Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಕೂಲಿ ಕಾರ್ಮಿಕರನ್ನು ಕರೆತಂದು ದುಡ್ಡು ಕೊಡದೆ ವಂಚಿಸಿದ್ದ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಮೋದಿಯವರು ಆಗಮಿಸಿದ್ದರು. ಆ ವೇಳೆ ಕರೆತಂದಿದ್ದ ಕಾರ್ಮಿಕರಿಗೆ ಬಾಕಿ ಹಣ ಪಾವತಿಸದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕೂಲಿ ಕಾರ್ಮಿಕರು ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದೀಶ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾರ್ಯಕ್ರಮದ ನಂತರ ಕೇವಲ 100 ರೂ. ನೀಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಜೆಪಿ ವಿರುದ್ಧ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣವನ್ನು ನೀಡಬೇಕೆಂದು ಒತ್ತಾಯಿಸಿದ ಅವರು ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, “ಪ್ರಧಾನಿ ನರೇಂದ್ರಮೋದಿಯವರೇ, ನಿಮ್ಮನ್ನು ಹುರಿದುಂಬಿಸಲೆಂದು ಬಿಜೆಪಿ ನಾಯಕರು ದಿನಕೂಲಿ ಕಾರ್ಮಿಕರಿಗೆ ₹ 500 ನೀಡುವ ಭರವಸೆ ನೀಡಿದ್ದರು. ಆದರೆ ಕೇವಲ ₹ 100 ಪಾವತಿಸಲಾಗಿದೆ. ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಬಿಜೆಪಿ ಸರ್ಕಾರವು 40% ಸರ್ಕಾರವಾಗಿದೆ. ಆದರೆ ಪಕ್ಷದ ಭ್ರಷ್ಟಾಚಾರವು 80% ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ನವೆಂಬರ್ 11 ರಂದು ಅನಾವರಣಗೊಳಿಸಿದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪಾಳೇಗಾರರಾಗಿದ್ದ ಕೆಂಪೇಗೌಡರು 1537ರಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದರು.

ಕೆಂಪೇಗೌಡರು ವಿಶೇಷವಾಗಿ ಹಳೆಯ ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಅಸ್ಮಿತೆಯಾಗಿದ್ದಾರೆ. ಜೊತೆಗೆ ನಾಡಪ್ರಭು ಎಂಬ ಬಿರುದಿಗೆ ಪಾತ್ರರಾಗಿರುವ ಕೆಂಪೇಗೌಡರು ಕನ್ನಡಗರ ಪ್ರೀತಿಪಾತ್ರರೂ ಹೌದು.

ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಹಲವು ಚರ್ಚೆಗಳು ಶುರುವಾಗಿವೆ. ಕಾರ್ಯಕ್ರಮಕ್ಕೆ ಕರೆತಂದಿದ್ದ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂಬ ಟೀಕೆ ಒಂದು ಕಡೆಯಾದರೆ, ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿರಿ: ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೂಲಿಯವರಿಗೂ ಮೋಸ ಮಾಡುಂತಹ ಹೀನಾಯ ಸ್ಥಿತಿಗೆ ಇಳಿದಿದ್ದಾರಲ್ಲ, ಈ ಮನುವಾದಿಗಳು.

  2. ಮೋಸಗಾರರಿಗೆ ಯಾರಾದರೇನು ಕಾರ್ಮಿಕರಾದರೇನು, ಶ್ರೀಮಂತರಾದರೇನು ಅಥವಾ ಭಿಕ್ಷುಕರಾದರೇನು, ಮೋಸ ಮಾಡುವುದೊಂದೇ ಅವರ ಕುಲ ಕಸಬು. ಈ ಬಿಜೆಪಿ ಮೋಸಗಾರರು 40 % ನಿಂದ 80% ಗೆ ತಮ್ಮ ಬೆಲೆ ಹೆಚ್ಚಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...