Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಕೂಲಿ ಕಾರ್ಮಿಕರನ್ನು ಕರೆತಂದು ದುಡ್ಡು ಕೊಡದೆ ವಂಚಿಸಿದ್ದ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಮೋದಿಯವರು ಆಗಮಿಸಿದ್ದರು. ಆ ವೇಳೆ ಕರೆತಂದಿದ್ದ ಕಾರ್ಮಿಕರಿಗೆ ಬಾಕಿ ಹಣ ಪಾವತಿಸದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕೂಲಿ ಕಾರ್ಮಿಕರು ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದೀಶ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾರ್ಯಕ್ರಮದ ನಂತರ ಕೇವಲ 100 ರೂ. ನೀಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಜೆಪಿ ವಿರುದ್ಧ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣವನ್ನು ನೀಡಬೇಕೆಂದು ಒತ್ತಾಯಿಸಿದ ಅವರು ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, “ಪ್ರಧಾನಿ ನರೇಂದ್ರಮೋದಿಯವರೇ, ನಿಮ್ಮನ್ನು ಹುರಿದುಂಬಿಸಲೆಂದು ಬಿಜೆಪಿ ನಾಯಕರು ದಿನಕೂಲಿ ಕಾರ್ಮಿಕರಿಗೆ ₹ 500 ನೀಡುವ ಭರವಸೆ ನೀಡಿದ್ದರು. ಆದರೆ ಕೇವಲ ₹ 100 ಪಾವತಿಸಲಾಗಿದೆ. ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಬಿಜೆಪಿ ಸರ್ಕಾರವು 40% ಸರ್ಕಾರವಾಗಿದೆ. ಆದರೆ ಪಕ್ಷದ ಭ್ರಷ್ಟಾಚಾರವು 80% ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ನವೆಂಬರ್ 11 ರಂದು ಅನಾವರಣಗೊಳಿಸಿದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪಾಳೇಗಾರರಾಗಿದ್ದ ಕೆಂಪೇಗೌಡರು 1537ರಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದರು.

ಕೆಂಪೇಗೌಡರು ವಿಶೇಷವಾಗಿ ಹಳೆಯ ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಅಸ್ಮಿತೆಯಾಗಿದ್ದಾರೆ. ಜೊತೆಗೆ ನಾಡಪ್ರಭು ಎಂಬ ಬಿರುದಿಗೆ ಪಾತ್ರರಾಗಿರುವ ಕೆಂಪೇಗೌಡರು ಕನ್ನಡಗರ ಪ್ರೀತಿಪಾತ್ರರೂ ಹೌದು.

ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಹಲವು ಚರ್ಚೆಗಳು ಶುರುವಾಗಿವೆ. ಕಾರ್ಯಕ್ರಮಕ್ಕೆ ಕರೆತಂದಿದ್ದ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂಬ ಟೀಕೆ ಒಂದು ಕಡೆಯಾದರೆ, ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿರಿ: ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೂಲಿಯವರಿಗೂ ಮೋಸ ಮಾಡುಂತಹ ಹೀನಾಯ ಸ್ಥಿತಿಗೆ ಇಳಿದಿದ್ದಾರಲ್ಲ, ಈ ಮನುವಾದಿಗಳು.

  2. ಮೋಸಗಾರರಿಗೆ ಯಾರಾದರೇನು ಕಾರ್ಮಿಕರಾದರೇನು, ಶ್ರೀಮಂತರಾದರೇನು ಅಥವಾ ಭಿಕ್ಷುಕರಾದರೇನು, ಮೋಸ ಮಾಡುವುದೊಂದೇ ಅವರ ಕುಲ ಕಸಬು. ಈ ಬಿಜೆಪಿ ಮೋಸಗಾರರು 40 % ನಿಂದ 80% ಗೆ ತಮ್ಮ ಬೆಲೆ ಹೆಚ್ಚಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...