Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಕೂಲಿ ಕಾರ್ಮಿಕರನ್ನು ಕರೆತಂದು ದುಡ್ಡು ಕೊಡದೆ ವಂಚಿಸಿದ್ದ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಮೋದಿಯವರು ಆಗಮಿಸಿದ್ದರು. ಆ ವೇಳೆ ಕರೆತಂದಿದ್ದ ಕಾರ್ಮಿಕರಿಗೆ ಬಾಕಿ ಹಣ ಪಾವತಿಸದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕೂಲಿ ಕಾರ್ಮಿಕರು ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದೀಶ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾರ್ಯಕ್ರಮದ ನಂತರ ಕೇವಲ 100 ರೂ. ನೀಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಜೆಪಿ ವಿರುದ್ಧ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣವನ್ನು ನೀಡಬೇಕೆಂದು ಒತ್ತಾಯಿಸಿದ ಅವರು ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, “ಪ್ರಧಾನಿ ನರೇಂದ್ರಮೋದಿಯವರೇ, ನಿಮ್ಮನ್ನು ಹುರಿದುಂಬಿಸಲೆಂದು ಬಿಜೆಪಿ ನಾಯಕರು ದಿನಕೂಲಿ ಕಾರ್ಮಿಕರಿಗೆ ₹ 500 ನೀಡುವ ಭರವಸೆ ನೀಡಿದ್ದರು. ಆದರೆ ಕೇವಲ ₹ 100 ಪಾವತಿಸಲಾಗಿದೆ. ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಬಿಜೆಪಿ ಸರ್ಕಾರವು 40% ಸರ್ಕಾರವಾಗಿದೆ. ಆದರೆ ಪಕ್ಷದ ಭ್ರಷ್ಟಾಚಾರವು 80% ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ನವೆಂಬರ್ 11 ರಂದು ಅನಾವರಣಗೊಳಿಸಿದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪಾಳೇಗಾರರಾಗಿದ್ದ ಕೆಂಪೇಗೌಡರು 1537ರಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದರು.

ಕೆಂಪೇಗೌಡರು ವಿಶೇಷವಾಗಿ ಹಳೆಯ ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಅಸ್ಮಿತೆಯಾಗಿದ್ದಾರೆ. ಜೊತೆಗೆ ನಾಡಪ್ರಭು ಎಂಬ ಬಿರುದಿಗೆ ಪಾತ್ರರಾಗಿರುವ ಕೆಂಪೇಗೌಡರು ಕನ್ನಡಗರ ಪ್ರೀತಿಪಾತ್ರರೂ ಹೌದು.

ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಹಲವು ಚರ್ಚೆಗಳು ಶುರುವಾಗಿವೆ. ಕಾರ್ಯಕ್ರಮಕ್ಕೆ ಕರೆತಂದಿದ್ದ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂಬ ಟೀಕೆ ಒಂದು ಕಡೆಯಾದರೆ, ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿರಿ: ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೂಲಿಯವರಿಗೂ ಮೋಸ ಮಾಡುಂತಹ ಹೀನಾಯ ಸ್ಥಿತಿಗೆ ಇಳಿದಿದ್ದಾರಲ್ಲ, ಈ ಮನುವಾದಿಗಳು.

  2. ಮೋಸಗಾರರಿಗೆ ಯಾರಾದರೇನು ಕಾರ್ಮಿಕರಾದರೇನು, ಶ್ರೀಮಂತರಾದರೇನು ಅಥವಾ ಭಿಕ್ಷುಕರಾದರೇನು, ಮೋಸ ಮಾಡುವುದೊಂದೇ ಅವರ ಕುಲ ಕಸಬು. ಈ ಬಿಜೆಪಿ ಮೋಸಗಾರರು 40 % ನಿಂದ 80% ಗೆ ತಮ್ಮ ಬೆಲೆ ಹೆಚ್ಚಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...