿನಿಂದ ವಿಶ್ವವಿದ್ಯಾಲಯಕ್ಕೆ ಬರುವ ಮಹಿಳೆಯರಲ್ಲಿ 10% ಜನ ಹಿಂದೆ ಸರಿಯುತ್ತಾರೆ. ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿಗೆ 5% ಮಹಿಳೆಯರು ಹಿಂದೆ ಸರಿಯುತ್ತಾರೆ ಮತ್ತು ಪಿಎಚ್‌ಡಿಯಿಂದ ಯಶಸ್ವಿ ವೈಜ್ಞಾನಿಕ ವೃತ್ತಿಜೀವನಕ್ಕೆ 15% ಮಹಿಳೆಯರು ಹಿಂದೆ ಸರಿಯುತ್ತಾರೆ” ಎಂದು ರೋಹಿಣಿ ಅಭಿಪ್ರಾಯಪಡುತ್ತಾರೆ. ವೈಜ್ಞಾನಿಕ ಸಂಶೋಧನೆಯಲ್ಲಿ ಹೆಚ್ಚಿನ ಮಹಿಳೆಯರು ಭಾಗವಹಿಸುವಂತಾಗಲು ಸಾಮಾಜಿಕ ಬದಲಾವಣೆ ಸೇರಿದಂತೆ ನೀತಿ ನಿರೂಪಣೆಗಳಲ್ಲಿಯೂ ಬದಲಾವಣೆಗಳನ್ನೂ ಮಾಡುವ ಅವಶ್ಯಕತೆಯಿದೆ ಎಂದು ಅವರು ಹೇಳುತ್ತಾರೆ.

1982 ರಲ್ಲಿ ಬಾಂಬೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿರುವ ರೋಹಿಣಿ, ನಂತರ 1995 ರಲ್ಲಿ ಐಐಎಸ್ಸಿಯಲ್ಲಿ ಸಹಾಯಕ ಪ್ರಾಧ್ಯಾಪಕರಾದರು. ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ತಮ್ಮ ವೃತ್ತಿಜೀವನದಲ್ಲಿ ವಿವಿಧ ವೈಜ್ಞಾನಿಕ ವಿಷಯಗಳ ಬಗ್ಗೆ 100 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ. ಸಿಇಆರ್ಎನ್‌ನ ಯುರೋಪಿಯನ್ ಆರ್ಗನೈಸೇಶನ್ ಫಾರ್ ನ್ಯೂಕ್ಲಿಯರ್ ರಿಸರ್ಚ್‌ನಲ್ಲಿ ಅವರು ನೀಡಿದ ಕೊಡುಗೆ ಅವರನ್ನು ಹೆಚ್ಚು ಜನಪ್ರಿಯರನ್ನಾಗಿಸಿದೆ.


ಇದನ್ನೂ ಓದಿ: ಇಂದಿರಾ ಗಾಂಧಿ ಜನ್ಮದಿನ: ಮಹಿಳೆಯರಿಗಾಗಿ ಉಚಿತ ಮೊಬೈಲ್ ಕ್ಲಿನಿಕ್ ಆರಂಭಿಸಿದ ಚತ್ತೀಸ್‌ಗಢ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...