Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಕೂಲಿ ಕಾರ್ಮಿಕರನ್ನು ಕರೆತಂದು ದುಡ್ಡು ಕೊಡದೆ ವಂಚಿಸಿದ್ದ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಮೋದಿಯವರು ಆಗಮಿಸಿದ್ದರು. ಆ ವೇಳೆ ಕರೆತಂದಿದ್ದ ಕಾರ್ಮಿಕರಿಗೆ ಬಾಕಿ ಹಣ ಪಾವತಿಸದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕೂಲಿ ಕಾರ್ಮಿಕರು ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದೀಶ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾರ್ಯಕ್ರಮದ ನಂತರ ಕೇವಲ 100 ರೂ. ನೀಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಜೆಪಿ ವಿರುದ್ಧ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣವನ್ನು ನೀಡಬೇಕೆಂದು ಒತ್ತಾಯಿಸಿದ ಅವರು ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, “ಪ್ರಧಾನಿ ನರೇಂದ್ರಮೋದಿಯವರೇ, ನಿಮ್ಮನ್ನು ಹುರಿದುಂಬಿಸಲೆಂದು ಬಿಜೆಪಿ ನಾಯಕರು ದಿನಕೂಲಿ ಕಾರ್ಮಿಕರಿಗೆ ₹ 500 ನೀಡುವ ಭರವಸೆ ನೀಡಿದ್ದರು. ಆದರೆ ಕೇವಲ ₹ 100 ಪಾವತಿಸಲಾಗಿದೆ. ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಬಿಜೆಪಿ ಸರ್ಕಾರವು 40% ಸರ್ಕಾರವಾಗಿದೆ. ಆದರೆ ಪಕ್ಷದ ಭ್ರಷ್ಟಾಚಾರವು 80% ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ನವೆಂಬರ್ 11 ರಂದು ಅನಾವರಣಗೊಳಿಸಿದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪಾಳೇಗಾರರಾಗಿದ್ದ ಕೆಂಪೇಗೌಡರು 1537ರಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದರು.

ಕೆಂಪೇಗೌಡರು ವಿಶೇಷವಾಗಿ ಹಳೆಯ ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಅಸ್ಮಿತೆಯಾಗಿದ್ದಾರೆ. ಜೊತೆಗೆ ನಾಡಪ್ರಭು ಎಂಬ ಬಿರುದಿಗೆ ಪಾತ್ರರಾಗಿರುವ ಕೆಂಪೇಗೌಡರು ಕನ್ನಡಗರ ಪ್ರೀತಿಪಾತ್ರರೂ ಹೌದು.

ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಹಲವು ಚರ್ಚೆಗಳು ಶುರುವಾಗಿವೆ. ಕಾರ್ಯಕ್ರಮಕ್ಕೆ ಕರೆತಂದಿದ್ದ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂಬ ಟೀಕೆ ಒಂದು ಕಡೆಯಾದರೆ, ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿರಿ: ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೂಲಿಯವರಿಗೂ ಮೋಸ ಮಾಡುಂತಹ ಹೀನಾಯ ಸ್ಥಿತಿಗೆ ಇಳಿದಿದ್ದಾರಲ್ಲ, ಈ ಮನುವಾದಿಗಳು.

  2. ಮೋಸಗಾರರಿಗೆ ಯಾರಾದರೇನು ಕಾರ್ಮಿಕರಾದರೇನು, ಶ್ರೀಮಂತರಾದರೇನು ಅಥವಾ ಭಿಕ್ಷುಕರಾದರೇನು, ಮೋಸ ಮಾಡುವುದೊಂದೇ ಅವರ ಕುಲ ಕಸಬು. ಈ ಬಿಜೆಪಿ ಮೋಸಗಾರರು 40 % ನಿಂದ 80% ಗೆ ತಮ್ಮ ಬೆಲೆ ಹೆಚ್ಚಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...