Homeಮುಖಪುಟವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕ ಹೆಚ್ಚಳಕ್ಕೆ ಫ್ರೆಟರ್ನಿಟಿ ಮೂವ್ಮೆಂಟ್ ಖಂಡನೆ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕ ಹೆಚ್ಚಳಕ್ಕೆ ಫ್ರೆಟರ್ನಿಟಿ ಮೂವ್ಮೆಂಟ್ ಖಂಡನೆ

ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕಗಳನ್ನು ಭರಿಸಲು ಆರ್ಥಿಕ ಶಕ್ತಿ ಇಲ್ಲದೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಉಳ್ಳವರಿಗೆ ಮಾತ್ರ ಸೀಮಿತವಾಗುತ್ತದೆ ಎಂದು ಹೇಳಿಕೆ ತಿಳಿಸಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರ್ಕಾರವು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್​ಗಳ ಶುಲ್ಕವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸುವುದನ್ನು ಫ್ರೆಟರ್ನಿಟಿ ಮೂವ್ಮೆಂಟ್ ಕರ್ನಾಟಕ ತೀವ್ರವಾಗಿ ಖಂಡಿಸಿದೆ.

ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ನಿಝಾಮುಧ್ಥಿನ್ ಪತ್ರಿಕಾ ಹೇಳಿಕೆ ನೀಡಿದ್ದು, ಸರ್ಕಾರದ ವಿದ್ಯಾರ್ಥಿ ವಿರೋಧಿ ಧೋರಣೆಂದಾಗಿ ಶಿಕ್ಷಣದ ವ್ಯಾಪಾರೀಕರಣಕ್ಕೆ ಅವಕಾಶವಾಗುತ್ತಿದೆ. ಕೊರೊನಾ ಲಾಕ್‌ಡೌನ್‌ನಿಂದ ಜನರು ಸಾಕಷ್ಟು ಬಳಲಿರುವಾಗ ಸರ್ಕಾರ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ. ಕೂಡಲೇ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

2020-21 ಸಾಲಿಗೆ ಅನ್ವಯವಾಗುವಂತೆ ಖಾಸಗಿ ಕೋಟಾದಡಿಯಲ್ಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಕ್ಲಿನಿಕಲ್‌ ಸೀಟುಗಳಿಗೆ ಶೇ 30% ಅಂದರೆ ಈಗಿರುವ ರೂ 8.7 ಲಕ್ಷದಿಂದ ರೂ 11.5 ಲಕ್ಷದವರೆಗೆ ಹೆಚ್ಚಳವಾಗಿದೆ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟಿನ ಶುಲ್ಕವನ್ನು ಶೇ 20% ಅಂದರೆ ರೂ 5.8 ಲಕ್ಷದಿಂದ ರೂ 7.13 ಲಕ್ಷವರೆಗೆ ಹೆಚ್ಚಿಸಲಾಗಿದೆ.

ಇದೇ ಸಂದರ್ಭದಲ್ಲಿ ರಾಜ್ಯದ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳ ಶಿಷ್ಯ ವೇತನ ಇತರೆ ರಾಜ್ಯಗಳಿಗೆ ಹೋಲಿಸಿದರೆ ತುಂಬಾ ಕಡಿಮೆಯಿದೆ. ಈ ಕಡಿಮೆ ಶಿಷ್ಯ ವೇತನವೂ ಸಹ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ಸೀಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ಭರಿಸಲು ಶಿಕ್ಷಣದ ಸಾಲುಗಳನ್ನು ಪಡೆದುಕೊಳ್ಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಲಾಕ್ ಡೌನ್ ಜಾರಿ ಈ ಇರುವುದರಿಂದ ತೀವ್ರ ಆರ್ಥಿಕ ಸಂಕಷ್ಟಗಳಿಂದ ಜನರು ನರಳುತ್ತಿದ್ದಾರೆ. ಈ ಕೊರೋನಾ ಲಾಕ್ ಡೌನ್ ಸಂದರ್ಭವನ್ನು ಸರ್ಕಾರ ಶುಲ್ಕ ಹೆಚ್ಚಳ ಮಾಡಲು ದುರ್ಬಳಕೆ ಮಾಡಿಕೊಂಡು (ಇಂತಹ ಸಮಯದಲ್ಲಿ ವಿದ್ಯಾರ್ಥಿ ಸಮುದಾಯ ಹೋರಾಟ ನಡೆಸಲು ಸಹ ಅವಕಾಶವಿಲ್ಲದಂತಾಗಿದೆ.) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಶುಲ್ಕ ಹೆಚ್ಚಿಸಿ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಲಾಗಿದೆ.

ಪ್ರತಿವರ್ಷವೂ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ಏರಿಕೆ ಮಾಡುತ್ತಿದೆ ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕಗಳನ್ನು ಭರಿಸಲು ಆರ್ಥಿಕ ಶಕ್ತಿ ಇಲ್ಲದೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಉಳ್ಳವರಿಗೆ ಮಾತ್ರ ಸೀಮಿತಗೊಳಿಸುವ ನೀತಿಯನ್ನು ಅನುಸರಿಸುತ್ತಿರುವುದು ದೇಶದ ಭವಿಷ್ಯಕ್ಕೆ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಲಾಗಿದೆ.

ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಶಿಕ್ಷಣದ ನೀಡಲು ಶುಲ್ಕ ಇಳಿಸಲು ಮುಂದಾಗಬೇಕು. ಸರ್ಕಾರಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಹಾಗೂ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಏಕರೂಪ ಶಾಸನ ಜಾರಿಗೆ ತರಬೇಕು ಎಂದು ಫ್ರೆಟರ್ನಿಟಿ ಮೂವ್ಮೆಂಟ್ ಕರ್ನಾಟಕ ಒತ್ತಾಯಿಸುತ್ತಿದೆ.


ಇದನ್ನೂ ಓದಿ: ಗ್ರಾಮಭಾರತ – 2: ಭದ್ರಾವತಿಗೆ ಬಾರದ ತಮಿಳುನಾಡಿನ ಭತ್ತ ಕಟಾವು ಯಂತ್ರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...