Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಕೂಲಿ ಕಾರ್ಮಿಕರನ್ನು ಕರೆತಂದು ದುಡ್ಡು ಕೊಡದೆ ವಂಚಿಸಿದ್ದ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಮೋದಿಯವರು ಆಗಮಿಸಿದ್ದರು. ಆ ವೇಳೆ ಕರೆತಂದಿದ್ದ ಕಾರ್ಮಿಕರಿಗೆ ಬಾಕಿ ಹಣ ಪಾವತಿಸದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕೂಲಿ ಕಾರ್ಮಿಕರು ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದೀಶ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾರ್ಯಕ್ರಮದ ನಂತರ ಕೇವಲ 100 ರೂ. ನೀಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಜೆಪಿ ವಿರುದ್ಧ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣವನ್ನು ನೀಡಬೇಕೆಂದು ಒತ್ತಾಯಿಸಿದ ಅವರು ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, “ಪ್ರಧಾನಿ ನರೇಂದ್ರಮೋದಿಯವರೇ, ನಿಮ್ಮನ್ನು ಹುರಿದುಂಬಿಸಲೆಂದು ಬಿಜೆಪಿ ನಾಯಕರು ದಿನಕೂಲಿ ಕಾರ್ಮಿಕರಿಗೆ ₹ 500 ನೀಡುವ ಭರವಸೆ ನೀಡಿದ್ದರು. ಆದರೆ ಕೇವಲ ₹ 100 ಪಾವತಿಸಲಾಗಿದೆ. ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಬಿಜೆಪಿ ಸರ್ಕಾರವು 40% ಸರ್ಕಾರವಾಗಿದೆ. ಆದರೆ ಪಕ್ಷದ ಭ್ರಷ್ಟಾಚಾರವು 80% ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ನವೆಂಬರ್ 11 ರಂದು ಅನಾವರಣಗೊಳಿಸಿದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪಾಳೇಗಾರರಾಗಿದ್ದ ಕೆಂಪೇಗೌಡರು 1537ರಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದರು.

ಕೆಂಪೇಗೌಡರು ವಿಶೇಷವಾಗಿ ಹಳೆಯ ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಅಸ್ಮಿತೆಯಾಗಿದ್ದಾರೆ. ಜೊತೆಗೆ ನಾಡಪ್ರಭು ಎಂಬ ಬಿರುದಿಗೆ ಪಾತ್ರರಾಗಿರುವ ಕೆಂಪೇಗೌಡರು ಕನ್ನಡಗರ ಪ್ರೀತಿಪಾತ್ರರೂ ಹೌದು.

ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಹಲವು ಚರ್ಚೆಗಳು ಶುರುವಾಗಿವೆ. ಕಾರ್ಯಕ್ರಮಕ್ಕೆ ಕರೆತಂದಿದ್ದ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂಬ ಟೀಕೆ ಒಂದು ಕಡೆಯಾದರೆ, ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿರಿ: ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೂಲಿಯವರಿಗೂ ಮೋಸ ಮಾಡುಂತಹ ಹೀನಾಯ ಸ್ಥಿತಿಗೆ ಇಳಿದಿದ್ದಾರಲ್ಲ, ಈ ಮನುವಾದಿಗಳು.

  2. ಮೋಸಗಾರರಿಗೆ ಯಾರಾದರೇನು ಕಾರ್ಮಿಕರಾದರೇನು, ಶ್ರೀಮಂತರಾದರೇನು ಅಥವಾ ಭಿಕ್ಷುಕರಾದರೇನು, ಮೋಸ ಮಾಡುವುದೊಂದೇ ಅವರ ಕುಲ ಕಸಬು. ಈ ಬಿಜೆಪಿ ಮೋಸಗಾರರು 40 % ನಿಂದ 80% ಗೆ ತಮ್ಮ ಬೆಲೆ ಹೆಚ್ಚಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...