Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಕೂಲಿ ಕಾರ್ಮಿಕರನ್ನು ಕರೆತಂದು ದುಡ್ಡು ಕೊಡದೆ ವಂಚಿಸಿದ್ದ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಮೋದಿಯವರು ಆಗಮಿಸಿದ್ದರು. ಆ ವೇಳೆ ಕರೆತಂದಿದ್ದ ಕಾರ್ಮಿಕರಿಗೆ ಬಾಕಿ ಹಣ ಪಾವತಿಸದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕೂಲಿ ಕಾರ್ಮಿಕರು ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದೀಶ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾರ್ಯಕ್ರಮದ ನಂತರ ಕೇವಲ 100 ರೂ. ನೀಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಜೆಪಿ ವಿರುದ್ಧ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣವನ್ನು ನೀಡಬೇಕೆಂದು ಒತ್ತಾಯಿಸಿದ ಅವರು ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, “ಪ್ರಧಾನಿ ನರೇಂದ್ರಮೋದಿಯವರೇ, ನಿಮ್ಮನ್ನು ಹುರಿದುಂಬಿಸಲೆಂದು ಬಿಜೆಪಿ ನಾಯಕರು ದಿನಕೂಲಿ ಕಾರ್ಮಿಕರಿಗೆ ₹ 500 ನೀಡುವ ಭರವಸೆ ನೀಡಿದ್ದರು. ಆದರೆ ಕೇವಲ ₹ 100 ಪಾವತಿಸಲಾಗಿದೆ. ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಬಿಜೆಪಿ ಸರ್ಕಾರವು 40% ಸರ್ಕಾರವಾಗಿದೆ. ಆದರೆ ಪಕ್ಷದ ಭ್ರಷ್ಟಾಚಾರವು 80% ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ನವೆಂಬರ್ 11 ರಂದು ಅನಾವರಣಗೊಳಿಸಿದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪಾಳೇಗಾರರಾಗಿದ್ದ ಕೆಂಪೇಗೌಡರು 1537ರಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದರು.

ಕೆಂಪೇಗೌಡರು ವಿಶೇಷವಾಗಿ ಹಳೆಯ ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಅಸ್ಮಿತೆಯಾಗಿದ್ದಾರೆ. ಜೊತೆಗೆ ನಾಡಪ್ರಭು ಎಂಬ ಬಿರುದಿಗೆ ಪಾತ್ರರಾಗಿರುವ ಕೆಂಪೇಗೌಡರು ಕನ್ನಡಗರ ಪ್ರೀತಿಪಾತ್ರರೂ ಹೌದು.

ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಹಲವು ಚರ್ಚೆಗಳು ಶುರುವಾಗಿವೆ. ಕಾರ್ಯಕ್ರಮಕ್ಕೆ ಕರೆತಂದಿದ್ದ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂಬ ಟೀಕೆ ಒಂದು ಕಡೆಯಾದರೆ, ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿರಿ: ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೂಲಿಯವರಿಗೂ ಮೋಸ ಮಾಡುಂತಹ ಹೀನಾಯ ಸ್ಥಿತಿಗೆ ಇಳಿದಿದ್ದಾರಲ್ಲ, ಈ ಮನುವಾದಿಗಳು.

  2. ಮೋಸಗಾರರಿಗೆ ಯಾರಾದರೇನು ಕಾರ್ಮಿಕರಾದರೇನು, ಶ್ರೀಮಂತರಾದರೇನು ಅಥವಾ ಭಿಕ್ಷುಕರಾದರೇನು, ಮೋಸ ಮಾಡುವುದೊಂದೇ ಅವರ ಕುಲ ಕಸಬು. ಈ ಬಿಜೆಪಿ ಮೋಸಗಾರರು 40 % ನಿಂದ 80% ಗೆ ತಮ್ಮ ಬೆಲೆ ಹೆಚ್ಚಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...